Astrology Image of astrology

Astrology: ಈ ರಾಶಿಯವರು ಹಣಕಾಶಿನ ವ್ಯವಹಾರದಿಂದ ಇಂದು ದೂರ ಇರುವುದು ಉತ್ತಮ

Astrology: ಈ ರಾಶಿಯವರು ಹಣಕಾಶಿನ ವ್ಯವಹಾರದಿಂದ ಇಂದು ದೂರ ಇರುವುದು ಉತ್ತಮ

ಮೇಷ ರಾಶಿ: ಇಂದು ಹೆಚ್ಚಿನ ಆತ್ಮ ವಿಶ್ವಾಸವನ್ನು ಸದುಪಯೋಗ ಪಡಿಸಿಕೊಳ್ಳಲು ಪ್ರಯತ್ನಿಸಿ. ಕೆಲಸದ ಒತ್ತಡದ ನಡುವೆಯೂ ನಿಮ್ಮ ಜ್ಞಾಪಕ ಶಕ್ತಿ ವೃದ್ಧಿಯಾಗಲಿದೆ. ಇಂದು ಯಾವುದೇ ದುಡುಕಿನ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ.(ಭಕ್ತಿಯಿಂದ ಶ್ರೀ ಗ್ರಾಮದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ನಿಮ್ಮ ಮಗುವಿನಂತಹ ಸ್ವಭಾವ ಬೇರೆಯವರಿಗೆ ಅರ್ಥವಾಗುವು ದಿಲ್ಲ.ಜ್ಞಾನ ಮತ್ತು ಅನುಭವವನ್ನು ಇತರರೊಂದಿಗೆ ಹಂಚಿಕೊಂಡರೆ ನಿಮ್ಮ ಜ್ಞಾನ ಮತ್ತ ಷ್ಟು ವೃದ್ಧಿಯಾಗುತ್ತದೆ. ಕಷ್ಟಪಟ್ಟು ಮಾಡುವ ಕೆಲಸ ನಿಮ್ಮನ್ನು ಕೊನೆವರೆಗೂ ಕೈಹಿಡಿಯುತ್ತದೆ.(ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಗಣ್ಯವ್ಯಕ್ತಿಗಳೊಂದಿಗೆ ಸಂವಹನ ನಡೆಸುವುದು ಉತ್ತಮ ಆಲೋಚನೆಗಳು ಮತ್ತು ಯೋಜನೆ ಗಳನ್ನು ತರುತ್ತದೆ. ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿಯನ್ನು ಅನುಸರಿಸಲು ಇಂದು ಉತ್ತಮ ದಿನವಾಗಿದೆ. ಆರ್ಥಿಕ ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರಿ.(ಭಕ್ತಿಯಿಂದ ಶ್ರೀ ಮಾತಾ ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಈ ದಿನ ನಿಮಗೆ ಪ್ರಮುಖವಾಗಿರುತ್ತದೆ. ಜವಳಿ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯಲಿದ್ದು, ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹೂಡಿಕೆ ಮಾಡಬಹುದು. ಉದ್ಯೋಗದಲ್ಲೂ ಯಶಸ್ಸು ಕಾಣುವಿರಿ. ಇದರ ಹೊರತಾಗಿ, ಯಾವುದೇ ಜವಾಬ್ದಾರಿಯುತ ಕೆಲಸ ಕಾರ್ಯಗಳಲ್ಲಿ ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ವ್ಯಾಪಾರಸ್ಥರಿಗೆ ಉತ್ತಮ ದಿನ. ವ್ಯಾಪಾರ ಉದ್ದೇಶಕ್ಕಾಗಿ ಕೈಗೊಂಡ ಹಠಾತ್ ಪ್ರವಾಸವು ಧನಾತ್ಮಕ ಫಲಿತಾಂಶ ಗಳನ್ನು ನೀಡುತ್ತದೆ. ವಿದೇಶಗಳೊಂದಿಗೆ ಸಂಬಂಧ ಹೊಂದಿರುವ ವ್ಯಾಪಾರಿಗಳು ಮತ್ತು ಉದ್ಯಮಿಗಳು ಇಂದು ಹಣಕಾಸಿನ ವ್ಯವಹಾರಕ್ಕೆ ಅನುಗುಣವಾಗಿ ಯಾವುದೇ ಹೆಜ್ಜೆ ಮುಂದಿಡುವ ಮೊದಲು ಎಚ್ಚರಿಕೆಯಿಂದ ಯೋಚಿಸಿ ಮತ್ತು ವ್ಯವಹಾರದಲ್ಲಿ ಜಾಗರೂಕರಾಗಿರಿ.(ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ವ್ಯಾಪಾರ ಅಥವಾ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಸ್ವತಂತ್ರವಾಗಿ ಯೋಚಿಸಿ ಮತ್ತು ಹೊಸ ಹೂಡಿಕೆಗಳನ್ನು ಮಾಡಲು ನಿಮ್ಮ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳಿ.(ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಗ್ರಹಗಳು ಮತ್ತು ನಕ್ಷತ್ರಗಳ ಲಾಭದಾಯಕ ಸ್ಥಾನದಿಂದಾಗಿ ಇಂದು ಹಣವನ್ನು ಗಳಿಸಲು ಸಹಾಯವಾಗುತ್ತದೆ. ಜೊತೆಗೆ ಹಲವಾರು ಅವಕಾಶಗಳನ್ನು ಪಡೆಯುತ್ತೀರಿ. ಪ್ರಭಾವಿ ಮತ್ತು ಪ್ರಮುಖ ವ್ಯಕ್ತಿಗಳೊಂದಿಗೆ ನಿಮ್ಮ ಬಾಂಧವ್ಯವನ್ನು ಸುಧಾರಿಸಲು ಅವಕಾಶ ಸಿಗುತ್ತದೆ. ಪ್ರಯತ್ನಗಳನ್ನು ಸರಿಯಾದ ದಿಕ್ಕಿನಲ್ಲಿ ಇರಿಸಿ. (ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ವೈಯಕ್ತಿಕ ವಿಷಯಗಳನ್ನು ಅರ್ಥ ಮಾಡಿಕೊಳ್ಳಲು ನೀವು ಉದಾರ ವಾಗಿರಿ. ವೃತ್ತಿ ಕ್ಷೇತ್ರದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಲು ಏಕಾಗ್ರತೆಯಿಂದ ಕೆಲಸ ಕಾರ್ಯಗಳನ್ನು ಮಾಡಿ.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ನಿಮ್ಮ ಕಠಿಣ ಪರಿಶ್ರಮ ಕೈ ಹಿಡಿಯಲಿದೆ. ಇಂದು ನಿಮಗೆ ಕೆಲವು ಆರ್ಥಿಕ ಪ್ರತಿಫಲಗಳು ಸಿಗಲಿವೆ. ಇಂದು ಲಾಭದಾಯಕ ದಿನವಾಗಿರುತ್ತದೆ. ಸೆಮಿನಾರ್‌ಗಳು ಮತ್ತು ಪ್ರದರ್ಶನಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕ ಗಳನ್ನು ಒದಗಿಸುತ್ತವೆ.(ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಯಾವುದೇ ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳುವ ಮುನ್ನ ಎರಡು ಬಾರಿ ಯೋಚಿಸಿ. ನಿಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಳ್ಳುವುದರಿಂದ ನೀವು ಪ್ರಯೋಜನ ಪಡೆಯುತ್ತೀರಿ. ಖರ್ಚುವೆಚ್ಚಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿ.(ಭಕ್ತಿಯಿಂದ ಶ್ರೀ ಶಾರದಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಈ ದಿನ ನಿರ್ದಿಷ್ಟ ವಿಷಯದ ಬಗ್ಗೆ ನಿಮ್ಮ ಆಲೋಚನೆ ಬದಲಾಗಬಹುದು. ಇದರೊಂದಿಗೆ, ಆದಾಯವನ್ನು ಹೆಚ್ಚಿಸಲು ಕೆಲವು ಉತ್ತಮ ಅವಕಾಶಗಳನ್ನು ಸಹ ಪಡೆಯಬಹುದು. ಆನ್‌ಲೈನ್ ವಹಿವಾಟಿನಲ್ಲಿ ಜಾಗರೂಕರಾಗಿರಿ. ವಿದ್ಯಾರ್ಥಿಗಳು ವೃತ್ತಿ ಜೀವನದಲ್ಲಿ ಯಶಸ್ಸು ಕಾಣುವರು.(ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಹೊಸ ಕೆಲಸದ ಕಡೆಗೆ ಒಲವು ತೋರುತ್ತೀರಿ. ನಿಮ್ಮ ಶಕ್ತಿ ಮತ್ತು ಧೈರ್ಯದ ಬಲದಿಂದ ಯಶಸ್ಸು ಕಾಣುವಿರಿ,ಯುವಕರು ವೃತ್ತಿಗೆ ಸಂಬಂಧಿಸಿದ ಹೊಸ ಮಾಹಿತಿಯನ್ನು ಪಡೆಯುತ್ತಾರೆ. ಕೆಲಸ ಕಾರ್ಯಗಳಲ್ಲಿ ವಿಸ್ತರಣೆಗೆ ಹಣದ ಅವಶ್ಯಕತೆ ಬರಬಹುದು, ವಿಸ್ತರಣೆಯ ಯೋಚನೆ ಯನ್ನು ಸದ್ಯಕ್ಕೆ ಬಿಡುವುದು ಉತ್ತಮ.(ಭಕ್ತಿಯಿಂದ ಶ್ರೀ ಅಷ್ಟ ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ : ಸಪ್ತಮಿ
ನಕ್ಷತ್ರ : ಮೃಗಶಿರಾ ನಕ್ಷತ್ರ.

ರಾಹುಕಾಲ:03:00PM ರಿಂದ 04:30PM
ಗುಳಿಕಕಾಲ:12:00PM ರಿಂದ 01:30PM
ಯಮಗಂಡಕಾಲ:09:00AM ರಿಂದ 10:30AM

Latest News

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಮುದ್ದೇಬಿಹಾಳ : ಮುಸ್ಲಿಂರ ಹಬ್ಬಕ್ಕೆ ಹಿಂದೂಗಳು ಕೈಜೋಡಿಸುವುದು,ಹಿಂದೂಗಳ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಹಕಾರ ನೀಡುವ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು ಎಂದು ಎಸ್.ಜಿ.ವಿ.ಸಿ ವಿದ್ಯಾಪ್ರಸಾರಕ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ ಹೇಳಿದರು. ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಶನಿವಾರ ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಜಾನಪದ ಕಲೆಗಳನ್ನು ಬಲ್ಲವರು ಗ್ರಾಮೀಣ ಭಾಗದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿದ್ದಾರೆ.ಆದರೆ ಅವರಿಗೆ ಆರ್ಥಿಕ ಶಕ್ತಿ ಇಲ್ಲವಾಗಿದೆ.ಪರಿಷತ್ತಿನ ಮೂಲಕ ಆರ್ಥಿಕ ಶಕ್ತಿ ತುಂಬಲು ಸರ್ಕಾರದ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.      ಏತನ್ಮಧ್ಯೆ ಬಾವಿಗೆ ತಂದೆಯೂ ಜಿಗಿದಿದ್ದಾನೆ ಎಂದು ಹೇಳಲಾಗಿದ್ದು ಆತನ ಶವ ಶೋಧಕ್ಕೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಹಗಲಿರಳು ಕಾರ್ಯಾಚರಣೆ ನಡೆಸಿದ್ದರೂ ಆತನ ಶವ ಪತ್ತೆಯಾಗಿಲ್ಲ.        ಬಾವಿಯಲ್ಲಿ ಮುಳುಗಿ ಮೃತಪಟ್ಟಿರುವ  ಬಾಲಕಿಯರನ್ನು ಹಿರಿಯ ಸಹೋದರಿ ರಕ್ಷಿತಾ ಬರಗಿ(15) ಹಾಗೂ ಕಿರಿಯ ಸಹೋದರಿ ಸಾಕ್ಷಿ ಬರಗಿ(10) ಎಂದು