Astrology: ನಿಮಗೆ ಪ್ರಭಾವಿ ವ್ಯಕ್ತಿಗಳ ಬೆಂಬಲ.. ದಿನ ಭವಿಷ್ಯ: ಮಂಗಳವಾರ, ಆಗಸ್ಟ್ 20, 2024, ದೈನಂದಿನ ರಾಶಿ ಭವಿಷ್ಯ

Astrology: ನಿಮಗೆ ಪ್ರಭಾವಿ ವ್ಯಕ್ತಿಗಳ ಬೆಂಬಲ.. ದಿನ ಭವಿಷ್ಯ: ಮಂಗಳವಾರ, ಆಗಸ್ಟ್ 20, 2024, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಹೆಚ್ಚು ಪ್ರಭಾವಿ ವ್ಯಕ್ತಿಗಳ ಬೆಂಬಲವು ನಿಮ್ಮ ನೈತಿಕತೆಗೆ ದೊಡ್ಡ ಉತ್ತೇಜನವನ್ನು ನೀಡುತ್ತದೆ. ಅನುಭವಿಯೊಂದಿಗೆ ಚರ್ಚಿಸುವ ಮೂಲಕ ಹೂಡಿಕೆ ಮಾಡಿದರೆ ನೀವು ಉತ್ತಮ ಹಣವನ್ನುಗಳಿಸುವಿರಿ. (Astriology) ಸ್ವಂತ ಕೆಲಸವನ್ನು ಆರಂಭಿಸಲು ಚಿಂತಿಸಿ.ಇದು ನಿಮಗೆ ಉತ್ತಮ ಲಾಭವನ್ನು ತಂದುಕೊಡುತ್ತದೆ.ಆದರೆ ಇದರಲ್ಲಿ ನಿಮ್ಮ ಶ್ರಮ ಮತ್ತು ಶ್ರದ್ಧೆ ಮುಖ್ಯವಾಗಿರುತ್ತದೆ.(ಭಕ್ತಿಯಿಂದ ಶ್ರೀ ಉಮಾಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ:ಯಾವುದಾದರು ಕ್ರೀಡೆ ಯಲ್ಲಿ ನಿಮ್ಮನ್ನು ತೊಡಗಿಸಿ ಕೊಳ್ಳಿ. ಶ್ರಮ ವಹಿಸಿ ಕೆಲಸ ಮಾಡುವುದರಿಂದ ಘನತೆ ಗೌರವ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ. ಹಣ ಮತ್ತು ಸಂಪತ್ತು ಸಂಬಂಧಗಳಷ್ಟು ದೊಡ್ಡದಲ್ಲ ಎಂದು ಅರ್ಥಮಾಡಿ ಕೊಳ್ಳಿ.(ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ:ನಿಮ್ಮ ನಿಜವಾದ ಸಾಮಾರ್ಥ್ಯಗಳನ್ನು ಅರಿತುಕೊಳ್ಳಿ. ಏಕೆಂದರೆ ನಿಮಗೆ ಶಕ್ತಿಯ ಕೊರತೆಯಿಲ್ಲ. ಆದರೆ ನಿಮ್ಮ ಶಕ್ತಿಯನ್ನು ನಿಮ್ಮ ಸುತ್ತಲು ಜನ ಅನುಮಾನಿಸುತ್ತಾರೆ.ನಿಮ್ಮ ಶಕ್ತಿ ಸಾಮರ್ಥ್ಯವನ್ನು ಅರ್ಥ ಮಾಡಿಸುವುದು ಉತ್ತಮ.(ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ:ವಿವಿಧ ಮೂಲಗಳಿಂದ ಲಾಭದಾಯಕ ಯೋಗವಿದೆ. ಕೆಲಸದಲ್ಲಿ ಶತ್ರುಗಳು ಹೆಚ್ಚಾಗಬಹುದು.
ಇತರರಿಗೆ ಮನವರಿಕೆ ಮಾಡುವ
ನಿಮ್ಮ ಕೌಶಲ್ಯ ಗುಣ ಉತ್ತಮ ಲಾಭಾಂಶವನ್ನು ನೀಡುತ್ತದೆ.
(ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ:ಹಣ ಹೂಡಿಕೆ ಮತ್ತು ಉಳಿತಾಯದ ಬಗ್ಗೆ ಇಂದು ನಿಮ್ಮ ಕುಟುಂಬದ ಸದಸ್ಯರ ಸಲಹೆ ಪಡೆಯುವುದು ಉತ್ತಮ. ಅವರ ಸಲಹೆಯು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಕೆಲವು ಜನರು ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಿನ ಆಸೆಯನ್ನು ಹೊಂದಿರುತ್ತಾರೆ.(ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ:ನಿಮ್ಮ ಆತ್ಮವಿಶ್ವಾಸದಿಂದ ಸುತ್ತಮುತ್ತಲಿನ ಜನರನ್ನು ಮೆಚ್ಚಿಸುವ ಸಾಧ್ಯತೆಯಿದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮನ್ನು ಸಂಪರ್ಕಿಸುವವರನ್ನು ನಿರ್ಲಕ್ಷಿಸಿ. ಪೋಷಕರ ಮುಂದೆ ಗುಪ್ತವಿಚಾರಗಳನ್ನು ಬಹಿರಂಗಪಡಿಸಲು ಇದು ಸರಿಯಾದ ಸಮಯ.ಯಾವುದೇ ಕೆಲಸ ಕೈಗೊಂಡರೂ ಅದನ್ನು ಸಾಧಿಸಲು ಶ್ರಮಿಸುವಿರಿ.(ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.) (Astrology)

ತುಲಾ ರಾಶಿ: ನಿಮಗೆ ಹಣದ ಅವಶ್ಯಕತೆ ಇರುವಾಗ ಹಣದ ಬೆಲೆ ನಿಮಗೆ ತಿಳಿಯಲಿದೆ. ಇದರಿಂದ ಯಾವುದೇ ಪ್ರಯೋಜನ ವಾಗುವುದಿಲ್ಲ. ಹಣ ಖರ್ಚು ಮಾಡುವ ಮುನ್ನ ಯೋಚಿಸಿ. ನಿಮ್ಮ ಕುಟುಂಬದ ಸದಸ್ಯರು ನೀಡುವ ಸಲಹೆಯನ್ನು ಅನುಸರಿಸಿ.(ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ನಿಮ್ಮ ಆಕರ್ಷಕ ನಡವಳಿಕೆಯು ಇಂದು ಎಲ್ಲರ ಗಮನ ಸೆಳೆಯುತ್ತದೆ. ಇಲ್ಲಿಯವರೆಗೆ ಹೆಚ್ಚು ಯೋಚಿಸದೆ ಹಣವನ್ನು ಖರ್ಚು ಮಾಡುತ್ತಿದ್ದರೆ ಅದನ್ನು ತಪ್ಪಿಸಿ. ಜೀವನದಲ್ಲಿ ಅದರ ಮಹತ್ವವನ್ನು ಅರ್ಥಮಾಡಿ ಕೊಳ್ಳಿ. ಏಕೆಂದರೆ ತುರ್ತು ಅಗತ್ಯವಿದ್ದಾಗ ನಿಮಗೆ ಹಣದ ಮಹತ್ವ ಅರ್ಥ ವಾಗುತ್ತದೆ.(ಭಕ್ತಿಯಿಂದ ಶ್ರೀ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ:ಸಾಮಾನ್ಯ ಜ್ಞಾನ ಮತ್ತು ತಿಳುವಳಿಕೆಯೊಂದಿಗೆ ನಿಮ್ಮ ನಿರಂತರ ಪ್ರಯತ್ನವು ನಿಮ್ಮ ಯಶಸ್ಸನ್ನು ಅಭಿವೃದ್ಧಿ ಪಡಿಸುತ್ತದೆ. ಇದಕ್ಕಾಗಿ ನಿಮ್ಮ ತಾಳ್ಮೆ ಮುಖ್ಯ ವಾಗುತ್ತದೆ.ಊಹಾಪೋಹ ಅಥವಾ ಅನಿರೀಕ್ಷಿತ ಲಾಭಗಳ ಮೂಲಕ ಹಣಕಾಸಿನ ಸ್ಥಿತಿ ಸುಧಾರಿಸುತ್ತದೆ. (ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಕೆಲಸದಲ್ಲಿ ಶ್ರಮವಹಿಸಿ ಕೆಲಸ ಮಾಡುವುದು ನಿಮ್ಮನ್ನು ಕೊನೆವರೆಗೂ ಕೈ ಹಿಡಿಯುತ್ತದೆ. ನೀವು ಹಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ನ್ಯಾಯಾಲಯವು ಇಂದು ನಿಮ್ಮ ಪರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ.ಇದು ನಿಮಗೆ ಆರ್ಥಿಕವಾಗಿ ಪ್ರಯೋಜನವನ್ನು ನೀಡುತ್ತದೆ.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಕುಂಭ ರಾಶಿ:ಕೆಲಸದ ಕ್ಷೇತ್ರದಲ್ಲಿ ನೀವು ಉತ್ತಮ ಲಾಭವನ್ನು ಪಡೆಯಬಹುದು. ನೀವು ಮಾಡುವ ಯಾವುದೇ ಕೆಲಸವು ತಕ್ಷಣವೇ ಫಲಿತಾಂಶವನ್ನು ನೀಡುತ್ತದೆ. ನೀವು ಮಕ್ಕಳಿಗಾಗಿ ಯಾವುದೇ ಹೂಡಿಕೆ ಅಥವಾ ಆಸ್ತಿಯನ್ನು ತೆಗೆದುಕೊಳ್ಳ ಬಹುದು.(ಭಕ್ತಿಯಿಂದ ಮನೋ ನಿಯಾಮಿಕ ಶ್ರೀರುದ್ರ ದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ:ನೀವು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಹೊಸ ಗುರಿಗಳನ್ನು ಹೊಂದಲು ಈ ದಿನವು ಮಂಗಳ ಕರವಾಗಿದೆ. ಈಗ ಆದಾಯ ಹೆಚ್ಚಿಸುವ ಪ್ರಯತ್ನಗಳು ಸಫಲ ವಾದಂತೆ ಕಾಣುತ್ತಿದೆ.ನೀವು ಹಳೆಯ
ಸಾಲಗಳಿಂದ ಮುಕ್ತರಾಗುತ್ತೀರಿ.(ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ : ಪಾಡ್ಯಮಿ
ನಕ್ಷತ್ರ : ಶತಭಿಷ ನಕ್ಷತ್ರ.

ರಾಹುಕಾಲ:03:00PM ರಿಂದ 04:30PM
ಗುಳಿಕಕಾಲ:12:00PM ರಿಂದ 01:30PM
ಯಮಗಂಡಕಾಲ:09:00AM ರಿಂದ 10:30AM

Latest News

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ ಮಂಜೂರಾತಿಯಾಗಿದ್ದು ಅದನ್ನು ಕೂಡಲೇ ಕಾರ್ಯಾರಂಭಗೊಳಿಸಲು ಕ್ರಮ ಜರುಗಿಸುವಂತೆ ಮುದ್ದೇಬಿಹಾಳದ ಜನಸೇವಾ ಸಂಸ್ಥೆಯ ಪದಾಧಿಕಾರಿಗಳು ಬೆಳಗಾವಿ ಐಜಿಪಿ ಸಂದೀಪ್ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಐಜಿಪಿ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.ಈ ವೇಳೆ ಮಾತನಾಡಿದ ಜನಸೇವಾ ಸಂಸ್ಥೆಯ ಅಧ್ಯಕ್ಷ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ ಸಂಬoಧಿಸಿದoತೆ ಮಹತ್ವದ ಸುಳಿವು ದೊರಕಿದ್ದು ಶೀಘ್ರದಲ್ಲಿ ಪ್ರಕರಣವನ್ನು ಬೇಧಿಸಲಾಗುವುದು ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ ಪಾಟೀಲ್ ಹೇಳಿದರು. ತಾಲ್ಲೂಕಿನ ಬಸರಕೋಡ ಗ್ರಾಮದ ಐತಿಹಾಸಿಕ ಶ್ರೀ ಪವಾಡ ಬಸವೇಶ್ವರ ದೇವಾಲಯಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು ದೇವಸ್ಥಾನದ ಕರ್ತೃಗದ್ದುಗೆ ಮೇಲಿನ 32 ಕೆಜಿ ಬೆಳ್ಳಿಯ ಕವಚ ಕಳ್ಳತನ ಪ್ರಕರಣದ ಕುರಿತು ವಿಜಯಪುರ ಎಸ್ಪಿ