ಯುವತಿ ಬೆತ್ತಲೆಗೊಳಿಸಿ ಹಲ್ಲೆ: ಐವರು ಮಂಗಳಮುಖಿಯರ ಬಂಧನ

ಯುವತಿ ಬೆತ್ತಲೆಗೊಳಿಸಿ ಹಲ್ಲೆ: ಐವರು ಮಂಗಳಮುಖಿಯರ ಬಂಧನ

ವಿಜಯಪುರ: ನಗರದಲ್ಲಿ ಮಂಗಳಮುಖಿಯೊಬ್ಬರನ್ನು ಸಾರ್ವಜನಿಕರ ಎದುರಲ್ಲೇ ವಿವಸ್ತ್ರಗೊಳಿಸಿ, ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ, ಅಮಾನವೀಯವಾಗಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.


‘ಹಲ್ಲೆಗೊಳಗಾಗಿರುವ ಸಂತ್ರಸ್ತೆಯು ಮಂಗಳಮುಖಿಯಲ್ಲ, ಯುವತಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ತೃತೀಯಲಿಂಗಿಗಳನ್ನು ಬಂಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ತಿಳಿಸಿದರು.

ತೃತೀಯ ಲಿಂಗಿಗಳಾದ ಕೊಪ್ಪಳ ಜಿಲ್ಲೆ ಕಾರಟಗಿ ತಾಲ್ಲೂಕಿನ ಬಸವಣ್ಣ ಕ್ಯಾಂಪಿನ ಜಿ.ಹುಲಗೆಮ್ಮ(26), ಮಹಾರಾಷ್ಟ್ರ ರಾಜ್ಯದ ಲಾತೂರು ಜಿಲ್ಲೆಯ ಸತಾಳ ಗ್ರಾಮದ ಕವಿತಾ(26), ಯಾದಗಿರಿ ಜಿಲ್ಲೆ ನಾರಾಯಣಪುರದ ಮಹಾನಮ್ಮ(48), ವಿಜಯಪುರ ಜಿಲ್ಲೆ ತಾಳಿಕೋಟೆ ತಾಲ್ಲೂಕು ಕೊಣ್ಣೂರಿನ ಅಶ್ವಿನಿ(23) ಹಾಗೂ ಯಾದಗಿರಿ ಜಿಲ್ಲೆ ಗದ್ದೆಮ್ಮಕಟ್ಟೆಯ ಬಸಮ್ಮ(28) ಎಂಬುವವರನ್ನು ಬಂಧಿಸಲಾಗಿದ್ದು, ಇನ್ನೊಬ್ಬ ತೃತೀಯ ಲಿಂಗಿ ಪರಾರಿಯಾಗಿರುವುದಾಗಿ ಅವರು ಹೇಳಿದರು.

ಬಂಧಿತ ಎಲ್ಲ ಆರೋಪಿಗಳು ಸದ್ಯ ಮಹಾರಾಷ್ಟ್ರದ ಪುಣೆಯಲ್ಲಿ ನೆಲೆಸಿದ್ದು, ಅಲ್ಲಿಂದ ಬಂದು ಈ ಕೃತ್ಯ ಎಸಗಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ವಿಜಯಪುರ ನಗರದ ಲಲಿತ್‌ ಮಹಲ್‌ ಹೋಟೆಲ್‌ ಎದುರು ಜೂನ್‌ 21ರಂದು ಪ್ರಕರಣ ನಡೆದಿತ್ತು. ಆದರೆ, ಈ ಬಗ್ಗೆ ಯಾರೂ ದೂರು ನೀಡಿರಲಿಲ್ಲ. ಪೊಲೀಸರ ಗಮನಕ್ಕೂ ಬಂದಿರಲಿಲ್ಲ ಎಂದರು.

ಜುಲೈ 31ರಂದು ಹಲ್ಲೆ ಪ್ರಕರಣದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ‍ವಿಷಯ ಗಮನಕ್ಕೆ ಬರುತ್ತಿದ್ದಂತೆ ಗೋಳಗುಮ್ಮಟ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ತಂಡ ರಚಿಸಲಾಗಿತ್ತು. ಕೇವಲ 24 ತಾಸಿನೊಳಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಹಲ್ಲೆಗೊಳಗಾದ ಯುವತಿಯು ವಿಜಯಪುರ ಸಮೀಪದ ಅರಕೇರಿ ಗ್ರಾಮದವಳಾಗಿದ್ದು, ಪುಣೆಯಲ್ಲಿ ತೃತೀಯಲಿಂಗಿಗಳ ಜೊತೆಗೆ ಇದ್ದಳು. ಅವರ ನಡುವೆ ವೈಯಕ್ತಿಕ ಕಾರಣಕ್ಕೆ ಭಿನ್ನಾಭಿಪ್ರಾಯ ಉಂಟಾದ ಬಳಿಕ ಯುವತಿಯು ವಿಜಯಪುರಕ್ಕೆ ಮರಳಿದ್ದಾಳೆ. ಆರೋಪಿಗಳು ಹುಡುಕಿಕೊಂಡು ಬಂದು ಹಲ್ಲೆ ನಡೆಸಿ, ವಾಪಸ್‌ ಪುಣೆಗೆ ಪರಾರಿಯಾಗಿದ್ದರು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ತಿಳಿಸಿದರು.

ವ್ಯಾಪಕ ಖಂಡನೆ: ಯುವತಿಯನ್ನು ಬೆತ್ತಲೆಗೊಳಿಸಿ, ಅಮಾನವೀಯವಾಗಿ ಹಲ್ಲೆ ನಡೆಸಿರುವ ದೃಶ್ಯವನ್ನು ಕಂಡು ಸಾರ್ವಜನಿಕರು, ವಿವಿಧ ಸಂಘ,ಸಂಸ್ಥೆಗಳು, ರಾಜಕೀಯ ಪಕ್ಷಗಳ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಆರೋಪಿಗಳಿಗೆ ಉಗ್ರ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ