ಫೆ.22 ರಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅವಾರ್ಡ್ ಎಕ್ಸಾಂ

ಫೆ.22 ರಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅವಾರ್ಡ್ ಎಕ್ಸಾಂ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಗುರಡ್ಡಿ ಪೆಟ್ರೋಲ್ ಪಂಪ್ ಹತ್ತಿರದಲ್ಲಿರುವ ಆಕ್ಸಫರ್ಡ್ಸ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಕ್ಸಫರ್ಡ್ಸ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ
ಫೆ.22 ರಂದು ಬೆಳಗ್ಗೆ 10ಕ್ಕೆ ಆಕ್ಸಫರ್ಡ್ ಚಾಂಪಿಯನ್ ಅವಾರ್ಡ ಪರೀಕ್ಷೆ ಹಾಗೂ ನಾಗರಬೆಟ್ಟದಲ್ಲಿ ಅದೇ ದಿನ ಆಕ್ಸಫರ್ಡ್ ಪಾಟೀಲ್ಸ್ ಸೀನಿಯರ್ ಜೀನಿಯಸ್ ಅವಾರ್ಡ್ ಪರೀಕ್ಷೆಗಳನ್ನು ತರಗತಿವಾರು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಎಂ.ಪಾಟೀಲ ತಿಳಿಸಿದರು.

ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರಾಥಮಿಕ, ಪ್ರೌಢಶಾಲೆಯ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಮುದ್ದೇಬಿಹಾಳದ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪ್ರಸಕ್ತ ವರ್ಷದಿಂದಲೇ ಜೆಇಇ ಪರೀಕ್ಷೆಗೆ ತರಬೇತಿ ಆರಂಭಿಸಲಾಗುತ್ತಿದೆ.ನೀಟ್ ತರಬೇತಿಗೆ ನಾಗರಬೆಟ್ಟದ ಶಾಲೆಯಲ್ಲಿ ಅವಕಾಶ ಕಲ್ಪಿಸಲಾಗುತ್ತಿದೆ.ಈ ವರ್ಷದ ಜೆಇಇ ಪ್ರಥಮ ಹಂತದ ಪರೀಕ್ಷೆಯಲ್ಲಿ ಕಾಲೇಜಿನ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೇ.90ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದು ಅದರಲ್ಲಿ ಮೂವರು ಜಿಲ್ಲೆಗೆ ಪ್ರಥಮ ಮೂರು ಸ್ಥಾನಗಳನ್ನು ಪಡೆದುಕೊಂಡು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ ಎಂದು ತಿಳಿಸಿದರು.

ಪ್ರಾಥಮಿಕ,ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ಚಾಂಪಿಯನ್ ಪರೀಕ್ಷೆ :
ಮುದ್ದೇಬಿಹಾಳದ ಗುರಡ್ಡಿ ಪೆಟ್ರೋಲ್ ಬಂಕ್ ಹತ್ತಿರ ಇರುವ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿರುವ ಪರೀಕ್ಷೆಯಲ್ಲಿ 10 ಲಕ್ಷ ರೂ. ಶಿಷ್ಯವೇತನ ನೀಡಲಾಗುತ್ತದೆ. ಆಕ್ಸಫರ್ಡ್ ಚಾಂಪಿಯನ್ ಪರೀಕ್ಷೆಗೆ 5, 8, 9 ಮತ್ತು 10ನೇ ತರಗತಿಯ ರಾಜ್ಯ, ಐಸಿಎಸ್‌ಇ, ಸಿಬಿಎಸಿ ಪಠ್ಯಕ್ರಮದ ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದಾಗಿದೆ.
ಪರೀಕ್ಷೆಗಳಲ್ಲಿ ತರಗತಿವಾರು 1-5 ರ‍್ಯಾಂಕ್ ಪಡೆಯುವವರಿಗೆ ಒಂದು ವರ್ಷದ ಸಂಪೂರ್ಣ ಉಚಿತ ಶಿಕ್ಷಣ ಕೊಡಲಾಗುತ್ತದೆ. 6-7 ರ‍್ಯಾಂಕ್ ಪಡೆಯುವವರಿಗೆ ಶುಲ್ಕದಲ್ಲಿ ಶೇ.75ರಷ್ಟು, 8-9 ರ‍್ಯಾಂಕ್ ಪಡೆಯುವವರಿಗೆ ಶುಲ್ಕದಲ್ಲಿ ಶೇ.50 ರಷ್ಟು, 10-11 ರ‍್ಯಾಂಕ್ ಪಡೆಯುವವರಿಗೆ ಶುಲ್ಕದಲ್ಲಿ ಶೇ.25 ರಿಯಾಯಿತಿ ನೀಡಲಾಗುತ್ತದೆ.ನಗದು ಬಹುಮಾನ ಪ್ರಾಥಮಿಕ,ಪ್ರೌಢಶಾಲಾ ವಿಭಾಗಕ್ಕೆ ಇರುವುದಿಲ್ಲ ಎಂದು ತಿಳಿಸಿದರು.ಪರೀಕ್ಷೆಯಲ್ಲಿ ಶೇ 40 ಅಂಕ ಗಳಿಸುವ ಎಲ್ಲ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಶೇ 10 ರಿಯಾಯಿತಿ ಇದೆ.ಆಸಕ್ತರು ಮೊ:8792156682 ಸಂಖ್ಯೆಗೆ ತಮ್ಮ ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ ಮೊ:8431936945, 7847981398 ಸಂಖ್ಯೆಗಳನ್ನು ಸಂಪರ್ಕಿಸಬೇಕು ಎಂದು ತಿಳಿಸಿದರು.

ನಾಗರಬೆಟ್ಟದಲ್ಲಿ ಪಿಯು ವಿದ್ಯಾರ್ಥಿಗಳಿಗೆ ಸೀನಿಯರ್ ಜೀನಿಯಸ್ ಪರೀಕ್ಷೆ ವಿವರ :
ನಾಗರಬೆಟ್ಟದ ಗುಡ್ಡದ ಹತ್ತಿರ ಇರುವ ಸೈನ್ಸ್ ಪಿಯು ಕಾಲೇಜಿನಲ್ಲಿ ಫೆ.22 ರಂದು ಬೆಳಗ್ಗೆ 11ಕ್ಕೆ ನಡೆಯುವ ನಗದು ಬಹುಮಾನ ಮತ್ತು ಶಿಷ್ಯವೇತನ ಒಳಗೊಂಡಿರುವ ಆಕ್ಸಫರ್ಡ ಪಾಟೀಲ್ಸ್ ಸೀನಿಯರ್ ಜೀನಿಯಸ್ ಅವಾರ್ಡ್ ಪರೀಕ್ಷೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ ರಾಜ್ಯ, ಐಸಿಎಸ್‌ಇ, ಸಿಬಿಎಸ್‌ಇ ಪಠ್ಯಕ್ರಮದ ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು.
ಬಹುಮಾನದ ವಿವರ : 1 ರಿಂದ 7ನೇ ಸ್ಥಾನ ಪಡೆಯುವವರಿಗೆ ಕ್ರಮವಾಗಿ ತಲಾ 50 ಸಾವಿರ ರೂ. 40 ಸಾವಿರ ರೂ.30 ಸಾವಿರ ರೂ.,20ಸಾವಿರ ರೂ., 10 ಸಾವಿರ ರೂ., ಐದು ಸಾವಿರ ರೂ., 2500 ರೂ.ನಗದು ಪುರಸ್ಕಾರ ನೀಡಲಾಗುತ್ತದೆ. ಇದಲ್ಲದೆ 1-10 ರ‍್ಯಾಂಕ್ ಪಡೆಯುವ ವಿದ್ಯಾರ್ಥಿಗಳಿಗೆ ಒಂದು ವರ್ಷದ ಪ್ರಥಮ ಪಿಯುಸಿ ವಸತಿ ಸಹಿತ ಶಿಕ್ಷಣವನ್ನು ಸಂಪೂರ್ಣ ಉಚಿತವಾಗಿ ನೀಡಲಾಗುತ್ತದೆ ಎಂದು ತಿಳಿಸಿದರು.11-20 ರ‍್ಯಾಂಕ್ ಪಡೆಯುವ ಟಾಪರ್‌ಗಳಿಗೆ ಒಂದು ವರ್ಷದ ಪ್ರಥಮ ಪಿಯುಸಿ ಬೋಧನಾ ಶುಲ್ಕದಲ್ಲಿ ಶೇ 100 ರಿಯಾಯಿತಿ ನೀಡಲಾಗುತ್ತದೆ.

ಪ್ರಶ್ನೆ ಪತ್ರಿಕೆ ಮಾದರಿ:
ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ ವಿಷಯಗಳ ಮೇಲೆ 60 ವಸ್ತುನಿಷ್ಠ ಮಾದರಿಯ ಪ್ರಶ್ನೆಗಳಿದ್ದು ಒಂದು ಘಂಟೆ ಕಾಲಾವಧಿ ಇರುತ್ತದೆ. ಪ್ರತಿ ಪ್ರಶ್ನೆಗೆ 4 ಅಂಕ ಇದ್ದು ತಪ್ಪು ಉತ್ತರಕ್ಕೆ ಒಂದು ಅಂಕ ಕಡಿತಗೊಳಿಸಲಾಗುತ್ತದೆ.

ಆಸಕ್ತರು ವಿದ್ಯಾರ್ಥಿ : ಹೆಸರು-ತರಗತಿ-ಶಾಲೆಯ ಹೆಸರು,ವಿಳಾಸ, ಮೊಬೈಲ್ ಸಂಖ್ಯೆ, ಮಾದರಿಯ ಎಸ್‌ಎಂಎಸ್ ಅಥವಾ ವಾಟ್ಸಪ್ ಸಂದೇಶವನ್ನು ಮೊ:9380095756 ಸಂಖ್ಯೆಗೆ ಕಳಿಸಬಹುದು.ಹೆಚ್ಚಿನ ವಿವರಗಳಿಗೆ ಮೊ:7483147040, 8310035858, 9019460665, 8971769144 ಸಂಖ್ಯೆಗಳನ್ನು ಸಂಪರ್ಕಿಸಲು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ನಿರ್ದೇಶಕ ದರ್ಶನಗೌಡ ಎಂ. ಪಾಟೀಲ, ಶಿಕ್ಷಕರಾದ ರಾಜಶೇಖರ ಹಿರೇಮಠ, ಆನಂದ ನಾವಿ ಇದ್ದರು.

ಬಸ್ ವ್ಯವಸ್ಥೆ: ಎರಡೂ ಪರೀಕ್ಷೆಗಳಿಗೆ ಬರುವ ವಿದ್ಯಾರ್ಥಿಗಳು,ಪಾಲಕರಿಗೆ ಮುದ್ದೇಬಿಹಾಳ ಬಸ್ ನಿಲ್ದಾಣದ ಹತ್ತಿರ ಶಾಲೆಯಿಂದಲೇ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ