ಒಳಮೀಸಲಾತಿ ಜಾರಿಗೆ ಜಾಗೃತಿ ರ‍್ಯಾಲಿ ; ಹೋರಾಟಗಾರ ಅಸ್ವಸ್ಥ-ಆಸ್ಪತ್ರೆಗೆ ದಾಖಲು

ಒಳಮೀಸಲಾತಿ ಜಾರಿಗೆ ಜಾಗೃತಿ ರ‍್ಯಾಲಿ ; ಹೋರಾಟಗಾರ ಅಸ್ವಸ್ಥ-ಆಸ್ಪತ್ರೆಗೆ ದಾಖಲು



ಮುದ್ದೇಬಿಹಾಳ : ತಾಲ್ಲೂಕಿನಲ್ಲಿ ಒಳಮೀಸಲಾತಿ ಹೋರಾಟ ಐಕ್ಯತೆ ಸಮಿತಿ ನೇತೃತ್ವದಲ್ಲಿ ನಡೆದಿರುವ ಜಾಗೃತಿ ರ‍್ಯಾಲಿಯಲ್ಲಿ ಪಾಲ್ಗೊಂಡಿರುವ ಹೋರಾಟಗಾರರಲ್ಲಿ ಇಬ್ಬರು ಹೋರಾಟಗಾರರು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡ ಘಟನೆ ಬುಧವಾರ ನಡೆದಿದೆ.

ತಾಲ್ಲೂಕಿನ ನಾಲತವಾಡ ಪಟ್ಟಣದಿಂದ ಅಡವಿ ಸೋಮನಾಳ ಗ್ರಾಮ ಪಂಚಾಯಿತಿಯಲ್ಲಿ ಬೈಕ್ ರ‍್ಯಾಲಿ ತೆರಳಿದ್ದ ವೇಳೆ ಹೋರಾಟಗಾರ ಮಾರುತಿ ಸಿದ್ದಾಪೂರ ಅವರಿಗೆ ರಕ್ತದೊತ್ತಡದ ಸಮಸ್ಯೆಯಿಂದ ಬಳಲಿ ಅಸ್ವಸ್ಥಗೊಂಡರು.ಅವರನ್ನು ಕೂಡಲೇ ಮುಖಂಡ ಬಸವರಾಜ ಸಿದ್ದಾಪೂರ, ಆನಂದ ದೇವೂರ ಮೊದಲಾದವರು ಅಡವಿ ಸೋಮನಾಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಿAದ ಮುದ್ದೇಬಿಹಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.ಸದ್ಯಕ್ಕೆ ಮಾರುತಿ ಸಿದ್ದಾಪೂರ ಚೇತರಿಸಿಕೊಂಡಿದ್ದಾರೆ.

ಸಮೀತಿಯ ಸಂಚಾಲಕ ತಿಪ್ಪಣ್ಣ ದೊಡಮನಿ(ಗೋನಾಳ) ಅವರಿಗೂ ಬಿಪಿ ಏರುಪೇರು ಆಗಿದ್ದು ವೈದ್ಯರಿಂದ ತಪಾಸಣೆಗೆ ಒಳಗಾಗಿದ್ದಾರೆ.ಸುದ್ದಿಗಾರರೊಂದಿಗೆ ಅಡವಿ ಸೋಮನಾಳ ಸರ್ಕಾರಿ ಆಸ್ಪತ್ರೆಯಲ್ಲಿ ಮಾತನಾಡಿದ ಹೋರಾಟಗಾರ ಬಸವರಾಜ ಸಿದ್ದಾಪೂರ, ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಕಳೆದ ಮೂವ್ವತ್ತು ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಈವರೆಗೂ ಸ್ಪಂದನೆ ಸಿಕ್ಕಿಲ್ಲ. ಸಿಎಂ ಸಿದ್ಧರಾಮಯ್ಯನವರು ಒಳಮೀಸಲಾತಿ ಜಾರಿಗೊಳಿಸಬೇಕು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ನಡೆಯುವ ಹೋರಾಟಗಳಲ್ಲಿ ಪ್ರಾಣಹಾನಿ ಆದಲ್ಲಿ ಅದಕ್ಕೆ ರಾಜ್ಯ ಸರ್ಕಾರ, ಸಿಎಂ ಸಿದ್ಧರಾಮಯ್ಯನವರೇ ಹೊಣೆಗಾರರಾಗಬೇಕಾಗುತ್ತದೆ ಎಂದು ತಿಳಿಸಿದರು.

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಯಲ್ಲಿ ಸಂಚರಿಸುತ್ತಿರುವ ಬೈಕ್ ರ‍್ಯಾಲಿಯು ವಿವಿಧ ಗ್ರಾಮಗಳಲ್ಲಿ ತಮ್ಮ ಜನಾಂಗದವರಿಗೆ ಒಳಮೀಸಲಾತಿ ಸೌಲಭ್ಯ ದೊರೆತರೆ ಅದರಿಂದ ಆಗುವ ಪ್ರಯೋಜನಗಳ ಅರಿವು ಮೂಡಿಸುವ ಹಾಗೂ ಹೋರಾಟ ತೀವ್ರಗೊಳಿಸಲು ಮುಖಂಡರು ಒಳಮೀಸಲಾತಿ ಹೋರಾಟ ಐಕ್ಯತೆ ಸಮಿತಿ ನೇತೃತ್ವದಲ್ಲಿ ಸಂಚರಿಸುತ್ತಿದ್ದಾರೆ.

.

Latest News

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಧಾರವಾಡ, ಜೂನ್‌16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಧಾರವಾಡ, ಜೂನ್‌ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್‌ಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಕ್ರಸ್ಟ್ ಗೇಟ್ ಮೂಲಕ 5 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯೂಸೆಕ್ ಸೇರಿ 8 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಬಸವಸಾಗರಕ್ಕೆ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಒಳಹರಿವು ಸದ್ಯ 20 ಸಾವಿರ ಕ್ಯೂಸೆಕ್‌ನಷ್ಟಿದೆ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ನಾರಾಯಣಪುರ: ನಾರಾಯಣಪುರ ಮಾರ್ಗವಾಗಿ ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಹೊಸ ಬಸ್ ಸಂಚಾರ ಶನಿವಾರ ಯಾದಗಿರಿ ಸಾರಿಗೆ ಡಿಸಿ (ಡಿವಿಜನಲ್ ಕಂಟ್ರೋಲರ್) ಅವರಿಗೆ ಬರೆದ ಮನವಿಯನ್ನು ಸಾರಿಗೆ ನಿಯಂತ್ರಕ ಐ.ಎ ಕರಣಿ ಅವರಿಗೆ ಗ್ರಾಮಸ್ಥರ ಸಲ್ಲಿಸಿದರು. ಈ ವೇಳೆ ಮುಖಂಡ ಸಂಗಮೇಶ ತಾಳಿಕೋಟಿ ಮಾತನಾಡಿ ಜಿಲ್ಲೆಯ ಗಡಿಗ್ರಾಮವಾಗಿರುವನಾರಾಯಣಪುರ ಸೇರಿ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಗ್ರಾಮಸ್ಥರಿಗೆ ರಾತ್ರಿ ವೇಳೆ ನಾರಾಯಣಪುರ ಮಾರ್ಗವಾಗಿ ಬಸ್ಸುಗಳ ಸಂಚಾರ ಇಲ್ಲದೆ