ಅಯ್ಯನಗುಡಿ ಉತ್ಸವಕ್ಕೆ ಅದ್ದೂರಿ ಚಾಲನೆ; ಗಂಗಾಧರೇಶ್ವರ ಕಳಸೋತ್ಸವದ ಭವ್ಯ ಮೆರವಣಿಗೆ

ಅಯ್ಯನಗುಡಿ ಉತ್ಸವಕ್ಕೆ ಅದ್ದೂರಿ ಚಾಲನೆ; ಗಂಗಾಧರೇಶ್ವರ ಕಳಸೋತ್ಸವದ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮೀಪದ ಅಯ್ಯನಗುಡಿ ಗಂಗಾಧರೇಶ್ವರ ಜಾತ್ರೆಯ ಅಂಗವಾಗಿ ಮಂಗಳವಾರ ಪಟ್ಟಣದ ನಾಡಗೌಡ್ರ ದೊಡ್ಡ ಮನೆಯಿಂದ ಪ್ರಮುಖ ಬೀದಿಗಳಲ್ಲಿ ಕಳಸೋತ್ಸವದ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಮೆರವಣಿಗೆಯಲ್ಲಿ ಚಿಕ್ಕಮಗಳೂರಿನ ವೀರಗಾಸೆ ನೃತ್ಯ, ಕೊಟ್ಲೂರಿನ ನಂದಿಧ್ವಜ,ಕoಪ್ಲಿಯ ನಾಸಿಕ್ ಡೋಲು,ಬಳಬಟ್ಟಿ ಗಾರುಡಿ ಕುಣಿತ, ಜಾನಪದ ಹೆಜ್ಜೆಮೇಳ,ನವಿಲು ಕುಣಿತ, ಡೊಳ್ಳು ಕುಣಿತ,ಹಲಗೆ ಮೇಳ,ನಾಲತವಾಡ ಪಟ್ಟಣದ ವಿವಿಧ ಶಾಲೆಯ ಮಕ್ಕಳು ಸ್ತಬ್ಧ ಚಿತ್ರಗಳು , ಲಂಬಾಣಿ ನೃತ್ಯ ಹಾಗೂ ಸ್ಥಳೀಯ ಕಲಾವಿದರು ಮೆರವಣಿಗೆಯಲ್ಲಿ ಸಾಗಿದರು.ಪುರವಂತರು ವಿಶೇಷ ಸೇವೆ ನೀಡಿದರು.

ನಾಡಗೌಡ ಮನೆತನದ ದೊಡ್ಡಬಸವರಾಜ ನಾಡಗೌಡರ,ಪ.ಪಂ ಸದಸ್ಯ ಪೃಥ್ವಿರಾಜ ನಾಡಗೌಡರ,ಗಂಗಾಧರ ನಾಡಗೌಡರ,ರಕ್ಕಸಗಿ ಗ್ರಾಪಂ ಅಧ್ಯಕ್ಷ ರಿತೇಶ ನಾಡಗೌಡರ ಮೆರವಣಿಗೆಗೆ ಚಾಲನೆ ನೀಡಿದರು.

ಮುಖಂಡರಾದ ಪ್ರೊ.ಬಲವಂತ ಉಣ್ಣಿಬಾವಿ, ಹಣಮಂತ ಕುರಿ, ಶಿವಪ್ಪ ತಾತರೆಡ್ಡಿ,ಉಮರ ಮೂಲಿಮನಿ, ಮಹಾಂತೇಶ ಗಂಗನಗೌಡರ,ಸoಗಮೇಶ ಗಂಗನಗೌಡರ,ಪಟ್ಟಣ ಪಂಚಾಯಿತಿ ಅಧ್ಯಕ್ಷೆ v.s.ಇಲಕಲ್ ಇದ್ದರು.
ಮುದ್ದೇಬಿಹಾಳ : ತಾಲ್ಲೂಕಿನ

Latest News

ಅಂಗಡಿಯಾತನಿಗೆ ಗನ್ ತೋರಿಸಿ ಹಾಡಹಗಲೇ ಬಂಗಾರದ ಅಂಗಡಿ ದರೋಡೆ

ಅಂಗಡಿಯಾತನಿಗೆ ಗನ್ ತೋರಿಸಿ ಹಾಡಹಗಲೇ ಬಂಗಾರದ ಅಂಗಡಿ ದರೋಡೆ

ವಿಜಯಪುರ : ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದ ಭೂಮಿಕಾ ಜ್ಯುವೆಲ್ಲರಿ ಶಾಪ್‌ಗೆ ಇಬ್ಬರು

ಅರಣ್ಯ ಇಲಾಖೆ ಅಧಿಕಾರಿಗಳ ಸ್ಪಷ್ಟನೆ;                      ಮದರಿಯಲ್ಲಿ ಚಿರತೆ ಪ್ರತ್ಯಕ್ಷ ಫೋಟೋ ಅಸಲಿ ಅಲ್ಲ..!!

ಅರಣ್ಯ ಇಲಾಖೆ ಅಧಿಕಾರಿಗಳ ಸ್ಪಷ್ಟನೆ; ಮದರಿಯಲ್ಲಿ ಚಿರತೆ ಪ್ರತ್ಯಕ್ಷ ಫೋಟೋ ಅಸಲಿ ಅಲ್ಲ..!!

ಮುದ್ದೇಬಿಹಾಳ : ಸಾಮಾಜಿಕ ಜಾಲತಾಣಗಳ ಮೂಲಕ ಮದರಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದೆ ಎನ್ನಲಾದ ಫೋಟೋ

ಸಾಂಸ್ಕೃತಿಕ ಕಾರ್ಯಕ್ರಮ:ಉರ್ದು ಹೆಣ್ಣು ಮಕ್ಕಳ ಶಾಲೆಗೆ ಪ್ರಥಮ

ಸಾಂಸ್ಕೃತಿಕ ಕಾರ್ಯಕ್ರಮ:ಉರ್ದು ಹೆಣ್ಣು ಮಕ್ಕಳ ಶಾಲೆಗೆ ಪ್ರಥಮ

ಮುದ್ದೇಬಿಹಾಳ ; ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸರಕಾರಿ

ಮೊಬೈಲ್‌ನಲ್ಲಿ ಒಳ್ಳೆಯದನ್ನೇ ವಿದ್ಯಾರ್ಥಿಗಳು ಗ್ರಹಿಸಿ-ಚಾಲಕ್

ಮೊಬೈಲ್‌ನಲ್ಲಿ ಒಳ್ಳೆಯದನ್ನೇ ವಿದ್ಯಾರ್ಥಿಗಳು ಗ್ರಹಿಸಿ-ಚಾಲಕ್

ಮುದ್ದೇಬಿಹಾಳ : ಸ್ವಾತಂತ್ರö್ಯಕ್ಕಾಗಿ ಮಡಿದ ಮಹನೀಯರ ತ್ಯಾಗ ಬಲಿದಾನದ ಸ್ಮರಣೆ ಮಾಡುವ ಕಾರ್ಯ ಆಗಬೇಕು.ಜಾತಿ,

ಶಿಕ್ಷಕ,ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ;                                                ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದು ಬೇಡ-ನಾಗರಳ್ಳಿ

ಶಿಕ್ಷಕ,ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ; ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದು ಬೇಡ-ನಾಗರಳ್ಳಿ

ಮುದ್ದೇಬಿಹಾಳ : ನಾವು ಶಿಕ್ಷಣ ಕೊಡುವ ನೆಪದಲ್ಲಿ ನಮ್ಮ ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುತ್ತಿದ್ದೇವೆ.ಅವರು ಆಟಗಳಲ್ಲಿ ಭಾಗಿಯಾಗುವ ಸಮಯವನ್ನು ಕಡಿಮೆಗೊಳಿಸಿದ್ದೇವೆ.ಶೇ.95 ಪಡೆದುಕೊಂಡರೂ ಮಗುವಿಗೆ ಪ್ರೋತ್ಸಾಹಿಸದೇ ಶೇ.98 ತಗೆದುಕೊಳ್ಳುವವರೆಗೂ ನಮಗಿಂದು ಸಮಾಧಾನ ಇರುವುದಿಲ್ಲ.ಅಂಕಗಳ ಬೆನ್ನು ಹತ್ತಿದ್ದೇವೆ ಎಂದು ಗದಗನ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಎ.ಎನ್.ನಾಗರಳ್ಳಿ ಹೇಳಿದರು. ಪಟ್ಟಣದ ಶ್ರೀ ಕೃಷ್ಣ ಮಂಗಲಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದಿoದ ಸಾವಿತ್ರಿಬಾಯಿ ಫುಲೆ ಜಯಂತಿ ಹಾಗೂ ಶೈಕ್ಷಣಿಕ

ವಿಜಯಪುರ ಡಿಡಿಪಿಐ ಕಚೇರಿ 14 ಸಿಬ್ಬಂದಿ ಎತ್ತಂಗಡಿ..!

ವಿಜಯಪುರ ಡಿಡಿಪಿಐ ಕಚೇರಿ 14 ಸಿಬ್ಬಂದಿ ಎತ್ತಂಗಡಿ..!

ವಿಜಯಪುರ : ಧಾರವಾಡದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯಿಂದ ಅ.3 , 2025 ರಿಂದ ಅ.6,2025ರವರೆಗೆ ವಿಜಯಪುರ ಶಾಲಾ ಶಿಕ್ಷಣ ಇಲಾಖೆಯ ಕಚೇರಿ ತಪಾಸಣೆ ನಡೆಸಿದಾಗ ಸಾರ್ವಜನಿಕರ ಕೆಲಸಗಳನ್ನು ವಿಳಂಬವಾಗಿ ಮಾಡುತ್ತಿದ್ದ 14 ಜನ ಸಿಬ್ಬಂದಿಯನ್ನು ಬೇರೆಡೆ ಎತ್ತಂಗಡಿ ಮಾಡಿ ಧಾರವಾಡದ ಅಪರ ಆಯುಕ್ತರು ಆದೇಶಿಸಿರುವ ಸಂಗತಿ ಬೆಳಕಿಗೆ ಬಂದಿದೆ. ಯಾಕೆ ಎತ್ತಂಗಡಿ : ವಿಜಯಪುರ ಡಿಡಿಪಿಐ ಕಚೇರಿಗೆ ಧಾರವಾಡದ ಆಯುಕ್ತರು ಭೇಟಿ ನೀಡಿದ್ದ ವೇಳೆ ಪತ್ರಾಂಕಿತ