B.Ed ineligible to become a primary school teacher, Supreme Court says

ಇವರು ಪ್ರಾಥಮಿಕ‌‌ ಶಾಲಾ ಶಿಕ್ಷಕರಾಗಲು ಅನರ್ಹರು ಎಂದ ಸುಪ್ರಿಂ ಕೋರ್ಟ್.. ಇದು ಕರ್ನಾಟಕಕ್ಕೂ ಅನ್ವಯಿಸುತ್ತಾ..?

ಇವರು ಪ್ರಾಥಮಿಕ‌‌ ಶಾಲಾ ಶಿಕ್ಷಕರಾಗಲು ಅನರ್ಹರು ಎಂದ ಸುಪ್ರಿಂ ಕೋರ್ಟ್.. ಇದು ಕರ್ನಾಟಕಕ್ಕೂ ಅನ್ವಯಿಸುತ್ತಾ..?

ದೆಹಲಿ: ಪ್ರಾಥಮಿಕ ಶಾಲೆಯ (1ರಿಂದ 5 ತರಗತಿ) ಶಿಕ್ಷಕರಾಗಲು ಬಿಇಡ್ ಪದವಿದರರು ಅನರ್ಹರು. ಡಿಇಡ್ ಕೋರ್ಸ್ ಮುಗಿಸಿದವರು ಮಾತ್ರ ಅರ್ಹರು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಇನ್ನು ಮುಂದೆ ಕೇಂದ್ರ ಸರ್ಕಾರ ನಡೆಸುವ ನೇಮಕಾತಿಗೆ ಈ ನಿಯಮ ಅನ್ವಯ ಆಗಬಹುದು. ಆದರೆ, ಶಿಕ್ಷಣವು ಸಹವರ್ತಿ ಪಟ್ಟಿಯಲ್ಲಿ ಇರುವುದರಿಂದ ರಾಜ್ಯಗಳು ಈ ನಿಯಮ ಪಾಲಿಸುತ್ತವೆ ಎಂದು ಹೇಳುವುದು ಕಷ್ಟ ಸಾಧ್ಯ.

ಕರ್ನಾಟಕದಲ್ಲಿ ಈ ನಿಯಮ ಜಾರಿ ಆಗುತ್ತಾ?

ರಾಜ್ಯದಲ್ಲಿಯೂ ಈ ಕುರಿತು ಶಿಕ್ಷಣ ವಲಯದಲ್ಲಿ ಚರ್ಚೆಗಳೂ ಜೋರಾಗಿವೆ. ಏತನ್ಮಧ್ಯೆ, ಒಂದು ವೇಳೆ ಒಂದರಿಂದ ಐದನೇ ತರಗತಿಯ ಶಿಕ್ಷಕ ನೇಮಕಾತಿಗೆ ರಾಜ್ಯ ಸರ್ಕಾರ ಮುಂದಾದರೆ ಬಿಇಡ್ ಆದವರಿಗೂ ಅವಕಾಶ ನೀಡಬಹುದು ಎನ್ನಲಾಗುತ್ತಿದೆ. ಇದಕ್ಕೆ ಸಹಕಾರಣವೂ ಇದೆ. ಕೆಇಎ ನಡೆಸುವ ಟಿಇಟಿ ಮೊದಲ ಪರೀಕ್ಷೆಗೆ ಪದವಿ ಮತ್ತು ಬಿಇಡ್ ಆದವರಿಗೂ ಅವಕಾಶ ನೀಡಿರುವುದು.

ಒಂದು ವೇಳೆ ಸುಪ್ರಿಂ ಕೋರ್ಟ್ ನೀಡಿರುವ ತೀರ್ಪು ಪಾಲಿಸಬೇಕು ಎಂದು ರಾಜ್ಯ ಸರ್ಕಾರ ನಿರ್ಧರಿಸಿದರೆ, ಸಿ‌ ಅಂಡ್ ಆರ್ ನಿಯಮ ಬದಲಿಸಿ ಕಾರ್ಯೋನ್ಮಕವಾಗಬೇಕು. ಆದರೆ, ರಾಜ್ಯದ ಶಿಕ್ಷಣ ವಲಯವು ಇದಕ್ಕೆ ಮನಸ್ಸು ಮಾಡುವುದಿಲ್ಲ ಎಂಬುವುದು ತಜ್ಞರ ಅಭಿಪ್ರಾಯವಾಗಿದೆ.

ಇದನ್ನೂ ಓದಿ: Road Accident: ಭೀಕರ ಅಪಘಾತದಲ್ಲಿ ಎರಡು ದಿನದ ಹಿಂದೆ ಮದುವೆಯಾಗಿದ್ದ ಮಾನಸ ದುರ್ಮರಣ..! ಪತಿ ಸ್ಥಿತಿ ಗಂಭೀರ

ಒಟ್ಟಾರೆ, ಸುಪ್ರೀಂ ಕೋರ್ಟ್ನ ತೀರ್ಪು ರಾಜ್ಯದ ಶಿಕ್ಷಣದ ಮೇಲೆ ಅಂತಹ ಮಹತ್ವ ಪರಿಣಾಮ ಏನು ಬೀರುವುದಿಲ್ಲ ಎಂಬು ಗಮನಾರ್ಹ ಸಂಗತಿಯಾಗಿದೆ.

Latest News

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಹಶೀಲ್ದಾರ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಅವಳಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡುವಂತೆ ಮಾಜಿ ಶಾಸಕ ಎ.ಎಸ್.ಪಾಟೀಲ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ ಕೆಲಸ ಮಾಡಬೇಕು.ಅದು ಬಿಟ್ಟು ಮೂವ್ವತ್ತು ವರ್ಷಗಳಿಂದ ಹಸಿ ಸುಳ್ಳುಗಳನ್ನೇ ಹೇಳುತ್ತಾ ರಾಜಕಾರಣ ಮಾಡಿಕೊಂಡು ಬಂದಿದ್ದೀರಿ.ಜನ ಇನ್ನು ಮುಂದೆ ನಿಮ್ಮನ್ನು ನಂಬುವುದಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಬರ ಘೋಷಣೆಗೆ ಆಗ್ರಹಿಸಿ ನಡೆದಿರುವ ಬಿಜೆಪಿಯ ಎರಡನೇ ದಿನದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು