Babar Azam: If you get married, go to the farm! Former player's advice to Babar Azam

Babar Azam: ಮದುವೆಯಾದ್ರೆ ಫಾರ್ಮ್​ಗೆ ಬರ್ತಿಯಾ! ಬಾಬರ್ ಆಝಂಗೆ ಮಾಜಿ ಆಟಗಾರನ ಸಲಹೆ

Babar Azam: ಮದುವೆಯಾದ್ರೆ ಫಾರ್ಮ್​ಗೆ ಬರ್ತಿಯಾ! ಬಾಬರ್ ಆಝಂಗೆ ಮಾಜಿ ಆಟಗಾರನ ಸಲಹೆ

ಬೆಂಗಳೂರು: ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನಿರಸ ಪ್ರದರ್ಶನ ತೋರುತ್ತಿರುವ ಬಾಬರ್ ಆಝಂ (Babar Azam) ವಿರುದ್ಧ ಟೀಕೆಗಳು ಕೇಳಿ ಬರುತ್ತಿದ್ದು, ಈ ಟೀಕೆಗಳ ನಡುವೆ ಎಲ್ಲರ ಗಮನ ಸೆಳೆದಿರುವುದು ಪಾಕಿಸ್ತಾನದ ಮಾಜಿ ಆಟಗಾರ ಬಾಸಿತ್ ಅಲಿ ನೀಡಿರುವ ಸಲಹೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಕಳಪೆ ಫಾರ್ಮ್​ನಲ್ಲಿರುವ ಬಾಬರ್ ಮದುವೆಯಾದರೆ ಮತ್ತೆ Babar Azam ಉತ್ತಮ ಫಾರ್ಮ್ ಗೆ ಮರಳಬಹುದು ಎಂದಿದ್ದಾರೆ.

ಬಾಬರ್ ಗೆ ಮದುವೆ ವಯಸ್ಸಾಗಿದ್ದು, ವಿವಾಹವಾಗಲು ಇದು ಸೂಕ್ತ ಸಮಯವಾಗಿದೆ. ಮದುವೆಯಾದರೆ ಎಲ್ಲರೂ ಬದಲಾಗುತ್ತಾರೆ ಎಂಬ ಮಾತಿದೆ. ಹೀಗಾಗಿ, ಕಳಪೆ ಫಾರ್ಮ್ ನಲ್ಲಿರುವ ಬಾಬರ್ ಆಝಂ ಮದುವೆಯಾಗುವುದು ಉತ್ತಮ ಎಂದು ಬಾಸಿತ್ ಅಲಿ ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದಾರೆ.

ಬಾಬರ್ ಆಝಂ ತನ್ನ ಹೆತ್ತವರೊಂದಿಗೆ ಮದುವೆಯ ಕುರಿತು ಮಾತನಾಡಬೇಕು. ವಿವಾಹದ ಬಳಿಕ ನೀವು ವಿಭಿನ್ನ ಬ್ಯಾಟರ್ ಆಗುತ್ತೀರಿ. ವೈಫಲ್ಯಗಳು ಆಟಗಾರನ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುದು ನನಗೆ ತಿಳಿದಿದೆ. ಬಾಬರ್‌ನ ತಂದೆ ತಾಯಿಗೆ ಮದುವೆ ಮಾಡುವಂತೆ ನಾನು ವಿನಂತಿಸುತ್ತೇನೆ ಎಂದು ಬಾಸಿತ್ ಅಲಿ ಇದೇ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ: ಮೂರು ಅಂತಸ್ತಿನ ಕಟ್ಟಡ ಕುಸಿತ: 8 ಮಂದಿ ದುರ್ಮರಣ, 28 ಮಂದಿಗೆ ಗಾಯ..!

ಬಾಬರ್ ಪಾಕಿಸ್ತಾನ್ ಪರ ಟೆಸ್ಟ್‌ನಲ್ಲಿ ಅರ್ಧಶತಕ ಬಾರಿಸಿ ವರ್ಷಗಳೇ ಕಳೆದಿವೆ. 2022 ರಲ್ಲಿ ಕೊನೆಯ ಹಾಫ್ ಸೆಂಚುರಿ ಸಿಡಿಸಿದ್ದ ಬಾಬರ್ ಕಳೆದ 16 ಇನಿಂಗ್ಸ್ ಗಳಲ್ಲಿ ಸತತ ವೈಫಲ್ಯ ಅನುಭವಿಸಿದ್ದಾರೆ. ಅದರಲ್ಲೂ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ 4 ಇನಿಂಗ್ಸ್ ಗಳಿಂದ ಕಲೆಹಾಕಿದ್ದು ಕೇವಲ 62 ರನ್ ಗಳು ಮಾತ್ರ. ಆದ್ದರಿಂದ 29 ವರ್ಷದ ಬಾಬರ್ ಆಝಂ‌ ಮದುವೆಯಾದರೆ ಉತ್ತಮ ಪಾರ್ಮ್ ಗೆ ಮರಳುಬುದು ಎಂದಿದ್ದಾರೆ.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ