Babar Azam: If you get married, go to the farm! Former player's advice to Babar Azam

Babar Azam: ಮದುವೆಯಾದ್ರೆ ಫಾರ್ಮ್​ಗೆ ಬರ್ತಿಯಾ! ಬಾಬರ್ ಆಝಂಗೆ ಮಾಜಿ ಆಟಗಾರನ ಸಲಹೆ

Babar Azam: ಮದುವೆಯಾದ್ರೆ ಫಾರ್ಮ್​ಗೆ ಬರ್ತಿಯಾ! ಬಾಬರ್ ಆಝಂಗೆ ಮಾಜಿ ಆಟಗಾರನ ಸಲಹೆ

ಬೆಂಗಳೂರು: ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನಿರಸ ಪ್ರದರ್ಶನ ತೋರುತ್ತಿರುವ ಬಾಬರ್ ಆಝಂ (Babar Azam) ವಿರುದ್ಧ ಟೀಕೆಗಳು ಕೇಳಿ ಬರುತ್ತಿದ್ದು, ಈ ಟೀಕೆಗಳ ನಡುವೆ ಎಲ್ಲರ ಗಮನ ಸೆಳೆದಿರುವುದು ಪಾಕಿಸ್ತಾನದ ಮಾಜಿ ಆಟಗಾರ ಬಾಸಿತ್ ಅಲಿ ನೀಡಿರುವ ಸಲಹೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಕಳಪೆ ಫಾರ್ಮ್​ನಲ್ಲಿರುವ ಬಾಬರ್ ಮದುವೆಯಾದರೆ ಮತ್ತೆ Babar Azam ಉತ್ತಮ ಫಾರ್ಮ್ ಗೆ ಮರಳಬಹುದು ಎಂದಿದ್ದಾರೆ.

ಬಾಬರ್ ಗೆ ಮದುವೆ ವಯಸ್ಸಾಗಿದ್ದು, ವಿವಾಹವಾಗಲು ಇದು ಸೂಕ್ತ ಸಮಯವಾಗಿದೆ. ಮದುವೆಯಾದರೆ ಎಲ್ಲರೂ ಬದಲಾಗುತ್ತಾರೆ ಎಂಬ ಮಾತಿದೆ. ಹೀಗಾಗಿ, ಕಳಪೆ ಫಾರ್ಮ್ ನಲ್ಲಿರುವ ಬಾಬರ್ ಆಝಂ ಮದುವೆಯಾಗುವುದು ಉತ್ತಮ ಎಂದು ಬಾಸಿತ್ ಅಲಿ ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದಾರೆ.

ಬಾಬರ್ ಆಝಂ ತನ್ನ ಹೆತ್ತವರೊಂದಿಗೆ ಮದುವೆಯ ಕುರಿತು ಮಾತನಾಡಬೇಕು. ವಿವಾಹದ ಬಳಿಕ ನೀವು ವಿಭಿನ್ನ ಬ್ಯಾಟರ್ ಆಗುತ್ತೀರಿ. ವೈಫಲ್ಯಗಳು ಆಟಗಾರನ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುದು ನನಗೆ ತಿಳಿದಿದೆ. ಬಾಬರ್‌ನ ತಂದೆ ತಾಯಿಗೆ ಮದುವೆ ಮಾಡುವಂತೆ ನಾನು ವಿನಂತಿಸುತ್ತೇನೆ ಎಂದು ಬಾಸಿತ್ ಅಲಿ ಇದೇ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ: ಮೂರು ಅಂತಸ್ತಿನ ಕಟ್ಟಡ ಕುಸಿತ: 8 ಮಂದಿ ದುರ್ಮರಣ, 28 ಮಂದಿಗೆ ಗಾಯ..!

ಬಾಬರ್ ಪಾಕಿಸ್ತಾನ್ ಪರ ಟೆಸ್ಟ್‌ನಲ್ಲಿ ಅರ್ಧಶತಕ ಬಾರಿಸಿ ವರ್ಷಗಳೇ ಕಳೆದಿವೆ. 2022 ರಲ್ಲಿ ಕೊನೆಯ ಹಾಫ್ ಸೆಂಚುರಿ ಸಿಡಿಸಿದ್ದ ಬಾಬರ್ ಕಳೆದ 16 ಇನಿಂಗ್ಸ್ ಗಳಲ್ಲಿ ಸತತ ವೈಫಲ್ಯ ಅನುಭವಿಸಿದ್ದಾರೆ. ಅದರಲ್ಲೂ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ 4 ಇನಿಂಗ್ಸ್ ಗಳಿಂದ ಕಲೆಹಾಕಿದ್ದು ಕೇವಲ 62 ರನ್ ಗಳು ಮಾತ್ರ. ಆದ್ದರಿಂದ 29 ವರ್ಷದ ಬಾಬರ್ ಆಝಂ‌ ಮದುವೆಯಾದರೆ ಉತ್ತಮ ಪಾರ್ಮ್ ಗೆ ಮರಳುಬುದು ಎಂದಿದ್ದಾರೆ.

Latest News

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಮುದ್ದೇಬಿಹಾಳ : ಮುಸ್ಲಿಂರ ಹಬ್ಬಕ್ಕೆ ಹಿಂದೂಗಳು ಕೈಜೋಡಿಸುವುದು,ಹಿಂದೂಗಳ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಹಕಾರ ನೀಡುವ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು ಎಂದು ಎಸ್.ಜಿ.ವಿ.ಸಿ ವಿದ್ಯಾಪ್ರಸಾರಕ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ ಹೇಳಿದರು. ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಶನಿವಾರ ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಜಾನಪದ ಕಲೆಗಳನ್ನು ಬಲ್ಲವರು ಗ್ರಾಮೀಣ ಭಾಗದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿದ್ದಾರೆ.ಆದರೆ ಅವರಿಗೆ ಆರ್ಥಿಕ ಶಕ್ತಿ ಇಲ್ಲವಾಗಿದೆ.ಪರಿಷತ್ತಿನ ಮೂಲಕ ಆರ್ಥಿಕ ಶಕ್ತಿ ತುಂಬಲು ಸರ್ಕಾರದ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.      ಏತನ್ಮಧ್ಯೆ ಬಾವಿಗೆ ತಂದೆಯೂ ಜಿಗಿದಿದ್ದಾನೆ ಎಂದು ಹೇಳಲಾಗಿದ್ದು ಆತನ ಶವ ಶೋಧಕ್ಕೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಹಗಲಿರಳು ಕಾರ್ಯಾಚರಣೆ ನಡೆಸಿದ್ದರೂ ಆತನ ಶವ ಪತ್ತೆಯಾಗಿಲ್ಲ.        ಬಾವಿಯಲ್ಲಿ ಮುಳುಗಿ ಮೃತಪಟ್ಟಿರುವ  ಬಾಲಕಿಯರನ್ನು ಹಿರಿಯ ಸಹೋದರಿ ರಕ್ಷಿತಾ ಬರಗಿ(15) ಹಾಗೂ ಕಿರಿಯ ಸಹೋದರಿ ಸಾಕ್ಷಿ ಬರಗಿ(10) ಎಂದು