Babar Azam: If you get married, go to the farm! Former player's advice to Babar Azam

Babar Azam: ಮದುವೆಯಾದ್ರೆ ಫಾರ್ಮ್​ಗೆ ಬರ್ತಿಯಾ! ಬಾಬರ್ ಆಝಂಗೆ ಮಾಜಿ ಆಟಗಾರನ ಸಲಹೆ

Babar Azam: ಮದುವೆಯಾದ್ರೆ ಫಾರ್ಮ್​ಗೆ ಬರ್ತಿಯಾ! ಬಾಬರ್ ಆಝಂಗೆ ಮಾಜಿ ಆಟಗಾರನ ಸಲಹೆ

ಬೆಂಗಳೂರು: ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನಿರಸ ಪ್ರದರ್ಶನ ತೋರುತ್ತಿರುವ ಬಾಬರ್ ಆಝಂ (Babar Azam) ವಿರುದ್ಧ ಟೀಕೆಗಳು ಕೇಳಿ ಬರುತ್ತಿದ್ದು, ಈ ಟೀಕೆಗಳ ನಡುವೆ ಎಲ್ಲರ ಗಮನ ಸೆಳೆದಿರುವುದು ಪಾಕಿಸ್ತಾನದ ಮಾಜಿ ಆಟಗಾರ ಬಾಸಿತ್ ಅಲಿ ನೀಡಿರುವ ಸಲಹೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಕಳಪೆ ಫಾರ್ಮ್​ನಲ್ಲಿರುವ ಬಾಬರ್ ಮದುವೆಯಾದರೆ ಮತ್ತೆ Babar Azam ಉತ್ತಮ ಫಾರ್ಮ್ ಗೆ ಮರಳಬಹುದು ಎಂದಿದ್ದಾರೆ.

ಬಾಬರ್ ಗೆ ಮದುವೆ ವಯಸ್ಸಾಗಿದ್ದು, ವಿವಾಹವಾಗಲು ಇದು ಸೂಕ್ತ ಸಮಯವಾಗಿದೆ. ಮದುವೆಯಾದರೆ ಎಲ್ಲರೂ ಬದಲಾಗುತ್ತಾರೆ ಎಂಬ ಮಾತಿದೆ. ಹೀಗಾಗಿ, ಕಳಪೆ ಫಾರ್ಮ್ ನಲ್ಲಿರುವ ಬಾಬರ್ ಆಝಂ ಮದುವೆಯಾಗುವುದು ಉತ್ತಮ ಎಂದು ಬಾಸಿತ್ ಅಲಿ ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದಾರೆ.

ಬಾಬರ್ ಆಝಂ ತನ್ನ ಹೆತ್ತವರೊಂದಿಗೆ ಮದುವೆಯ ಕುರಿತು ಮಾತನಾಡಬೇಕು. ವಿವಾಹದ ಬಳಿಕ ನೀವು ವಿಭಿನ್ನ ಬ್ಯಾಟರ್ ಆಗುತ್ತೀರಿ. ವೈಫಲ್ಯಗಳು ಆಟಗಾರನ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುದು ನನಗೆ ತಿಳಿದಿದೆ. ಬಾಬರ್‌ನ ತಂದೆ ತಾಯಿಗೆ ಮದುವೆ ಮಾಡುವಂತೆ ನಾನು ವಿನಂತಿಸುತ್ತೇನೆ ಎಂದು ಬಾಸಿತ್ ಅಲಿ ಇದೇ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ: ಮೂರು ಅಂತಸ್ತಿನ ಕಟ್ಟಡ ಕುಸಿತ: 8 ಮಂದಿ ದುರ್ಮರಣ, 28 ಮಂದಿಗೆ ಗಾಯ..!

ಬಾಬರ್ ಪಾಕಿಸ್ತಾನ್ ಪರ ಟೆಸ್ಟ್‌ನಲ್ಲಿ ಅರ್ಧಶತಕ ಬಾರಿಸಿ ವರ್ಷಗಳೇ ಕಳೆದಿವೆ. 2022 ರಲ್ಲಿ ಕೊನೆಯ ಹಾಫ್ ಸೆಂಚುರಿ ಸಿಡಿಸಿದ್ದ ಬಾಬರ್ ಕಳೆದ 16 ಇನಿಂಗ್ಸ್ ಗಳಲ್ಲಿ ಸತತ ವೈಫಲ್ಯ ಅನುಭವಿಸಿದ್ದಾರೆ. ಅದರಲ್ಲೂ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ 4 ಇನಿಂಗ್ಸ್ ಗಳಿಂದ ಕಲೆಹಾಕಿದ್ದು ಕೇವಲ 62 ರನ್ ಗಳು ಮಾತ್ರ. ಆದ್ದರಿಂದ 29 ವರ್ಷದ ಬಾಬರ್ ಆಝಂ‌ ಮದುವೆಯಾದರೆ ಉತ್ತಮ ಪಾರ್ಮ್ ಗೆ ಮರಳುಬುದು ಎಂದಿದ್ದಾರೆ.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ