ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ ಕ್ಷೇತ್ರದಲ್ಲಿ ಏಳ್ಗೆ ಸಾಧಿಸಲು ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಶ್ರಮಿಸಲಿದೆ ಎಂದು ಎಆಯ್‌ಬಿಎಸ್‌ಎಸ್ ಸಂಘದ ಜಿಲ್ಲಾ ಉಪಾಧ್ಯಕ್ಷ ರವಿ ನಾಯಕ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ಮುದ್ದೇಬಿಹಾಳ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಮಾತನಾಡಿದರು.

ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶಿವಾನಂದ ಲಮಾಣಿ ಮಾತನಾಡಿ, ನ.16 ರಂದು ವಿಜಯಪುರದ ಗೋಲ್ಡನ್ ಹೈಟ್ಸ್ ಹೊಟೇಲ್‌ನಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮಕ್ಕೆ ಹಲವಾರು ರಾಜಕೀಯ ಧುರೀಣರು,ಸಂಘದ ಜಿಲ್ಲಾ,ರಾಜ್ಯ ಮುಖಂಡರು ಆಗಮಿಸಲಿದ್ದು ತಾಲ್ಲೂಕಿನಲ್ಲಿ ಆಯ್ಕೆಯಾಗಿರುವ ಎಲ್ಲ ಪದಾಧಿಕಾರಿಗಳು ಆಗಮಿಸುವಂತೆ ತಿಳಿಸಿದರು.

ತಾಲ್ಲೂಕು ಘಟಕದ ನೂತನ ಅಧ್ಯಕ್ಷ ಬಹಾದ್ದೂರ ರಾಠೋಡ ಮಾತನಾಡಿ, ಬಂಜಾರ ಜನಾಂಗದವರ ನೋವು,ನಲಿವು ಸಮಸ್ಯೆಗಳು ಎದುರಾದಾಗ ಸಂಘ ಅವರ ನೆರವಿಗೆ ಬರಲಿದೆ ಎಂದು ತಿಳಿಸಿದರು.ತಾಪಂ ಮಾಜಿ ಸದಸ್ಯ ಪ್ರೇಮಸಿಂಗ ಚವ್ಹಾಣ, ರಮೇಶ ನಾಯಕ,ಏಕನಾಥ ಸೀತಿಮನಿ, ಬಾಲಚಂದ್ರ ಚವ್ಹಾಣ ಇದ್ದರು.

ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ಪದಾಧಿಕಾರಿಗಳು : ಬಿ.ಎಸ್.ಜಾಧವ(ಗೌರವಾಧ್ಯಕ್ಷ), ಬಹಾದ್ದೂರ ರಾಠೋಡ(ಅಧ್ಯಕ್ಷ),ಅಶೋಕ ರಾಠೋಡ,ಕೃಷ್ಣಾ ಚವ್ಹಾಣ(ಕಾರ್ಯಾಧ್ಯಕ್ಷರು),ಲಕ್ಷö್ಮಣ ರಾಠೋಡ,ಸತೀಶ ಲಮಾಣಿ,ಬಾಲಪ್ಪ ರಾಠೋಡ,ವಾಲು ರಾಠೋಡ(ಉಪಾಧ್ಯಕ್ಷ),ಲಕ್ಷö್ಮಣ ಲಮಾಣಿ(ಪ್ರಧಾನ ಕಾರ್ಯದರ್ಶಿ),ಏಕನಾಥ ಲಮಾಣಿ(ಸಹ ಕಾರ್ಯದರ್ಶಿ),ಡಿ.ಬಿ.ಲಮಾಣಿ(ಖಜಾಂಚಿ),ಸತೀಶ ರಾಠೋಡ,ಜಗದೀಶ ನಾಯಕ,ರಾಜಕುಮಾರ ಚವ್ಹಾಣ(ಸಂಘಟನಾ ಕಾರ್ಯದರ್ಶಿ), ಯುವ ಘಟಕ : ಅನಿಲ ನಾಯಕ(ಗೌರವಾಧ್ಯಕ್ಷ), ಡಾ.ಸಂತೋಷ ನಾಯಕ(ಅಧ್ಯಕ್ಷ), ಚಂದ್ರಶೇಖರ ರಾಠೋಡ(ಕಾರ್ಯಾಧ್ಯಕ್ಷ), ಜಗದೀಶ ಚವ್ಹಾಣ, ಅನಿಲ ಚವ್ಹಾಣ,ಸುನೀಲ ಚವ್ಹಾಣ, ವಿಶಾಲ ಚವ್ಹಾಣ(ಉಪಾಧ್ಯಕ್ಷರು), ಅನೀಲ ರಾಠೋಡ(ಪ್ರಧಾನ ಕಾರ್ಯದರ್ಶಿ), ಸಚಿನ ಚವ್ಹಾಣ(ಸಹ ಕಾರ್ಯದರ್ಶಿ),ಕಿರಣ ರಾಠೋಡ(ಖಜಾಂಚಿ), ಅನಿಲ ರಾಠೋಡ, ಪರಶುರಾಮ ರಾಠೋಡ,ಸೀತಾರಾಮ ರಾಠೋಡ(ಸಂಘಟನಾ ಕಾರ್ಯದರ್ಶಿಗಳು)

Latest News

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ ಮಾಡಬೇಕು ಎಂದು ಬಿಇಒ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸನ್ 2026-27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆಟಗಳಲ್ಲಿ ಇಂದು ಸಾಕಷ್ಟು ಬದಲಾವಣೆಗಳಾಗಿದ್ದು ಗೆದ್ದವರು ಹಿಗ್ಗದೇ ಸೋತವರು ಕುಗ್ಗದೇ ಸ್ಪರ್ಧಾ ಮನೋಭಾವದಿಂದ ಆಟಗಳಲ್ಲಿ ಪಾಲ್ಗೊಳ್ಳುವಂತೆ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ