ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ ಕ್ಷೇತ್ರದಲ್ಲಿ ಏಳ್ಗೆ ಸಾಧಿಸಲು ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಶ್ರಮಿಸಲಿದೆ ಎಂದು ಎಆಯ್‌ಬಿಎಸ್‌ಎಸ್ ಸಂಘದ ಜಿಲ್ಲಾ ಉಪಾಧ್ಯಕ್ಷ ರವಿ ನಾಯಕ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ಮುದ್ದೇಬಿಹಾಳ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಮಾತನಾಡಿದರು.

ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶಿವಾನಂದ ಲಮಾಣಿ ಮಾತನಾಡಿ, ನ.16 ರಂದು ವಿಜಯಪುರದ ಗೋಲ್ಡನ್ ಹೈಟ್ಸ್ ಹೊಟೇಲ್‌ನಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮಕ್ಕೆ ಹಲವಾರು ರಾಜಕೀಯ ಧುರೀಣರು,ಸಂಘದ ಜಿಲ್ಲಾ,ರಾಜ್ಯ ಮುಖಂಡರು ಆಗಮಿಸಲಿದ್ದು ತಾಲ್ಲೂಕಿನಲ್ಲಿ ಆಯ್ಕೆಯಾಗಿರುವ ಎಲ್ಲ ಪದಾಧಿಕಾರಿಗಳು ಆಗಮಿಸುವಂತೆ ತಿಳಿಸಿದರು.

ತಾಲ್ಲೂಕು ಘಟಕದ ನೂತನ ಅಧ್ಯಕ್ಷ ಬಹಾದ್ದೂರ ರಾಠೋಡ ಮಾತನಾಡಿ, ಬಂಜಾರ ಜನಾಂಗದವರ ನೋವು,ನಲಿವು ಸಮಸ್ಯೆಗಳು ಎದುರಾದಾಗ ಸಂಘ ಅವರ ನೆರವಿಗೆ ಬರಲಿದೆ ಎಂದು ತಿಳಿಸಿದರು.ತಾಪಂ ಮಾಜಿ ಸದಸ್ಯ ಪ್ರೇಮಸಿಂಗ ಚವ್ಹಾಣ, ರಮೇಶ ನಾಯಕ,ಏಕನಾಥ ಸೀತಿಮನಿ, ಬಾಲಚಂದ್ರ ಚವ್ಹಾಣ ಇದ್ದರು.

ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ಪದಾಧಿಕಾರಿಗಳು : ಬಿ.ಎಸ್.ಜಾಧವ(ಗೌರವಾಧ್ಯಕ್ಷ), ಬಹಾದ್ದೂರ ರಾಠೋಡ(ಅಧ್ಯಕ್ಷ),ಅಶೋಕ ರಾಠೋಡ,ಕೃಷ್ಣಾ ಚವ್ಹಾಣ(ಕಾರ್ಯಾಧ್ಯಕ್ಷರು),ಲಕ್ಷö್ಮಣ ರಾಠೋಡ,ಸತೀಶ ಲಮಾಣಿ,ಬಾಲಪ್ಪ ರಾಠೋಡ,ವಾಲು ರಾಠೋಡ(ಉಪಾಧ್ಯಕ್ಷ),ಲಕ್ಷö್ಮಣ ಲಮಾಣಿ(ಪ್ರಧಾನ ಕಾರ್ಯದರ್ಶಿ),ಏಕನಾಥ ಲಮಾಣಿ(ಸಹ ಕಾರ್ಯದರ್ಶಿ),ಡಿ.ಬಿ.ಲಮಾಣಿ(ಖಜಾಂಚಿ),ಸತೀಶ ರಾಠೋಡ,ಜಗದೀಶ ನಾಯಕ,ರಾಜಕುಮಾರ ಚವ್ಹಾಣ(ಸಂಘಟನಾ ಕಾರ್ಯದರ್ಶಿ), ಯುವ ಘಟಕ : ಅನಿಲ ನಾಯಕ(ಗೌರವಾಧ್ಯಕ್ಷ), ಡಾ.ಸಂತೋಷ ನಾಯಕ(ಅಧ್ಯಕ್ಷ), ಚಂದ್ರಶೇಖರ ರಾಠೋಡ(ಕಾರ್ಯಾಧ್ಯಕ್ಷ), ಜಗದೀಶ ಚವ್ಹಾಣ, ಅನಿಲ ಚವ್ಹಾಣ,ಸುನೀಲ ಚವ್ಹಾಣ, ವಿಶಾಲ ಚವ್ಹಾಣ(ಉಪಾಧ್ಯಕ್ಷರು), ಅನೀಲ ರಾಠೋಡ(ಪ್ರಧಾನ ಕಾರ್ಯದರ್ಶಿ), ಸಚಿನ ಚವ್ಹಾಣ(ಸಹ ಕಾರ್ಯದರ್ಶಿ),ಕಿರಣ ರಾಠೋಡ(ಖಜಾಂಚಿ), ಅನಿಲ ರಾಠೋಡ, ಪರಶುರಾಮ ರಾಠೋಡ,ಸೀತಾರಾಮ ರಾಠೋಡ(ಸಂಘಟನಾ ಕಾರ್ಯದರ್ಶಿಗಳು)

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ