ನೂತನ ಪದಾಧಿಕಾರಿಗಳ ಪದಗ್ರಹಣ,ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ : ಬಣಜಿಗರು ಗರ್ವ ಇಲ್ಲದ ಗುಣವಂತರು – ಜಗದೀಶ ಶೆಟ್ಟರ

ನೂತನ ಪದಾಧಿಕಾರಿಗಳ ಪದಗ್ರಹಣ,ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ : ಬಣಜಿಗರು ಗರ್ವ ಇಲ್ಲದ ಗುಣವಂತರು – ಜಗದೀಶ ಶೆಟ್ಟರ

ಮುದ್ದೇಬಿಹಾಳ : ಬಣಜಿಗ ಸಮಾಜದವರು ನಿಗರ್ವಿಗಳಾಗಿದ್ದು ಎಲ್ಲ ಸಮಾಜದವರೊಂದಿಗೆ ಒಳ್ಳೆಯ ಬಾಂಧವ್ಯ ಇಟ್ಟುಕೊಂಡಿದ್ದಾರೆ.ಅಮೇರಿಕಾದ ಡೆಟ್ರಾಯ್ ನಗರದಲ್ಲೂ ಬಣಜಿಗ ಸಮಾಜದ ಬಾಂಧವರು ಬಸವಾದಿ ಶರಣ ಸಂದೇಶಗಳನ್ನು ಪಸರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು.
ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ,ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.

ರಾಜ್ಯ ಸರ್ಕಾರ ಜಾತಿ ಗಣತಿಯ ಹೆಸರಿನಲ್ಲಿ ಸಮಾಜದಲ್ಲಿ ಗೊಂದಲ ಮೂಡಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ.ಕೇವಲ ಶೇ.6ರಷ್ಟು ಮಾತ್ರ ಸಮೀಕ್ಷೆ ಮಾಡಿದೆ.ವಾರದಲ್ಲಿ ಶೇ.100ರಷ್ಟು ತಲುಪುವುದು ಅಸಾಧ್ಯದ ಸಂಗತಿ.ಜಾತಿ ಗಣತಿ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕಿದೆ.ಆದರೆ ಒಳಪಂಗಡಗಳನ್ನು ಒಡೆಯುವ ಕುತಂತ್ರಕ್ಕೆ ಸರ್ಕಾರ ಮುಂದಾಗಿದೆ ಎಂದು ಟೀಕಿಸಿದರು.

ವೀರಶೈವ ಒಂದು ಕಡೆ ಲಿಂಗಾಯತ ಎಂದು ಒಂದು ಕಡೆ ಹೋದರೆ ಯಾವ ಸೌಲಭ್ಯ ಸಿಗುವುದಿಲ್ಲ.ವೀರಶೈವ ಲಿಂಗಾಯತ ಎರಡೂ ಒಂದೇ ಎಂದು ಹೇಳುತ್ತೇನೆ.ದೇಶದಲ್ಲಿ ಅಧಿಕೃತವಾಗಿ ವೀರಶೈವ ಲಿಂಗಾಯತ ಘೋಷಣೆ ಆಗಬೇಕಾದರೆ ಇನ್ನೂ ಕೆಲಸ ನಡೆಯಬೇಕು.ಧರ್ಮ ಕಾಲಂನಲ್ಲಿ ಹಿಂದು, ಜಾತಿ ಕಾಲಂನಲ್ಲಿ ವೀರಶೈವ ಲಿಂಗಾಯತ, ಉಪಜಾತಿ ಕಾಲಂನಲ್ಲಿ ಬಣಜಿಗ ಎಂದು ಬರೆಯಿಸಿ ಎಂದು ಹೇಳಿದರು.

ಶಾಸಕ ಸಿ.ಎಸ್.ನಾಡಗೌಡ ಮಾತನಾಡಿ, ಬಣಜಿಗ ಸಮಾಜದವರು ದಾನ,ಧರ್ಮ,ದೈವೀಭಕ್ತಿ,ಶಿಕ್ಷಣ ಸಂಸ್ಥೆಗಳನ್ನು ಕಟ್ಟಿದವರು.ಎಲ್ಲರನ್ನೂ ಒಪ್ಪಿಕೊಳ್ಳುವ ಸಮಾಜದವರು.ಯಡಿಯೂರಪ್ಪನವರು ಸಿಎಂ ಇದ್ದಾಗ ಮುದ್ದೇಬಿಹಾಳಕ್ಕೆ ಕುಡಿವ ನೀರಿನ ಯೋಜನೆಗೆ 9.50 ಕೋಟಿ ರೂ.ಪರಿಸ್ಕೃತ ಪ್ರಸ್ತಾವನೆಗೆ ಅನುಮೋದನೆ ಕೊಟ್ಟಿದ್ದರು.ಜಗದೀಶ ಶೆಟ್ಟರ ಅವರು ಸಿಎಂ ಇದ್ದ ಅವಧಿಯಲ್ಲಿ ಮುದ್ದೇಬಿಹಾಳ ತಾಲ್ಲೂಕಿನ ನೀರಾವರಿ ಯೋಜನೆಗಳಿಗೆ ಹಣ ಕೊಟ್ಟಿದ್ದಾರೆ ಎಂದರು.

ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಮಾತನಾಡಿ, ಹಿಂದೂಗಳನ್ನು ವಿಘಟಿಸುವ ಕೆಲಸವನ್ನು ನಮ್ಮವರೇ ಕೆಲವರು ಮಾಡುತ್ತಿದ್ದಾರೆ.ವೀರಶೈವ ಲಿಂಗಾಯತ ಎಂದು ಬರೆಯಿಸಿದರೆ ರಾಜ್ಯದ 162 ಕ್ಷೇತ್ರಗಳಲ್ಲಿ ಬಹುಮತ ಪಡೆದುಕೊಳ್ಳುವ ಸಾಮರ್ಥ್ಯ ಇದೆ.ಆದರೆ ನಮ್ಮವರೇ ಅದಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ. ಜಗದೀಶ ಶೆಟ್ಟರ ಸಿಎಂ ಇದ್ದ ಅವಧಿಯಲ್ಲಿ ಉತ್ತರ ಕರ್ನಾಟಕ ಭಾಗದ ನೀರಾವರಿ ಯೋಜನೆಗಳಿಗೆ 17230 ಕೋಟಿ ರೂ.ಟೆಂಡರ್ ಕರೆದಿದ್ದರು.ಮುದ್ದೇಬಿಹಾಳ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಚಿಮ್ಮಲಗಿ, ಮುಳವಾಡ ಏತ ನೀರಾವರಿ ಯೋಜನೆಗಳಿಗೆ 800 ಕೋಟಿ ರೂ.ನೀಡಿ ಕೆಲಸ ಮಾಡಿಸಿದ್ದಾರೆ.ಅದರ ಫಲವಾಗಿ ರೈತರ ಜಮೀನುಗಳಿಗೆ ನೀರು ಹರಿದಿದೆ ಎಂದರು.

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಸಮಾಜದವರ ಸ್ವಾಭಿಮಾನಕ್ಕೆ ಧಕ್ಕೆ ತಂದವರು ಯಾರೇ ಇದ್ದರೂ ಅವರನ್ನು ಖಂಡಿಸುತ್ತೇನೆ.ಸಮಾಜದಲ್ಲಿ ಉಳ್ಳವರು ಬಡವರಿಗೆ ನೆರವಾಗುವ ಕಾರ್ಯ ಮಾಡಿ ಎಂದರು.ದಿವ್ಯ ಸಾನಿಧ್ಯ ವಹಿಸಿದ್ದ ಹೊಸಮಠದ ಅಮರೇಶ್ವರ ದೇವರು, ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಬಣಜಿಗ ಸಮಾಜದ ತಾಲ್ಲೂಕು ಘಟಕದ ನೂತನ ಅಧ್ಯಕ್ಷ ಅಶೋಕ ಚಟ್ಟೇರ,ಶಿಕ್ಷಕ ರುದ್ರೇಶ ಕಿತ್ತೂರ, ಮಾಜಿ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ ಮಾತನಾಡಿದರು.¸

ಸಾಹಿತಿ ಅಶೋಕ ಹಂಚಲಿ ಉಪನ್ಯಾಸ ನೀಡಿದರು.ಸಮಾಜದ ಗೌರವಾಧ್ಯಕ್ಷ ಎಂ.ಎಸ್.ನಾವದಗಿ, ಪ್ರಧಾನ ಕಾರ್ಯದರ್ಶಿ ರಾಜು ಬಳ್ಳೊಳ್ಳಿ, ಮುಖಂಡರಾದ ಎಂ.ಬಿ.ನಾವದಗಿ,ಬಿ.ಸಿ.ಮೋಟಗಿ,ಸoಗಮೇಶ ನಾವದಗಿ, ಯುವ ಘಟಕದ ಅಧ್ಯಕ್ಷ ಶಂಕರ ಕಡಿ, ಉಪಾಧ್ಯಕ್ಷ ಶಿವು ದಡ್ಡಿ, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ನಾಗಠಾಣ ಇದ್ದರು.ಆನಂದ ಕಂಠಿ,ಬಿ.ವಿ .ಕೋರಿ,ಸರೋಜಾ ಕೋರಿ ಕಾರ್ಯಕ್ರಮ ನಿರ್ವಹಿಸಿದರು.ಮುದ್ದೇಬಿಹಾಳ,ತಾಳಿಕೋಟಿ,ನಾಲತವಾಡ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಾಂಧವರು ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ,ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು.ವಕೀಲ ಶಿವು ದಡ್ಡಿ ಪ್ರತಿಭಾವಂತ ವಿದ್ಯಾರ್ಥಿನಿ ವಾಣಿಶ್ರೀ ಹಳ್ಳದಗೆ ಐದು ಸಾವಿರ ರೂ.ಆರ್ಥಿಕ ನೆರವು ಒದಗಿಸಿದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ