ಬನದೇವಿ ನಿನ್ನ ಪಾದಕ ಶಂಭುಕೋ : ಭಕ್ತರ ಜಯಘೋಷದ ಮಧ್ಯೆ ಬನಶಂಕರಿ ದೇವಿ ರಥೋತ್ಸವ

ಬನದೇವಿ ನಿನ್ನ ಪಾದಕ ಶಂಭುಕೋ : ಭಕ್ತರ ಜಯಘೋಷದ ಮಧ್ಯೆ ಬನಶಂಕರಿ ದೇವಿ ರಥೋತ್ಸವ

ಮುದ್ದೇಬಿಹಾಳ : ಪಟ್ಟಣದ ಶ್ರೀ ಬನಶಂಕರಿ ದೇವಿ ರಥೋತ್ಸವ ಶನಿವಾರ ಸಾವಿರಾರು ಭಕ್ತಸಮೂಹದ ಜಯಘೋಷಗಳ ಮಧ್ಯೆ ವೈಭವದಿಂದ ಜರುಗಿತು.

ಶನಿವಾರ ಬೆಳಗ್ಗೆ ದೇವಿಗೆ ಮಹಾರುದ್ರಾಭಿಷೇಕ, ಬೆಳಗಿನ ಜಾವ ಚಂಡಿ ಹವನ ನಡೆಸಲಾಯಿತು.ದೇವಿಯ ರಥದ ಕಳಸವು ಶಂಕರಪ್ಪ ಗುಡ್ಡದ ಅವರ ಮನೆಯಿಂದ ಹೊರಟು ಕಾಳಿಕಾದೇವಿ ಗಂಗಸ್ಥಳಕ್ಕೆ ತೆರಳಿ ಮರಳಿ ತು.ಸಂಜೆ ಶಿರೋಳ ಗ್ರಾಮದಿಂದ ರಥೋತ್ಸವದ ಹಗ್ಗದ ಮಿಣಿ(ಹಗ್ಗ)ದ ಮೆರವಣಿಗೆ ಆಗಮಿಸಿತು.

ಸಂಜೆ 6.25ಕ್ಕೆ ದೇವಿಯ ಮಹಾರಥೋತ್ಸವ ಸಸಾವಿರಾರು ಭಕ್ತರ ಜಯಘೋಷಗಳ ಮಧ್ಯೆ ಜರುಗಿತು.ಬನಶಂಕರಿ ದೇವಿ ನಿನ್ನ ಪಾದಕ ಶಂಭುಕೋ, ಬನದೇವಿ ನಿನ್ನ ಪಾದಕ ಶಂಭುಕೋ ಎಂದು ಭಕ್ತರು ಘೋಷಣೆಗಳನ್ನು ಹಾಕಿದರು.ರಥಕ್ಕೆ ಉತ್ತತ್ತಿ,ಬಾಳೆಹಣ್ಣು,ನಿಂಬೆಹಣ್ಣು,ಲಾಡು ಎಸೆದು ಭಕ್ತಿ ಸಮರ್ಪಿಸಿದರು. ಪುರವಂತರು,ಸುಮoಗಲಿಯರು ಕಳಸದ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.ಪಿಎಸ್‌ಐ ಸಂಜಯ ತಿಪರೆಡ್ಡಿ ಅವರ ನೇತೃತ್ವದಲ್ಲಿ ಎಎಸ್‌ಐ ಕೆ.ಎಸ್.ಅಸ್ಕಿ, ಚಿದಂಬರ ಕುಲಕರ್ಣಿ,CRIME ಪಿಎಸ್‌ಐ ಆರ್.ಎಸ್.ಭಂಗಿ ಸಿಬ್ಬಂದಿ ಬಿಗಿ ಬಂದೋಬಸ್ತ್ ವಹಿಸಿದ್ದರು.ಜಾತ್ರೆಯ ನಿಮಿತ್ಯ ವಿವಿಧ ದಾನಿಗಳಿಗೆ ಸನ್ಮಾನ ಮಾಡಲಾಯಿತು.ಐದು ದಿನವೂ ಅನ್ನಸಂತರ್ಪಣೆ ದಾನಿಗಳ ನೆರವಿನಿಂದ ಕೈಗೊಳ್ಳಲಾಗಿತ್ತು.

ಅಗ್ನಿ ಮಹೋತ್ಸವ : ಬನಶಂಕರಿ ದೇವಸ್ಥಾನದಲ್ಲಿ ಶುಕ್ರವಾರ ಬೆಳಗ್ಗೆ ಪುರವಂತರಾದ ಕಾಂತು ಹೆಬ್ಬಾಳ ಅಗ್ಗಿ ಉತ್ಸವದ ಪೂಜೆ ನಡೆಸಿದರು.ರಾತ್ರಿ ಸಾವಿರಾರು ಜನರು ಅಗ್ಗಿ ಹಾಯ್ದು ತಮ್ಮ ಭಕ್ತಿ ಸಮರ್ಪಿಸಿದರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ