ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ರಕ್ಷಣೆ ಕೋರಿ ಭಾರತಕ್ಕೆ ಬಂದ್ರು! (ವಿಡಿಯೋ ನೋಡಿ)

ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ರಕ್ಷಣೆ ಕೋರಿ ಭಾರತಕ್ಕೆ ಬಂದ್ರು! (ವಿಡಿಯೋ ನೋಡಿ)

ನವದೆಹಲಿ: ಸರ್ಕಾರಿ ಉದ್ಯೋಗ ಮೀಸಲಾತಿ ಯೋಜನೆಗೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ಬಾಂಗ್ಲಾ ದೇಶದಾದ್ಯಂತ ಭಾರೀ ಹಿಂಸಾಚಾರ ನಡೆಯುತ್ತಿದೆ. ಈ ನಡುವೆ ಇಂದು ಪ್ರಧಾನಿ ಶೇಖ್ ಹಸೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ರಕ್ಷಣೆಕೋರಿ ಭಾರತಕ್ಕೆ ಬಂದಿದ್ದಾರೆಂದು ವರದಿಯಾಗಿದ್ದು, ಅತ್ತ ಬಾಂಗ್ಲಾದೇಶದ ಅಧಿಕಾರ ಸೇನೆಯ ತೆಕ್ಕೆಗೆ ಸೇರಿದೆ.

ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಬೆನ್ನಲ್ಲೇ ಅಲ್ಲಿನ ಸೇನಾ ಮುಖ್ಯಸ್ಥ ವಾಕರ್-ಉಜ್-ಝಮಾನ್ ಸುದ್ದಿಗೋಷ್ಠಿ ನಡೆಸಿ ವಿಚಾರವನ್ನು ಘೋಷಣೆ ಮಾಡಿದ್ದಾರೆ.

ಶೇಖ್ ಹಸೀನಾ ರಾಜೀನಾಮೆ ನೀಡಿರುವ ಹಿನ್ನೆಲೆ ಸೇನೆಯ ನೇತೃತ್ವದಲ್ಲಿ ಹಂಗಾಮಿ ಸರ್ಕಾರ ರಚನೆಯಾಗಲಿದೆ. ಬಾಂಗ್ಲಾದ ಅರಾಜಕತೆ ಅಂತ್ಯಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.

ಭಾರೀ ಪ್ರತಿಭಟನೆಯ ಹಿನ್ನೆಲೆಯಲ್ಲಿ ಪ್ರಧಾನಿ ರಾಜಧಾನಿಯಿಂದ ಪಲಾಯನ ಮಾಡಿದ್ದಾರೆ. ಇದೀಗ ದೇಶದ ಸಂಪೂರ್ಣ ಜವಾಬ್ದಾರಿಯನ್ನು ನಾವು ತೆಗೆದುಕೊಂಡು ಮಧ್ಯಂತರ ಸರ್ಕಾರವನ್ನು ರಚಿಸುತ್ತೇವೆ. ದೇಶಕ್ಕೆ ಶಾಂತಿಯನ್ನು ಹಿಂದಿರುಗಿಸುತ್ತೇವೆ, ಹಿಂಸಾಚಾರವನ್ನು ನಿಲ್ಲಿಸುವಂತೆ ನಾವು ನಾಗರಿಕರನ್ನು ಕೇಳುತ್ತೇವೆ.

ಕಳೆದ ಕೆಲವು ವಾರಗಳಲ್ಲಿ ನಡೆದ ಎಲ್ಲಾ ಹತ್ಯೆಗಳ ಬಗ್ಗೆ ನಾವು ತನಿಖೆ ನಡೆಸುತ್ತೇವೆ ಎಂದು ಅವರು ಹೇಳಿದ್ದಾರೆ.

ಮಧ್ಯಂತರ ಸರ್ಕಾರವನ್ನು ರಚಿಸಲು ಅಧ್ಯಕ್ಷರೊಂದಿಗೆ ಚರ್ಚಿಸಲಾಗಿದೆ. ದೇಶದಲ್ಲಿ ಕರ್ಫ್ಯೂ ಅಥವಾ ಯಾವುದೇ ತುರ್ತು ಪರಿಸ್ಥಿತಿಯ ಅಗತ್ಯವಿಲ್ಲ. ಇಂದು ರಾತ್ರಿಯೊಳಗೆ ಬಿಕ್ಕಟ್ಟಿಗೆ ಪರಿಹಾರವನ್ನು ಕಂಡುಕೊಳ್ಳುತ್ತೇವೆ ಎಂದು ಅವರು ಭರವಸೆ ನೀಡಿದರು.

ದೇಶ ತೊರೆದಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ಸುರಕ್ಷತೆಗಾಗಿ ಇದೀಗ ಭಾರತಕ್ಕೆ ಬಂದಿಳಿದಿದ್ದಾರೆ ಎಂದು ವರದಿಯಾಗಿದೆ.

ಮಾಹಿತಿ ಪ್ರಕಾರ, ಅವರು ತಮ್ಮ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೂಡಲೇ ಬಾಂಗ್ಲಾ ವಾಯುಸೇನೆಯ ಹೆಲಿಕಾಪ್ಟರ್ ಮೂಲಕ ಶೇಖ್ ಹಸೀನಾ ಅವರು ಭಾರತದ ತ್ರಿಪುರಾದ ರಾಜಧಾನಿ ಅಗರ್ತಲಾಗೆ ಬಂದಿಳಿದ್ದಾರೆ.

ಭಾರತದ ಅಗರ್ತಲಾವು ಬಾಂಗ್ಲಾ ರಾಜಧಾನಿ ಢಾಕಾಗೆ ತೀರ ಹತ್ತಿರವಾದ ನಗರ. ಇಲ್ಲಿಗೆ ಶೇಖ್ ಹಸೀನಾ ತಮ್ಮ ಸಹೋದರಿಯೊಂದಿಗೆ ಬಾಂಗ್ಲಾದೇಶದ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಬಂದಿಳಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.