ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ರಕ್ಷಣೆ ಕೋರಿ ಭಾರತಕ್ಕೆ ಬಂದ್ರು! (ವಿಡಿಯೋ ನೋಡಿ)

ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ರಕ್ಷಣೆ ಕೋರಿ ಭಾರತಕ್ಕೆ ಬಂದ್ರು! (ವಿಡಿಯೋ ನೋಡಿ)

ನವದೆಹಲಿ: ಸರ್ಕಾರಿ ಉದ್ಯೋಗ ಮೀಸಲಾತಿ ಯೋಜನೆಗೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ಬಾಂಗ್ಲಾ ದೇಶದಾದ್ಯಂತ ಭಾರೀ ಹಿಂಸಾಚಾರ ನಡೆಯುತ್ತಿದೆ. ಈ ನಡುವೆ ಇಂದು ಪ್ರಧಾನಿ ಶೇಖ್ ಹಸೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ರಕ್ಷಣೆಕೋರಿ ಭಾರತಕ್ಕೆ ಬಂದಿದ್ದಾರೆಂದು ವರದಿಯಾಗಿದ್ದು, ಅತ್ತ ಬಾಂಗ್ಲಾದೇಶದ ಅಧಿಕಾರ ಸೇನೆಯ ತೆಕ್ಕೆಗೆ ಸೇರಿದೆ.

ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಬೆನ್ನಲ್ಲೇ ಅಲ್ಲಿನ ಸೇನಾ ಮುಖ್ಯಸ್ಥ ವಾಕರ್-ಉಜ್-ಝಮಾನ್ ಸುದ್ದಿಗೋಷ್ಠಿ ನಡೆಸಿ ವಿಚಾರವನ್ನು ಘೋಷಣೆ ಮಾಡಿದ್ದಾರೆ.

ಶೇಖ್ ಹಸೀನಾ ರಾಜೀನಾಮೆ ನೀಡಿರುವ ಹಿನ್ನೆಲೆ ಸೇನೆಯ ನೇತೃತ್ವದಲ್ಲಿ ಹಂಗಾಮಿ ಸರ್ಕಾರ ರಚನೆಯಾಗಲಿದೆ. ಬಾಂಗ್ಲಾದ ಅರಾಜಕತೆ ಅಂತ್ಯಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.

ಭಾರೀ ಪ್ರತಿಭಟನೆಯ ಹಿನ್ನೆಲೆಯಲ್ಲಿ ಪ್ರಧಾನಿ ರಾಜಧಾನಿಯಿಂದ ಪಲಾಯನ ಮಾಡಿದ್ದಾರೆ. ಇದೀಗ ದೇಶದ ಸಂಪೂರ್ಣ ಜವಾಬ್ದಾರಿಯನ್ನು ನಾವು ತೆಗೆದುಕೊಂಡು ಮಧ್ಯಂತರ ಸರ್ಕಾರವನ್ನು ರಚಿಸುತ್ತೇವೆ. ದೇಶಕ್ಕೆ ಶಾಂತಿಯನ್ನು ಹಿಂದಿರುಗಿಸುತ್ತೇವೆ, ಹಿಂಸಾಚಾರವನ್ನು ನಿಲ್ಲಿಸುವಂತೆ ನಾವು ನಾಗರಿಕರನ್ನು ಕೇಳುತ್ತೇವೆ.

ಕಳೆದ ಕೆಲವು ವಾರಗಳಲ್ಲಿ ನಡೆದ ಎಲ್ಲಾ ಹತ್ಯೆಗಳ ಬಗ್ಗೆ ನಾವು ತನಿಖೆ ನಡೆಸುತ್ತೇವೆ ಎಂದು ಅವರು ಹೇಳಿದ್ದಾರೆ.

ಮಧ್ಯಂತರ ಸರ್ಕಾರವನ್ನು ರಚಿಸಲು ಅಧ್ಯಕ್ಷರೊಂದಿಗೆ ಚರ್ಚಿಸಲಾಗಿದೆ. ದೇಶದಲ್ಲಿ ಕರ್ಫ್ಯೂ ಅಥವಾ ಯಾವುದೇ ತುರ್ತು ಪರಿಸ್ಥಿತಿಯ ಅಗತ್ಯವಿಲ್ಲ. ಇಂದು ರಾತ್ರಿಯೊಳಗೆ ಬಿಕ್ಕಟ್ಟಿಗೆ ಪರಿಹಾರವನ್ನು ಕಂಡುಕೊಳ್ಳುತ್ತೇವೆ ಎಂದು ಅವರು ಭರವಸೆ ನೀಡಿದರು.

ದೇಶ ತೊರೆದಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ಸುರಕ್ಷತೆಗಾಗಿ ಇದೀಗ ಭಾರತಕ್ಕೆ ಬಂದಿಳಿದಿದ್ದಾರೆ ಎಂದು ವರದಿಯಾಗಿದೆ.

ಮಾಹಿತಿ ಪ್ರಕಾರ, ಅವರು ತಮ್ಮ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೂಡಲೇ ಬಾಂಗ್ಲಾ ವಾಯುಸೇನೆಯ ಹೆಲಿಕಾಪ್ಟರ್ ಮೂಲಕ ಶೇಖ್ ಹಸೀನಾ ಅವರು ಭಾರತದ ತ್ರಿಪುರಾದ ರಾಜಧಾನಿ ಅಗರ್ತಲಾಗೆ ಬಂದಿಳಿದ್ದಾರೆ.

ಭಾರತದ ಅಗರ್ತಲಾವು ಬಾಂಗ್ಲಾ ರಾಜಧಾನಿ ಢಾಕಾಗೆ ತೀರ ಹತ್ತಿರವಾದ ನಗರ. ಇಲ್ಲಿಗೆ ಶೇಖ್ ಹಸೀನಾ ತಮ್ಮ ಸಹೋದರಿಯೊಂದಿಗೆ ಬಾಂಗ್ಲಾದೇಶದ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಬಂದಿಳಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Latest News

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?;                                                                           ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?; ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಮುದ್ದೇಬಿಹಾಳ : ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ₹601 5G ರೀಚಾರ್ಜ್ ಯೋಜನೆಯು Jio ಬಳಕೆದಾರರಿಗೆ, ವಿಶೇಷವಾಗಿ ಇಡೀ ವರ್ಷಕ್ಕೆ ಅನಿಯಮಿತ 5G ಡೇಟಾವನ್ನು ಬಯಸುವವರಿಗೆ ಆಕರ್ಷಕ ಕೊಡುಗೆಯಾಗಿದೆ. Jio ₹601 5G ರೀಚಾರ್ಜ್ ಯೋಜನೆ ಮುಖ್ಯಾಂಶಗಳು ವೆಚ್ಚ : ಒಂದು ವರ್ಷಕ್ಕೆ ₹601.ಪ್ರಯೋಜನಗಳು : 12 ತಿಂಗಳವರೆಗೆ ಅನಿಯಮಿತ 5G ಡೇಟಾ.ಅರ್ಹತೆ : Jio 5G ಸಿಮ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ.ವಿನಾಯಿತಿಗಳು : 4G ಸಿಮ್ ಬಳಕೆದಾರರಿಗೆ ಅನ್ವಯಿಸುವುದಿಲ್ಲ. Join Our Telegram: https://t.me/dcgkannada ಈ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT: ಭಾರತೀಯ ರೈಲ್ವೆ ಇಲಾಖೆಯು ಬರೋಬ್ಬರಿ 32 ಸಾವಿರ ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಈ ಕುರಿತು ಶಾರ್ಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಈ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. Join Our Telegram: https://t.me/dcgkannada ಆರಂಭಿಕ ವೇತನವು 18000 ರೂ. ಇರುತ್ತದೆ. ಸದ್ಯದಲ್ಲಿಯೇ ಅರ್ಜಿ ಸ್ವೀಕೃತಿಯು ಆರಂಭವಾಗಲಿದೆ. ನಂತರ ಪರೀಕ್ಷೆ ದಿನಾಂಕವನ್ನು ಬಿಡುಗಡೆ ಮಾಡಲಾಗುತ್ತದೆ. 2024 ನೇ