ಅವೈಜ್ಞಾನಿಕ ಆದೇಶಕ್ಕೆ ಬಂಗ್ಲೆ ಮಲ್ಲಿಕಾರ್ಜುನ ಖಂಡನೆ : ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಆದೇಶ-ನಾಯಿ…. ಜೇನು ಇಟ್ಟಂತೆ..! (ವಿಡಿಯೋ ನೋಡಿ)

ಅವೈಜ್ಞಾನಿಕ ಆದೇಶಕ್ಕೆ ಬಂಗ್ಲೆ ಮಲ್ಲಿಕಾರ್ಜುನ ಖಂಡನೆ : ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಆದೇಶ-ನಾಯಿ…. ಜೇನು ಇಟ್ಟಂತೆ..! (ವಿಡಿಯೋ ನೋಡಿ)

ಬೆಂಗಳೂರು : ರಾಜ್ಯದ 200 ತಾಲ್ಲೂಕುಗಳಲ್ಲಿ ಕೆಲಸ ಮಾಡುವ ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಆಯಾ ಪತ್ರಿಕಾ ಸಂಸ್ಥೆಗಳು ಕಾಯಂ ನೇಮಕಾತಿ ಆದೇಶ ಪತ್ರ ಕೊಟ್ಟಿರುವುದಿಲ್ಲ. ಹೀಗಿರುವಾವ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡುವ ವಿಷಯಕ್ಕೆ ಸಂಬಂಧಿಸಿದಂತೆ ಗುರುವಾರ ಸರ್ಕಾರದಿಂದ ಹೊರಡಿಸಿರುವ ಆದೇಶ ಅವೈಜ್ಞಾನಿಕವಾಗಿದ್ದು ರಾಜ್ಯದ ಪತ್ರಕರ್ತರಿಗೆ ಅಪಮಾನಿಸಿದಂತಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಕಾಯಂ ಪತ್ರಕರ್ತರೆಂದು ನೇಮಕಾತಿ ಆದೇಶ ಕೊಟ್ಟಿಲ್ಲ. ಆದರೆ ಸರ್ಕಾರ ಈ ಆದೇಶ ಪ್ರತಿ ಕೇಳಿರುವುದು ಹಾಸ್ಯಾಸ್ಪದ ಸಂಗತಿಯಾಗಿದ್ದು ಈ ಬಗ್ಗೆ ಆದೇಶ ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

ರಾಜ್ಯದ ಮಹಿಳೆಯರಿಗೆ ಬಸ್‌ಗಳಲ್ಲಿ ಸಂಚರಿಸಲು 1800 ಕೋಟಿ ರೂ.ವೆಚ್ಚವನ್ನು ನೀಡಿರುವ ಸರ್ಕಾರ ಯಾವುದೇ ಮಾನದಂಡಗಳನ್ನು ಕೇಳಿಲ್ಲ. ಆದರೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗ, ಸರ್ಕಾರದ ಯೋಜನೆಗಳ ಬಗ್ಗೆ ಸಮಾಜದಲ್ಲಿ ಜನರ ಕೊಂಡಿಯಾಗಿ ಕೆಲಸ ಮಾಡುತ್ತಿರುವ ಪತ್ರಕರ್ತರ ವಿಷಯದಲ್ಲಿ ಮಾತ್ರ ಇಂತಹ ಧೋರಣೆ ತಳೆದಿರುವುದು ಸರಿಯಾದ ಕ್ರಮವಲ್ಲ ಎಂದು ಹರಿಹಾಯ್ದಿದ್ದಾರೆ.

ಸರ್ಕಾರ ಹೊರಡಿಸಿರುವ ಆದೇಶದಂತೆ ರಾಜ್ಯಾದ್ಯಂತ 100 ಅರ್ಜಿ ಸಲ್ಲಿಕೆ ಆದರೆ ಹೆಚ್ಚು ಎಂದಿರುವ ಬಂಗ್ಲೆ ಮಲ್ಲಿಕಾರ್ಜುನ, 5222 ಪತ್ರಕರ್ತರಲ್ಲಿ ಕಾಯಂ ನೇಮಕಾತಿ ಪತ್ರ ಎಷ್ಟು ಜನರ ಬಳಿ ಇದೆ ಎಂಬುದೇ ಯಕ್ಷಪ್ರಶ್ನೆಯಾಗಿದೆ. ಕೂಡಲೇ ಈ ಆದೇಶವನ್ನು ಮಾರ್ಪಡಿಸಿ ಗ್ರಾಮೀಣ ಪತ್ರಕರ್ತರಿಗೆ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸುವ ಕಾರ್ಯ ಮಾಡಬೇಕು. ಇಲ್ಲದಿದ್ದಲ್ಲಿ ಈ ಆದೇಶದ ವಿರುದ್ಧ ನ್ಯಾಯಾಲಯದ ಮೊರೆ ಹೋಗಲಾಗುವುದು ಹಾಗೆಯೇ ಇದರ ವಿರುದ್ಧ ಹೋರಾಟವನ್ನು ಸಂಘಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಆದೇಶ ನಾಯಿ.. ಜೇನು ಇದ್ದಂತೆ ಅದು ಪೂಜೆಗೂ ಬರುವುದಿಲ್ಲ. ತಿನ್ನುವುದಕ್ಕೆ ಬರುವುದಿಲ್ಲ. ಆದರೆ ಸರ್ಕಾರ ಪತ್ರಕರ್ತರಿಗೆ ಬಸ್ ಪಾಸ್ ಕೊಟ್ಟಿರುವುದಾಗಿ ಬಡಾಯಿ ಕೊಚ್ಚಿಕೊಳ್ಳಲಿದೆ. ಪತ್ರಕರ್ತ ಕಿವಿ ಮೇಲೆ ಹೂ ಇಟ್ಟಂತಾಗಿದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಲಾರಿ – ಕಾರು ಮುಖಾಮುಖಿ ಡಿಕ್ಕಿ, ನಾಲ್ವರು ಸ್ಥಳದಲ್ಲೇ ದುರ್ಮರಣ

Latest News

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ತಾಲೂಕಿನ ದೇವೂರ ಜಾಕ್‌ವೆಲ್‌ನಿಂದ ಮುದ್ದೇಬಿಹಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮುಖ್ಯ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ 2026 ನೇ ಸಾಲಿನ "ಕಾಯಕ ಯೋಗಿ" ರಾಜ್ಯ ಪ್ರಶಸ್ತಿ ಲಭಿಸಿದೆ. ಪವಾಡ ಬಯಲು ಆಂದೋಲನದ ಮೂಲಕ ರಾಜ್ಯಾದ್ಯಂತ ಹೆಸರಾಗಿರುವ ಡಾ.ಹುಲಿಕಲ್ ನಟರಾಜ ಸಂಸ್ಥಾಪಕ ಅಧ್ಯಕ್ಷರಾಗಿರುವ 'ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ) ದೊಡ್ಡಬಳ್ಳಾಪುರ ಇವರು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಗಡೇದ ಅವರು ಸದ್ಯಕ್ಕೆ ಹೂವಿನ ಹಿಪ್ಪರಗಿ ಅಂಚೆ ಇಲಾಖೆಯಲ್ಲಿ ಸಬ್ ಪೋಸ್ಟ್ಮಾಸ್ಟರ್ ಆಗಿ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು ಸಮಾಜಕ್ಕೆ ನಿಸ್ವಾರ್ಥದಿಂದ ಕೊಡುವುದಿಲ್ಲ.ತಾಲ್ಲೂಕಿನಲ್ಲಿ ಕೆಲವು ಗುತ್ತಿಗೆದಾರರಿಗೆ ಕೆಲಸ ಬೇಕು.ಆದರೆ ಸಮಾಜಕ್ಕೆ ಕೊಡುವ ಮಾತು ದೂರ.ಅಂತವರಿಗೆ ಮುಂದಿನ ದಿನಗಳಲ್ಲಿ ಕಡಿವಾಣ ಹಾಕುವ ಕೆಲಸ ಮಾಡುವುದಾಗಿ ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿ ಹಮ್ಮಿಕೊಂಡಿದ್ದ ಯಲ್ಲಾಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿ ಸನ್ 2025-26 ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 25 ಲಕ್ಷ ರೂ.ವೆಚ್ಚದಲ್ಲಿ ಸಭಾಭವನದ ಭೂಮಿಪೂಜೆ