ಅವೈಜ್ಞಾನಿಕ ಆದೇಶಕ್ಕೆ ಬಂಗ್ಲೆ ಮಲ್ಲಿಕಾರ್ಜುನ ಖಂಡನೆ : ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಆದೇಶ-ನಾಯಿ…. ಜೇನು ಇಟ್ಟಂತೆ..! (ವಿಡಿಯೋ ನೋಡಿ)

ಅವೈಜ್ಞಾನಿಕ ಆದೇಶಕ್ಕೆ ಬಂಗ್ಲೆ ಮಲ್ಲಿಕಾರ್ಜುನ ಖಂಡನೆ : ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಆದೇಶ-ನಾಯಿ…. ಜೇನು ಇಟ್ಟಂತೆ..! (ವಿಡಿಯೋ ನೋಡಿ)

ಬೆಂಗಳೂರು : ರಾಜ್ಯದ 200 ತಾಲ್ಲೂಕುಗಳಲ್ಲಿ ಕೆಲಸ ಮಾಡುವ ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಆಯಾ ಪತ್ರಿಕಾ ಸಂಸ್ಥೆಗಳು ಕಾಯಂ ನೇಮಕಾತಿ ಆದೇಶ ಪತ್ರ ಕೊಟ್ಟಿರುವುದಿಲ್ಲ. ಹೀಗಿರುವಾವ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡುವ ವಿಷಯಕ್ಕೆ ಸಂಬಂಧಿಸಿದಂತೆ ಗುರುವಾರ ಸರ್ಕಾರದಿಂದ ಹೊರಡಿಸಿರುವ ಆದೇಶ ಅವೈಜ್ಞಾನಿಕವಾಗಿದ್ದು ರಾಜ್ಯದ ಪತ್ರಕರ್ತರಿಗೆ ಅಪಮಾನಿಸಿದಂತಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಕಾಯಂ ಪತ್ರಕರ್ತರೆಂದು ನೇಮಕಾತಿ ಆದೇಶ ಕೊಟ್ಟಿಲ್ಲ. ಆದರೆ ಸರ್ಕಾರ ಈ ಆದೇಶ ಪ್ರತಿ ಕೇಳಿರುವುದು ಹಾಸ್ಯಾಸ್ಪದ ಸಂಗತಿಯಾಗಿದ್ದು ಈ ಬಗ್ಗೆ ಆದೇಶ ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

ರಾಜ್ಯದ ಮಹಿಳೆಯರಿಗೆ ಬಸ್‌ಗಳಲ್ಲಿ ಸಂಚರಿಸಲು 1800 ಕೋಟಿ ರೂ.ವೆಚ್ಚವನ್ನು ನೀಡಿರುವ ಸರ್ಕಾರ ಯಾವುದೇ ಮಾನದಂಡಗಳನ್ನು ಕೇಳಿಲ್ಲ. ಆದರೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗ, ಸರ್ಕಾರದ ಯೋಜನೆಗಳ ಬಗ್ಗೆ ಸಮಾಜದಲ್ಲಿ ಜನರ ಕೊಂಡಿಯಾಗಿ ಕೆಲಸ ಮಾಡುತ್ತಿರುವ ಪತ್ರಕರ್ತರ ವಿಷಯದಲ್ಲಿ ಮಾತ್ರ ಇಂತಹ ಧೋರಣೆ ತಳೆದಿರುವುದು ಸರಿಯಾದ ಕ್ರಮವಲ್ಲ ಎಂದು ಹರಿಹಾಯ್ದಿದ್ದಾರೆ.

ಸರ್ಕಾರ ಹೊರಡಿಸಿರುವ ಆದೇಶದಂತೆ ರಾಜ್ಯಾದ್ಯಂತ 100 ಅರ್ಜಿ ಸಲ್ಲಿಕೆ ಆದರೆ ಹೆಚ್ಚು ಎಂದಿರುವ ಬಂಗ್ಲೆ ಮಲ್ಲಿಕಾರ್ಜುನ, 5222 ಪತ್ರಕರ್ತರಲ್ಲಿ ಕಾಯಂ ನೇಮಕಾತಿ ಪತ್ರ ಎಷ್ಟು ಜನರ ಬಳಿ ಇದೆ ಎಂಬುದೇ ಯಕ್ಷಪ್ರಶ್ನೆಯಾಗಿದೆ. ಕೂಡಲೇ ಈ ಆದೇಶವನ್ನು ಮಾರ್ಪಡಿಸಿ ಗ್ರಾಮೀಣ ಪತ್ರಕರ್ತರಿಗೆ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸುವ ಕಾರ್ಯ ಮಾಡಬೇಕು. ಇಲ್ಲದಿದ್ದಲ್ಲಿ ಈ ಆದೇಶದ ವಿರುದ್ಧ ನ್ಯಾಯಾಲಯದ ಮೊರೆ ಹೋಗಲಾಗುವುದು ಹಾಗೆಯೇ ಇದರ ವಿರುದ್ಧ ಹೋರಾಟವನ್ನು ಸಂಘಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಆದೇಶ ನಾಯಿ.. ಜೇನು ಇದ್ದಂತೆ ಅದು ಪೂಜೆಗೂ ಬರುವುದಿಲ್ಲ. ತಿನ್ನುವುದಕ್ಕೆ ಬರುವುದಿಲ್ಲ. ಆದರೆ ಸರ್ಕಾರ ಪತ್ರಕರ್ತರಿಗೆ ಬಸ್ ಪಾಸ್ ಕೊಟ್ಟಿರುವುದಾಗಿ ಬಡಾಯಿ ಕೊಚ್ಚಿಕೊಳ್ಳಲಿದೆ. ಪತ್ರಕರ್ತ ಕಿವಿ ಮೇಲೆ ಹೂ ಇಟ್ಟಂತಾಗಿದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಲಾರಿ – ಕಾರು ಮುಖಾಮುಖಿ ಡಿಕ್ಕಿ, ನಾಲ್ವರು ಸ್ಥಳದಲ್ಲೇ ದುರ್ಮರಣ

Latest News

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಟ್ಯಾಕ್ಸಿ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಭಾವೈಕ್ಯತೆ ಸಂದೇಶ

ಮುದ್ದೇಬಿಹಾಳ : ಮುಸ್ಲಿಂರ ಹಬ್ಬಕ್ಕೆ ಹಿಂದೂಗಳು ಕೈಜೋಡಿಸುವುದು,ಹಿಂದೂಗಳ ಹಬ್ಬಕ್ಕೆ ಮುಸ್ಲಿಂ ಬಾಂಧವರು ಸಹಕಾರ ನೀಡುವ ಕಾರ್ಯಗಳಿಂದ ಸಮಾಜದಲ್ಲಿ ಭಾವೈಕ್ಯತೆ ಸೌಹಾರ್ದತೆ ನೆಲೆಸುತ್ತದೆ ಎಂದು ಗಣಿತ ಲೋಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಬಸವರಾಜ ಗುರವ ಹೇಳಿದರು. ಪಟ್ಟಣದ ಪುರಸಭೆ ಮುಂದೆ ಇರುವ ಗಜಾನನ ಟ್ಯಾಕ್ಸಿ ,ಜೀಪ್ ಚಾಲಕರು,ಮಾಲೀಕರ ಸಂಘದಿoದ ಏರ್ಪಡಿಸಿದ್ದ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಾತಿ,ಧರ್ಮಗಳ ಮಧ್ಯೆ ಭಿನ್ನಾಭಿಪ್ರಾಯಗಳನ್ನು ಇಟ್ಟುಕೊಂಡು ದೇಶದ ಹಲವೆಡೆ ವಿಷಮ ಪರಿಸ್ಥಿತಿ ಸೃಷ್ಟಿಸುವ ಕಾರ್ಯ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ ಹಿಂದೂಗಳದ್ದಲ್ಲ.ಎಲ್ಲ ಬಣ್ಣಗಳು ಯಾವುದೇ ಒಂದು ಸಮುದಾಯಕ್ಕೆ ಸೇರಿಲ್ಲ.ಲಾಂಛನಗಳನ್ನು ನಾವು ಮಾಡಿಕೊಂಡು ನಮ್ಮ ನಮ್ಮಲ್ಲಿ ಬೇಧಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ ಎಂದು ಇಳಕಲ್‌ನ ಖ್ಯಾತ ಪ್ರವಚನಕಾರ ಲಾಲ್‌ಹುಸೇನ್ ಕಂದಗಲ್ ಹೇಳಿದರು. ಪಟ್ಟಣದ ಸಾರಿಗೆ ಘಟಕದಲ್ಲಿ ಬುಧವಾರ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾನವನ ಘನತೆ ಎತ್ತಿ ಹಿಡಿಯುವ ಕೆಲಸವನ್ನು ಪ್ರವಾದಿ