ಅವೈಜ್ಞಾನಿಕ ಆದೇಶಕ್ಕೆ ಬಂಗ್ಲೆ ಮಲ್ಲಿಕಾರ್ಜುನ ಖಂಡನೆ : ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಆದೇಶ-ನಾಯಿ…. ಜೇನು ಇಟ್ಟಂತೆ..! (ವಿಡಿಯೋ ನೋಡಿ)

ಅವೈಜ್ಞಾನಿಕ ಆದೇಶಕ್ಕೆ ಬಂಗ್ಲೆ ಮಲ್ಲಿಕಾರ್ಜುನ ಖಂಡನೆ : ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಆದೇಶ-ನಾಯಿ…. ಜೇನು ಇಟ್ಟಂತೆ..! (ವಿಡಿಯೋ ನೋಡಿ)

ಬೆಂಗಳೂರು : ರಾಜ್ಯದ 200 ತಾಲ್ಲೂಕುಗಳಲ್ಲಿ ಕೆಲಸ ಮಾಡುವ ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಆಯಾ ಪತ್ರಿಕಾ ಸಂಸ್ಥೆಗಳು ಕಾಯಂ ನೇಮಕಾತಿ ಆದೇಶ ಪತ್ರ ಕೊಟ್ಟಿರುವುದಿಲ್ಲ. ಹೀಗಿರುವಾವ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡುವ ವಿಷಯಕ್ಕೆ ಸಂಬಂಧಿಸಿದಂತೆ ಗುರುವಾರ ಸರ್ಕಾರದಿಂದ ಹೊರಡಿಸಿರುವ ಆದೇಶ ಅವೈಜ್ಞಾನಿಕವಾಗಿದ್ದು ರಾಜ್ಯದ ಪತ್ರಕರ್ತರಿಗೆ ಅಪಮಾನಿಸಿದಂತಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಕಾಯಂ ಪತ್ರಕರ್ತರೆಂದು ನೇಮಕಾತಿ ಆದೇಶ ಕೊಟ್ಟಿಲ್ಲ. ಆದರೆ ಸರ್ಕಾರ ಈ ಆದೇಶ ಪ್ರತಿ ಕೇಳಿರುವುದು ಹಾಸ್ಯಾಸ್ಪದ ಸಂಗತಿಯಾಗಿದ್ದು ಈ ಬಗ್ಗೆ ಆದೇಶ ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

ರಾಜ್ಯದ ಮಹಿಳೆಯರಿಗೆ ಬಸ್‌ಗಳಲ್ಲಿ ಸಂಚರಿಸಲು 1800 ಕೋಟಿ ರೂ.ವೆಚ್ಚವನ್ನು ನೀಡಿರುವ ಸರ್ಕಾರ ಯಾವುದೇ ಮಾನದಂಡಗಳನ್ನು ಕೇಳಿಲ್ಲ. ಆದರೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗ, ಸರ್ಕಾರದ ಯೋಜನೆಗಳ ಬಗ್ಗೆ ಸಮಾಜದಲ್ಲಿ ಜನರ ಕೊಂಡಿಯಾಗಿ ಕೆಲಸ ಮಾಡುತ್ತಿರುವ ಪತ್ರಕರ್ತರ ವಿಷಯದಲ್ಲಿ ಮಾತ್ರ ಇಂತಹ ಧೋರಣೆ ತಳೆದಿರುವುದು ಸರಿಯಾದ ಕ್ರಮವಲ್ಲ ಎಂದು ಹರಿಹಾಯ್ದಿದ್ದಾರೆ.

ಸರ್ಕಾರ ಹೊರಡಿಸಿರುವ ಆದೇಶದಂತೆ ರಾಜ್ಯಾದ್ಯಂತ 100 ಅರ್ಜಿ ಸಲ್ಲಿಕೆ ಆದರೆ ಹೆಚ್ಚು ಎಂದಿರುವ ಬಂಗ್ಲೆ ಮಲ್ಲಿಕಾರ್ಜುನ, 5222 ಪತ್ರಕರ್ತರಲ್ಲಿ ಕಾಯಂ ನೇಮಕಾತಿ ಪತ್ರ ಎಷ್ಟು ಜನರ ಬಳಿ ಇದೆ ಎಂಬುದೇ ಯಕ್ಷಪ್ರಶ್ನೆಯಾಗಿದೆ. ಕೂಡಲೇ ಈ ಆದೇಶವನ್ನು ಮಾರ್ಪಡಿಸಿ ಗ್ರಾಮೀಣ ಪತ್ರಕರ್ತರಿಗೆ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸುವ ಕಾರ್ಯ ಮಾಡಬೇಕು. ಇಲ್ಲದಿದ್ದಲ್ಲಿ ಈ ಆದೇಶದ ವಿರುದ್ಧ ನ್ಯಾಯಾಲಯದ ಮೊರೆ ಹೋಗಲಾಗುವುದು ಹಾಗೆಯೇ ಇದರ ವಿರುದ್ಧ ಹೋರಾಟವನ್ನು ಸಂಘಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಆದೇಶ ನಾಯಿ.. ಜೇನು ಇದ್ದಂತೆ ಅದು ಪೂಜೆಗೂ ಬರುವುದಿಲ್ಲ. ತಿನ್ನುವುದಕ್ಕೆ ಬರುವುದಿಲ್ಲ. ಆದರೆ ಸರ್ಕಾರ ಪತ್ರಕರ್ತರಿಗೆ ಬಸ್ ಪಾಸ್ ಕೊಟ್ಟಿರುವುದಾಗಿ ಬಡಾಯಿ ಕೊಚ್ಚಿಕೊಳ್ಳಲಿದೆ. ಪತ್ರಕರ್ತ ಕಿವಿ ಮೇಲೆ ಹೂ ಇಟ್ಟಂತಾಗಿದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಲಾರಿ – ಕಾರು ಮುಖಾಮುಖಿ ಡಿಕ್ಕಿ, ನಾಲ್ವರು ಸ್ಥಳದಲ್ಲೇ ದುರ್ಮರಣ

Latest News

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?;                                                                           ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?; ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಮುದ್ದೇಬಿಹಾಳ : ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ₹601 5G ರೀಚಾರ್ಜ್ ಯೋಜನೆಯು Jio ಬಳಕೆದಾರರಿಗೆ, ವಿಶೇಷವಾಗಿ ಇಡೀ ವರ್ಷಕ್ಕೆ ಅನಿಯಮಿತ 5G ಡೇಟಾವನ್ನು ಬಯಸುವವರಿಗೆ ಆಕರ್ಷಕ ಕೊಡುಗೆಯಾಗಿದೆ. Jio ₹601 5G ರೀಚಾರ್ಜ್ ಯೋಜನೆ ಮುಖ್ಯಾಂಶಗಳು ವೆಚ್ಚ : ಒಂದು ವರ್ಷಕ್ಕೆ ₹601.ಪ್ರಯೋಜನಗಳು : 12 ತಿಂಗಳವರೆಗೆ ಅನಿಯಮಿತ 5G ಡೇಟಾ.ಅರ್ಹತೆ : Jio 5G ಸಿಮ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ.ವಿನಾಯಿತಿಗಳು : 4G ಸಿಮ್ ಬಳಕೆದಾರರಿಗೆ ಅನ್ವಯಿಸುವುದಿಲ್ಲ. Join Our Telegram: https://t.me/dcgkannada ಈ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT: ಭಾರತೀಯ ರೈಲ್ವೆ ಇಲಾಖೆಯು ಬರೋಬ್ಬರಿ 32 ಸಾವಿರ ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಈ ಕುರಿತು ಶಾರ್ಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಈ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. Join Our Telegram: https://t.me/dcgkannada ಆರಂಭಿಕ ವೇತನವು 18000 ರೂ. ಇರುತ್ತದೆ. ಸದ್ಯದಲ್ಲಿಯೇ ಅರ್ಜಿ ಸ್ವೀಕೃತಿಯು ಆರಂಭವಾಗಲಿದೆ. ನಂತರ ಪರೀಕ್ಷೆ ದಿನಾಂಕವನ್ನು ಬಿಡುಗಡೆ ಮಾಡಲಾಗುತ್ತದೆ. 2024 ನೇ