50 ಲಕ್ಷ ರೂ.ಸ್ಕಾಲರ್‌ಶಿಪ್ ಗೆಲ್ಲುವ ಅವಕಾಶ: ಫೆ.22 ರಂದು ಬಿಎಎಸ್ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

50 ಲಕ್ಷ ರೂ.ಸ್ಕಾಲರ್‌ಶಿಪ್ ಗೆಲ್ಲುವ ಅವಕಾಶ: ಫೆ.22 ರಂದು ಬಿಎಎಸ್ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

ಮುದ್ದೇಬಿಹಾಳ : ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಶಾಲೆಯಲ್ಲಿ ಫೆ.22 ರಂದು ಬಿಎಎಸ್ ಟ್ಯಾಲೆಂಟ್ ಅವಾರ್ಡ್ -2026-27 ಪರೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ಬಿಎಎಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ ಮಾಹಿತಿ ನೀಡಿದರು.

ಪಟ್ಟಣದಲ್ಲಿ ಈಚೇಗೆ ಸುದ್ದಿಗೋಷ್ಠಿ ನಡೆಸಿ ಅವರು ಪರೀಕ್ಷೆಯ ಕುರಿತು ಮಾಹಿತಿ ನೀಡಿದರು. ಈ ಪರೀಕ್ಷೆ 4 ಮತ್ತು 9ನೇ ತರಗತಿ ಮಕ್ಕಳಿಗಾಗಿ ಈ ಪರೀಕ್ಷೆ ನಡೆಸಲಾಗುತ್ತಿದೆ. 50ಲಕ್ಷ ರೂ.ಮೌಲ್ಯದ
ಸ್ಕಾಲರಶಿಪ್ ಗೆಲ್ಲುವ ವಿಶೇಷ ಪರೀಕ್ಷೆ ಆಯೋಜಿಸಿದ್ದೇವೆ ಎಂದು ತಿಳಿಸಿದರು.

ರ‍್ಯಾಂಕ್‌ವಾರು ಮಕ್ಕಳಿಗೆ ಪ್ರತಿಶತ ರಿಯಾಯಿತಿಯಲ್ಲಿ ಶಿಷ್ಯವೇತನ ನೀಡುತ್ತಿದ್ದು,ಹೀಗಾಗಿ ಕಳೆದ ವರ್ಷ
20ಲಕ್ಷ ರೂಪಾಯಿ ಶಿಷ್ಯವೇತನ ನೀಡಲಾಗಿತ್ತು.ಫೆ. 21 ರಂದು ಟ್ಯಾಲೆಂಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಎಂದು ಹೇಳಿದರು. ಪ್ರಾಚಾರ್ಯ ಸಲ್ಮಾನ್‌ಖಾನ್ ಎಚ್.,ಮಾತನಾಡಿ ನಮ್ಮ ಶಾಲೆಯಲ್ಲಿ 10 ಸಾವಿರ ಪುಸ್ತಕದ ಗ್ರಂಥಾಲಯ ಸಾಮರ್ಥ್ಯವಿದೆ.ಸಿಬಿಎಸ್‌ಸಿ
ಕಲ್ಚರ್ ಇದೆ,ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕವಾದ ವಸತಿ ಸೌಲಭ್ಯವಿದೆ. ವಾಹನ ಸೌಕರ್ಯವೂ ಇದ್ದು ಗ್ರಾಮೀಣ ಭಾಗದಲ್ಲಿ ಇದೊಂದು ಅಂತರಾಷ್ಟ್ರೀಯ ಮಟ್ಟದ ಪ್ರಥಮ ಸ್ಕೂಲ್ ಆಗಿದೆ ಎಂದು ಹೇಳಿದರು.
ಸಂಸ್ಥೆಯ ಅಧ್ಯಕ್ಷ ಮಾಂತಗೌಡ ಬಿರಾದಾರ ಮಾತನಾಡಿ, 1-10ನೇ ಸ್ಥಾನ ಪಡೆಯುವ ಮಕ್ಕಳಿಗೆ ಶುಲ್ಕದಲ್ಲಿ ಶೇ.20 ರಷ್ಟು ರಿಯಾಯಿತಿ, 11-20ರವರೆಗೆ ಶೇ.15, 21-30 ರವರೆಗೆ ಶೇ.10 ರಷ್ಟು, 31-40 ರವರೆಗೆ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿದರು. ಪ್ರಾಚಾರ್ಯೆ ರಿಷೀಕಾ ನಾಯಕ ಮಾತನಾಡಿದರು.

ಸಂಸ್ಥೆಯ ಪ್ರಮುಖರಾದ ವಿವೇಕಾನಂದ ಬಿರಾದಾರ, ಗೀತಾ ಬಿರಾದಾರ, ಶಿವನಗೌಡ ಬಿರಾದಾರ, ಸುಮಂಗಲಾ ಬಿರಾದಾರ,ಬಸಮ್ಮ ಬಿರಾದಾರ ಸೇರಿದಂತೆ ಇದ್ದರು.ಪರೀಕ್ಷೆಯಲ್ಲಿ ಹೆಸರು ನೋಂದಾಯಿಸಲು ಮೊಬೈಲ್ ಸಂಖ್ಯೆ:9035054453, 9035054451, 9035054452 ಸಂಪರ್ಕಿಸಬಹುದಾಗಿದೆ.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,