ಡಿಕೆ ಶಿವಕುಮಾರ್ ಏಜೆಂಟ್ ವಿಜಯೇಂದ್ರ; ಇದು ಪಕ್ಷ ದ್ರೋಹ ಹೈಕಮಾಂಡ್‌ಗೆ ದೂರು ನೀಡ್ತೀವಿ – ಯತ್ನಾಳ್ ಆರ್ಭಟ

ಡಿಕೆ ಶಿವಕುಮಾರ್ ಏಜೆಂಟ್ ವಿಜಯೇಂದ್ರ; ಇದು ಪಕ್ಷ ದ್ರೋಹ ಹೈಕಮಾಂಡ್‌ಗೆ ದೂರು ನೀಡ್ತೀವಿ – ಯತ್ನಾಳ್ ಆರ್ಭಟ

ಬೆಂಗಳೂರು: ಪ್ರತಾಪ್ ಸಿಂಹ ಮತ್ತು ನಾನು ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರಿ ಹೋಗ್ತಾ ಇಲ್ಲ, ಅಪ್ಪ, ಮಕ್ಕಳ ಪಕ್ಷವಾಗಿ ಪರಿವರ್ತನೆಯಾಗಿದೆ ಎಂದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಮಾಜಿ ಸಚಿವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಸಭೆ ಬಳಿಕ ಖಾಸಗಿ ಸುದ್ದಿವಾಹಿನಿ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿರುವ ರಾಜ್ಯಾಧ್ಯಕ್ಷ (ವಿಜಯೇಂದ್ರ) ಮತ್ತು ಯಡಿಯೂರಪ್ಪ ಕುರಿತು ಹೈಕಮಾಂಡ್ ಗಮನಕ್ಕೆ ತರಬೇಕಿದೆ.

ಸಮಾನ ಮನಸ್ಕರು, ಸೋತ ಅಭ್ಯರ್ಥಿಗಳು, ಗೆದ್ದವರು ಎಲ್ಲರೂ ಕೂಡ ಹೈಕಮಾಂಡ್​ಗೆ ವಿಜಯೇಂದ್ರ ಮತ್ತು ಯಡಿಯೂರಪ್ಪ ಮಾಡಿರುವ ಪಕ್ಷ ವಿರೋಧಿ ಕೆಲಸವನ್ನು ತಿಳಿಸಲು ನಿರ್ಧಾರ ಮಾಡಿದ್ದೇವೆ.

ಮೊದಲು ನಾವೆಲ್ಲರೂ ದೊಡ್ಡ ಸಭೆ ಮಾಡಲು ತೀರ್ಮಾನ ಮಾಡಿದ್ದೇವೆ. ಒಂದು ವಾರದೊಳಗೆ ಸೇರಿ, ಸಭೆ ನಡೆಸಿ ಸಭೆಯಲ್ಲಿ ಬರುವ ತೀರ್ಮಾನದಂತೆ ಹೈಕಮಾಂಡ್​ಗೆ ದೂರು ಕೊಡಲು ತೀರ್ಮಾನ ಮಾಡಿದ್ದೇವೆ.

ನಮ್ಮ ಜೊತೆ ಸೇರುವವರು ಬಹಳ ದೊಡ್ಡ ಸಂಖ್ಯೆಯಲ್ಲಿ ಇದ್ದಾರೆ. ಬಿಜೆಪಿಯಲ್ಲಿ ಇಷ್ಟು ಅಸಮಾಧಾನ ಇದೆ ಅಂತಾ ನನಗೆ ಅನ್ನಿಸಿರಲಿಲ್ಲ. ಮೊನ್ನೆ ವಿಧಾನಸಭೆಯಲ್ಲಿ ಡಿಕೆ ಶಿವಕುಮಾರ್ ಏಜೆಂಟ್ ರೀತಿ ವಿಜಯೇಂದ್ರ ಕೆಲಸ ಮಾಡುದ್ರಲ್ವಾ, ಅವರ ಮುಂದೆ ಫೈಲ್ ತಗೊಂಡ್ ಹೋಗಿ ದಯನೀಯವಾಗಿ ಒಬ್ಬ ರಾಜ್ಯಾಧ್ಯಕ್ಷರು ಪಕ್ಷಕ್ಕೆ ಶೋಭೆಯಲ್ಲ ಎಂದು ನಾ ಮಾತನಾಡಿದ ನಂತರ ಅನೇಕರು ಬಹಳ ಸತ್ಯ ಮಾತನಾಡಿದ್ದೀರಿ. ಈ ರೀತಿಯಾಗಿ ಮಾತನಾಡದೆ ಹೋದರೆ ಪಕ್ಷವೇ ಉಳಿಯುವುದಿಲ್ಲ, ಅನವಶ್ಯಕ ಪಕ್ಷ ಆಗುತ್ತೆ ಅನ್ನೋದು ಎಲ್ಲರ ಮನಸ್ಸಲ್ಲಿ ಇದೆ.

ಈ ಕುರಿತು ಚಾಮರಾಜನಗರದಿಂದ ಬೀದರ್ ವರೆಗೆ ಎಲ್ಲೆಡೆಯಿಂದ ಪೋನ್ ಬರ್ತಾ ಇದೆ. ಇದರದೇ ಸಭೆಯನ್ನ ಕೆಲವೇ ದಿನಗಳಲ್ಲಿ ಮಾಡ್ತೇವೆ ಎಂದು ಯತ್ನಾಳ್ ಹೇಳಿದ್ದಾರೆ.

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ