ಡಿಕೆ ಶಿವಕುಮಾರ್ ಏಜೆಂಟ್ ವಿಜಯೇಂದ್ರ; ಇದು ಪಕ್ಷ ದ್ರೋಹ ಹೈಕಮಾಂಡ್‌ಗೆ ದೂರು ನೀಡ್ತೀವಿ – ಯತ್ನಾಳ್ ಆರ್ಭಟ

ಡಿಕೆ ಶಿವಕುಮಾರ್ ಏಜೆಂಟ್ ವಿಜಯೇಂದ್ರ; ಇದು ಪಕ್ಷ ದ್ರೋಹ ಹೈಕಮಾಂಡ್‌ಗೆ ದೂರು ನೀಡ್ತೀವಿ – ಯತ್ನಾಳ್ ಆರ್ಭಟ

ಬೆಂಗಳೂರು: ಪ್ರತಾಪ್ ಸಿಂಹ ಮತ್ತು ನಾನು ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರಿ ಹೋಗ್ತಾ ಇಲ್ಲ, ಅಪ್ಪ, ಮಕ್ಕಳ ಪಕ್ಷವಾಗಿ ಪರಿವರ್ತನೆಯಾಗಿದೆ ಎಂದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಮಾಜಿ ಸಚಿವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಸಭೆ ಬಳಿಕ ಖಾಸಗಿ ಸುದ್ದಿವಾಹಿನಿ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿರುವ ರಾಜ್ಯಾಧ್ಯಕ್ಷ (ವಿಜಯೇಂದ್ರ) ಮತ್ತು ಯಡಿಯೂರಪ್ಪ ಕುರಿತು ಹೈಕಮಾಂಡ್ ಗಮನಕ್ಕೆ ತರಬೇಕಿದೆ.

ಸಮಾನ ಮನಸ್ಕರು, ಸೋತ ಅಭ್ಯರ್ಥಿಗಳು, ಗೆದ್ದವರು ಎಲ್ಲರೂ ಕೂಡ ಹೈಕಮಾಂಡ್​ಗೆ ವಿಜಯೇಂದ್ರ ಮತ್ತು ಯಡಿಯೂರಪ್ಪ ಮಾಡಿರುವ ಪಕ್ಷ ವಿರೋಧಿ ಕೆಲಸವನ್ನು ತಿಳಿಸಲು ನಿರ್ಧಾರ ಮಾಡಿದ್ದೇವೆ.

ಮೊದಲು ನಾವೆಲ್ಲರೂ ದೊಡ್ಡ ಸಭೆ ಮಾಡಲು ತೀರ್ಮಾನ ಮಾಡಿದ್ದೇವೆ. ಒಂದು ವಾರದೊಳಗೆ ಸೇರಿ, ಸಭೆ ನಡೆಸಿ ಸಭೆಯಲ್ಲಿ ಬರುವ ತೀರ್ಮಾನದಂತೆ ಹೈಕಮಾಂಡ್​ಗೆ ದೂರು ಕೊಡಲು ತೀರ್ಮಾನ ಮಾಡಿದ್ದೇವೆ.

ನಮ್ಮ ಜೊತೆ ಸೇರುವವರು ಬಹಳ ದೊಡ್ಡ ಸಂಖ್ಯೆಯಲ್ಲಿ ಇದ್ದಾರೆ. ಬಿಜೆಪಿಯಲ್ಲಿ ಇಷ್ಟು ಅಸಮಾಧಾನ ಇದೆ ಅಂತಾ ನನಗೆ ಅನ್ನಿಸಿರಲಿಲ್ಲ. ಮೊನ್ನೆ ವಿಧಾನಸಭೆಯಲ್ಲಿ ಡಿಕೆ ಶಿವಕುಮಾರ್ ಏಜೆಂಟ್ ರೀತಿ ವಿಜಯೇಂದ್ರ ಕೆಲಸ ಮಾಡುದ್ರಲ್ವಾ, ಅವರ ಮುಂದೆ ಫೈಲ್ ತಗೊಂಡ್ ಹೋಗಿ ದಯನೀಯವಾಗಿ ಒಬ್ಬ ರಾಜ್ಯಾಧ್ಯಕ್ಷರು ಪಕ್ಷಕ್ಕೆ ಶೋಭೆಯಲ್ಲ ಎಂದು ನಾ ಮಾತನಾಡಿದ ನಂತರ ಅನೇಕರು ಬಹಳ ಸತ್ಯ ಮಾತನಾಡಿದ್ದೀರಿ. ಈ ರೀತಿಯಾಗಿ ಮಾತನಾಡದೆ ಹೋದರೆ ಪಕ್ಷವೇ ಉಳಿಯುವುದಿಲ್ಲ, ಅನವಶ್ಯಕ ಪಕ್ಷ ಆಗುತ್ತೆ ಅನ್ನೋದು ಎಲ್ಲರ ಮನಸ್ಸಲ್ಲಿ ಇದೆ.

ಈ ಕುರಿತು ಚಾಮರಾಜನಗರದಿಂದ ಬೀದರ್ ವರೆಗೆ ಎಲ್ಲೆಡೆಯಿಂದ ಪೋನ್ ಬರ್ತಾ ಇದೆ. ಇದರದೇ ಸಭೆಯನ್ನ ಕೆಲವೇ ದಿನಗಳಲ್ಲಿ ಮಾಡ್ತೇವೆ ಎಂದು ಯತ್ನಾಳ್ ಹೇಳಿದ್ದಾರೆ.

Latest News

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ

ಬಾಕಿ ಬಿಲ್ ಪಾವತಿಗೆ ಆಗ್ರಹ :                                             ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಬಾಕಿ ಬಿಲ್ ಪಾವತಿಗೆ ಆಗ್ರಹ : ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಮುದ್ದೇಬಿಹಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದೆರಡೂವರೆ ವರ್ಷಗಳಿಂದ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ ಇರುವ ಕಾರಣದಿಂದ ಗುತ್ತಿಗೆದಾರರ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ ಎಂದು ಗುತ್ತಿಗೆದಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಯ್.ಎಂ.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಸಭಾಭವನದಲ್ಲಿ ಭಾನುವಾರ ತಾಲ್ಲೂಕು ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರದಲ್ಲಿ 30 ಸಾವಿರ ಕೋಟಿಗೂ ಅಧಿಕ ಬಿಲ್ ಪಾವತಿಸುವುದು ಬಾಕಿ ಉಳಿಸಿಕೊಂಡಿರುವುದರಿAದ ಎಲ್ಲ ಹಂತದ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಎಂ.ಎಸ್.ಕೊಪ್ಪ ಅವರು ಆರಂಭಿಸಿರುವ ಶಾಲೆ ಬಡವರ ಮಕ್ಕಳಿಗೆ ಶಿಕ್ಷಣ ನೀಡುವ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಮುದ್ದೇಬಿಹಾಳ ತಾಲ್ಲೂಕು ಇಂದು ಶಿಕ್ಷಣಕ್ಕೆ ಒಳ್ಳೆಯ ಹೆಸರು ಮಾಡಿದೆ.ಬಿಎಎಸ್ ಶಾಲೆ, ಅಂಜುಮನ್ ಸಂಸ್ಥೆ,ಅಹಿಲ್ಯಾದೇವಿ ಶಿಕ್ಷಣ ಸಂಸ್ಥೆ,ನಾಗರಬೆಟ್ಟ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ