Basanna leader visits special 'tax collection campaign' for debt collection in village panchayats

ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗೆ ವಿಶೇಷ ‘ತೆರಿಗೆ ವಸೂಲಾತಿ ಅಭಿಯಾನಕ್ಕೆ ಬಸಣ್ಣ ನಾಯಕ ಭೇಟಿ

ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗೆ ವಿಶೇಷ ‘ತೆರಿಗೆ ವಸೂಲಾತಿ ಅಭಿಯಾನಕ್ಕೆ ಬಸಣ್ಣ ನಾಯಕ ಭೇಟಿ

ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ “ತೆರಿಗೆ ವಸೂಲಾತಿ ಅಭಿಯಾನ” ಈಗಾಗಲೇ ಪ್ರಾರಂಭಗೊಂಡಿದೆ. ಗ್ರಾಮ ಪಂಚಾಯಿತಿಗಳು ವಿಕೇಂದ್ರಿಕರಣ ವ್ಯವಸ್ಥೆಯಲ್ಲಿ ಸಶಕ್ತ ಕೇಂದ್ರಗಳಾಗಿ ಕಾರ್ಯನಿರ್ವಹಿಸಲು ಆರ್ಥಿಕವಾಗಿ ಸಬಲೀಕರಣ ಹೊಂದುವ ಅವಶ್ಯಕತೆ ಇರುತ್ತದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 200 (7) ರಲ್ಲಿ ನಿರ್ಧಿಷ್ಟ ಪಡಿಸಿರುವಂತೆ ಗ್ರಾಮ ಪಂಚಾಯಿತಿಗೆ ಸಲ್ಲಿಕೆ ಆಗಬೇಕಾಗಿರುವ ತೆರಿಗೆಯಲ್ಲಿ ಶೇ.100ರಷ್ಟು ವಸೂಲಿ ಮಾಡುವುದು ಗ್ರಾಮ ಪಂಚಾತಿಯ ಪ್ರಾಥಮಿಕ ಹೊಣೆಗಾರಿಕೆಯಾಗಿರುತ್ತದೆ. ಈ ದಿಸೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಕ್ರೂಢೀಕರಿಸಿಕೊಳ್ಳಲು ಕರವಸೂಲಾತಿ ಅಭಿಯಾನದ ಪ್ರಕ್ರಿಯೆಯನ್ನು ಒಂದು ವಿಶೇಷ ಅಂದೋಲನವನ್ನಾಗಿ ನಡೆಸಬೇಕಾಗಿರುತ್ತದೆ.

ಹುಣಸಗಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ತಂಡವನ್ನು ರಚಿಸಿ, ಕಡ್ಡಾಯವಾಗಿ ತೆರಿಗೆ ವಸೂಲಾತಿ ಅಭಿಯಾನ ಹಮ್ಮಿಕೊಳ್ಳಬೇಕು.

ಹುಣಸಗಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕುಂಠಿತವಾಗಿರುವ ಕಂದಾಯ ವಸೂಲಾತಿ ಪ್ರಗತಿಯನ್ನು ಹೆಚ್ಚಿಸುವ ಹಿನ್ನಲೆಯಲ್ಲಿ ಕೂಡಲೇ ತೆರಿಗೆ ವಸೂಲಾತಿ ಅಭಿಯಾನ ಹಮ್ಮಿಕೊಂಡು ಪ್ರಗತಿ ಸಾಧಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ, ಕಂದಾಯ ವಸೂಲಾತಿಯಲ್ಲಿ ಪ್ರಗತಿ ಸಾಧಿಸಬೇಕು. ತಪ್ಪಿದ್ದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೇ ನೇರ ಹೊಣೆಗಾರರನ್ನಾಗಿಸಲಾಗುವುದು ಎಂದು ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಸಣ್ಣ ನಾಯಕ ತಿಳಿಸಿದ್ದಾರೆ.

ಜಿ.ಪಂ. ಸಿಇಒ ಅವರ ನಿರ್ದೇಶನದಂತೆ ಗ್ರಾಮ ಪಂಚಾಯತಿಗಳನ್ನು ಸಶಕ್ತಗೊಳಿಸುವ ಉದ್ದೇಶದಿಂದ ನಮ್ಮ ಹುಣಸಗಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈಗಾಗಲೆ ಕರ ವಸೂಲಾತಿ ಆಂದೋಲನ ಪ್ರಾರಂಭವಾಗಿದ್ದು, ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿಗಳು, ಬಸಣ್ಣ ನಾಯಕ ಸರ್ ರವರು ಭೇಟಿ ನೀಡಿ, ವಿಶೇಷ ಕರ ವಸೂಲಾತಿ ಅಭಿಯಾನದ ಪ್ರಕ್ರಿಯೆನ್ನು ವೀಕ್ಷಿಸಿದರು ನಂತರ ಮನೆ ಮನೆಗೆ ಹಾಗೂ ಅಂಗಡಿ ಮುಗಟ್ಟುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಕರ ವಸೂಲಿಯ ಬಗ್ಗೆ ಮಾಹಿತಿ ನೀಡಿ ಪಂಚಾಯತ್ ಸಿಬ್ಬಂದಿಗಳಿಗೆ ಹೆಚ್ಚು ಕರ ಸಂಗ್ರಹಣಿ ಮಾಡುವಂತೆ ತಿಳಿಸಿದರು. ಮುದನೂರ, ಕನ್ನಳ್ಳಿ, ಹೆಬ್ಬಾಳ, ರಾಜನಕೊಳೂರ, ಗ್ರಾಮ ಪಚಾಯತಿಗೆ ಬೆಟ್ಟಿ ನೀಡಿದರು.

ವರದಿ : ಶಿವು ರಾಠೋಡ

Latest News

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ ಮಾಡಬೇಕು ಎಂದು ಬಿಇಒ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸನ್ 2026-27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆಟಗಳಲ್ಲಿ ಇಂದು ಸಾಕಷ್ಟು ಬದಲಾವಣೆಗಳಾಗಿದ್ದು ಗೆದ್ದವರು ಹಿಗ್ಗದೇ ಸೋತವರು ಕುಗ್ಗದೇ ಸ್ಪರ್ಧಾ ಮನೋಭಾವದಿಂದ ಆಟಗಳಲ್ಲಿ ಪಾಲ್ಗೊಳ್ಳುವಂತೆ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ