Basanna leader visits special 'tax collection campaign' for debt collection in village panchayats

ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗೆ ವಿಶೇಷ ‘ತೆರಿಗೆ ವಸೂಲಾತಿ ಅಭಿಯಾನಕ್ಕೆ ಬಸಣ್ಣ ನಾಯಕ ಭೇಟಿ

ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗೆ ವಿಶೇಷ ‘ತೆರಿಗೆ ವಸೂಲಾತಿ ಅಭಿಯಾನಕ್ಕೆ ಬಸಣ್ಣ ನಾಯಕ ಭೇಟಿ

ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ “ತೆರಿಗೆ ವಸೂಲಾತಿ ಅಭಿಯಾನ” ಈಗಾಗಲೇ ಪ್ರಾರಂಭಗೊಂಡಿದೆ. ಗ್ರಾಮ ಪಂಚಾಯಿತಿಗಳು ವಿಕೇಂದ್ರಿಕರಣ ವ್ಯವಸ್ಥೆಯಲ್ಲಿ ಸಶಕ್ತ ಕೇಂದ್ರಗಳಾಗಿ ಕಾರ್ಯನಿರ್ವಹಿಸಲು ಆರ್ಥಿಕವಾಗಿ ಸಬಲೀಕರಣ ಹೊಂದುವ ಅವಶ್ಯಕತೆ ಇರುತ್ತದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 200 (7) ರಲ್ಲಿ ನಿರ್ಧಿಷ್ಟ ಪಡಿಸಿರುವಂತೆ ಗ್ರಾಮ ಪಂಚಾಯಿತಿಗೆ ಸಲ್ಲಿಕೆ ಆಗಬೇಕಾಗಿರುವ ತೆರಿಗೆಯಲ್ಲಿ ಶೇ.100ರಷ್ಟು ವಸೂಲಿ ಮಾಡುವುದು ಗ್ರಾಮ ಪಂಚಾತಿಯ ಪ್ರಾಥಮಿಕ ಹೊಣೆಗಾರಿಕೆಯಾಗಿರುತ್ತದೆ. ಈ ದಿಸೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಕ್ರೂಢೀಕರಿಸಿಕೊಳ್ಳಲು ಕರವಸೂಲಾತಿ ಅಭಿಯಾನದ ಪ್ರಕ್ರಿಯೆಯನ್ನು ಒಂದು ವಿಶೇಷ ಅಂದೋಲನವನ್ನಾಗಿ ನಡೆಸಬೇಕಾಗಿರುತ್ತದೆ.

ಹುಣಸಗಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ತಂಡವನ್ನು ರಚಿಸಿ, ಕಡ್ಡಾಯವಾಗಿ ತೆರಿಗೆ ವಸೂಲಾತಿ ಅಭಿಯಾನ ಹಮ್ಮಿಕೊಳ್ಳಬೇಕು.

ಹುಣಸಗಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕುಂಠಿತವಾಗಿರುವ ಕಂದಾಯ ವಸೂಲಾತಿ ಪ್ರಗತಿಯನ್ನು ಹೆಚ್ಚಿಸುವ ಹಿನ್ನಲೆಯಲ್ಲಿ ಕೂಡಲೇ ತೆರಿಗೆ ವಸೂಲಾತಿ ಅಭಿಯಾನ ಹಮ್ಮಿಕೊಂಡು ಪ್ರಗತಿ ಸಾಧಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ, ಕಂದಾಯ ವಸೂಲಾತಿಯಲ್ಲಿ ಪ್ರಗತಿ ಸಾಧಿಸಬೇಕು. ತಪ್ಪಿದ್ದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೇ ನೇರ ಹೊಣೆಗಾರರನ್ನಾಗಿಸಲಾಗುವುದು ಎಂದು ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಸಣ್ಣ ನಾಯಕ ತಿಳಿಸಿದ್ದಾರೆ.

ಜಿ.ಪಂ. ಸಿಇಒ ಅವರ ನಿರ್ದೇಶನದಂತೆ ಗ್ರಾಮ ಪಂಚಾಯತಿಗಳನ್ನು ಸಶಕ್ತಗೊಳಿಸುವ ಉದ್ದೇಶದಿಂದ ನಮ್ಮ ಹುಣಸಗಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈಗಾಗಲೆ ಕರ ವಸೂಲಾತಿ ಆಂದೋಲನ ಪ್ರಾರಂಭವಾಗಿದ್ದು, ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿಗಳು, ಬಸಣ್ಣ ನಾಯಕ ಸರ್ ರವರು ಭೇಟಿ ನೀಡಿ, ವಿಶೇಷ ಕರ ವಸೂಲಾತಿ ಅಭಿಯಾನದ ಪ್ರಕ್ರಿಯೆನ್ನು ವೀಕ್ಷಿಸಿದರು ನಂತರ ಮನೆ ಮನೆಗೆ ಹಾಗೂ ಅಂಗಡಿ ಮುಗಟ್ಟುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಕರ ವಸೂಲಿಯ ಬಗ್ಗೆ ಮಾಹಿತಿ ನೀಡಿ ಪಂಚಾಯತ್ ಸಿಬ್ಬಂದಿಗಳಿಗೆ ಹೆಚ್ಚು ಕರ ಸಂಗ್ರಹಣಿ ಮಾಡುವಂತೆ ತಿಳಿಸಿದರು. ಮುದನೂರ, ಕನ್ನಳ್ಳಿ, ಹೆಬ್ಬಾಳ, ರಾಜನಕೊಳೂರ, ಗ್ರಾಮ ಪಚಾಯತಿಗೆ ಬೆಟ್ಟಿ ನೀಡಿದರು.

ವರದಿ : ಶಿವು ರಾಠೋಡ

Latest News

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮುದ್ದೇಬಿಹಾಳ : ಬಿಎಎಸ್ ಸ್ಟಾಫಿಂಗ್ ಸಲೂಷನ್ಸ್ ಪ್ರೆöÊವೆಟ್ ಲಿಮಿಟೆಡ್ ಕಂಪನಿಯಿoದ ಮೇ.3 ರಂದು ಮುದ್ದೇಬಿಹಾಳದಲ್ಲಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಸೌಜನ್ಯಾ ಕಂದಕೂರಗೆ 625 ಅಂಕ :                        ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಸೌಜನ್ಯಾ ಕಂದಕೂರಗೆ 625 ಅಂಕ : ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಈ ವರ್ಷವೂ 625ಕ್ಕೆ 625 ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಮೊದಲಿಗಳಾಗಿ ಹೊರಹೊಮ್ಮಿದ್ದು ಶಾಲೆ ಹಾಗೂ ತನ್ನನ್ನು ಹೆತ್ತವರ ಕೀರ್ತಿ ತಂದಿದ್ದಾಳೆ.ಹುನಗುಂದ ತಾಲ್ಲೂಕಿನ ನಿವೃತ್ತ ಶಿಕ್ಷಕ ಬಸವರಾಜ ಕಂದಕೂರ ಹಾಗೂ ಇಲಕಲ್ ಶಿಕ್ಷಣದ ಇಲಾಖೆಯಲ್ಲಿ ಸಿಆರ್‌ಪಿ ಆಗಿ ಸೇವೆ ಸಲ್ಲಿಸುತ್ತಿರುವ ಗಿರಿಜಾ ಕಂದಕೂರ ಅವರ ಪುತ್ರಿ ಸೌಜನ್ಯಾ ಕಂದಕೂರ 625 ಅಂಕಗಳನ್ನು ಪಡೆದುಕೊಂಡು ಅದ್ವಿತೀಯ ಸಾಧನೆ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು ಕೆಲವು ವಿದ್ಯಾಸಂಸ್ಥೆಯವರು ಸಂಪರ್ಕಿಸಿ ಅವರನ್ನು ತಮ್ಮ ವಿದ್ಯಾಸಂಸ್ಥೆಗಳಲ್ಲಿ ಉಚಿತವಾಗಿ ಓದಿಸುವ ಭರವಸೆ ನೀಡುತ್ತಿದ್ದು ಅದಕ್ಕೆ ಪಾಲಕರ ಮಾರು ಹೋಗಬಾರದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುವಾರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದುಕೊಂಡ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಶೇ.90-95ಕ್ಕೂ