ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ತಿಳಿಸಿದರು.

ಎರಡನೇ ಅವಧಿಗೆ ತಮ್ಮನ್ನು ಅಧ್ಯಕ್ಷರನ್ನಾಗಿ ಆಯ್ಕೆಯಾದ ನೂತನ ಅಧ್ಯಕ್ಷ ಹೇಮರೆಡ್ಡಿ ಮೇಟಿ ಮಾತನಾಡಿ, ಆಡಳಿತ ಮಂಡಳಿಯ ಸದಸ್ಯರ ವಿಶ್ವಾಸವನ್ನು ನಾವು ಉಳಿಸಿಕೊಳ್ಳುತ್ತೇವೆ.ಹಿಂದಿನವರು ಮಾಡಿದ ಲೋಪಗಳು ರೈತರಿಗೆ ಸಮಸ್ಯೆಯನ್ನು ಉಂಟು ಮಾಡಿದ್ದವು.ಆದರೆ ನಾವು ಕಳೆದ ಅವಧಿಯಲ್ಲಿ 700ಕ್ಕೂ ಹೆಚ್ಚು ರೈತರಿಗೆ ಸಾಲ ಸೌಲಭ್ಯ ನೀಡಿದ್ದೇವೆ.ರಸಗೊಬ್ಬರ,ಬೀಜದ ಮಳಿಗೆ ಆರಂಭಿಸಿ ರೈತರಿಗೆ ಅನುಕೂಲ ಕಲ್ಪಿಸಿದ್ದೇವೆ.ಸಂಘಕ್ಕೆ ಸ್ವಂತ ನಿವೇಶನ ಖರೀದಿಸಿದ್ದು ಮುಂದಿನ ವರ್ಷ ಸೊಸೈಟಿಯ ವಾರ್ಷಿಕ ಸಭೆಯನ್ನು ಸಂಘದ ನೂತನ ಕಟ್ಟಡದಲ್ಲಿಯೇ ನಡೆಸುವ ಕಾರ್ಯವನ್ನು ಮಾಡುತ್ತೇವೆ ಎಂದು ತಿಳಿಸಿದರು.

ಸಂಘದ ಉಪಾಧ್ಯಕ್ಷ ಬಾಬು ಸೂಳಿಭಾವಿ ಮಾತನಾಡಿದರು.ಸಂಘದ ಸದಸ್ಯರಾದ ಸಿಂಧೂಬಲ್ಲಾಳ ನಾಡಗೌಡ, ಸುನೀಲ ಸೂಳಿಭಾವಿ,ಸೋಮಪ್ಪ ಮೇಟಿ,ಬಸವರಾಜ ಪಾಟೀಲ,ಲಕ್ಕಪ್ಪ ಸೋಮನಾಳ, ಶಾಂತಪ್ಪ ಸಂಕನಾಳ,ಮಡಿವಾಳಪ್ಪ ತಳವಾರ, ಶೇಖಪ್ಪ ಚಲವಾದಿ, ಪಾರ್ವತಿ ಸಾಲಿಮಠ, ಸಿದ್ದಮ್ಮ ಬಿರಾದಾರ, ಗ್ರಾಮದ ಮುಖಂಡರಾದ ನೀಲಕಂಠರಾವ ನಾಡಗೌಡ(ಅಪ್ಪುಧಣಿ), ಶ್ರೀಶೈಲ ಮೇಟಿ, ಡಿ.ಬಿ.ಬೇಲಾಳ, ಮಂಜುನಾಥ ಚಲವಾದಿ,ಗೌಡಪ್ಪಗೌಡ ಪಾಟೀಲ,ಪ್ರಕಾಶ ಬಿರಾದಾರ, ಅಂದಾನಯ್ಯ ಸಾಲಿಮಠ ಮೊದಲಾದವರು ಇದ್ದರು.

Latest News

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಮುದ್ದೇಬಿಹಾಳ : ರಾಯಚೂರಿನ ಸಿದ್ದರಾಮ ಜಮ್ಮಲದಿನ್ನಿ ಕಲ್ಯಾಣ ಮಂಟಪದಲ್ಲಿ ನಡೆದ ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ :                   ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ಮುದ್ದೇಬಿಹಾಳ : ನಗರ ಪ್ರದೇಶಗಳಲ್ಲಾದರೆ ಸಂಸ್ಥೆಗಳು ಕೇಳಿದಷ್ಟು ಶುಲ್ಕ ಕೊಡಲು ಪಾಲಕರು ಸಿದ್ಧರಿರುತ್ತಾರೆ.ಅಲ್ಲಿ ಶಿಕ್ಷಣ

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಶಾಸಕರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ

ಟಗರಿನ ಕಾಳಗ ಪ್ರಮುಖ ಆಕರ್ಷಣೆ:                              ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಟಗರಿನ ಕಾಳಗ ಪ್ರಮುಖ ಆಕರ್ಷಣೆ: ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದಲ್ಲಿರುವ ಪಿಲೇಕೆಮ್ಮ ದೇವಿ ಜಾತ್ರಾಮಹೋತ್ಸವ ಮಾ.18 ಹಾಗೂ 19ರಂದು

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಏಜ್ಯೂಕೇಷನ ರೂರಲ್ ಕಲ್ಚರಲ್ ಸೊಸೈಟಿಯಿಂದ ಪ್ರತಿ ವರ್ಷ ಕೊಡಮಾಡುವ ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿಗೆ ಮಾಧ್ಯಮ, ಸಂಕೀರ್ಣ,ಶಿಕ್ಷಣ,ಸಾಮಾಜಿಕ ಹೋರಾಟ ಕ್ಷೇತ್ರಗಳಿಂದ ಒಟ್ಟು 30 ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುದ್ದೇಬಿಹಾಳ ತಾಲ್ಲೂಕಿನ ಹಂಡರಗಲ್‌ದಲ್ಲಿ ತ್ರಿಕೂಟೇಶ್ವರ ದೇವಸ್ಥಾನದ ಉಳಿವು,ಜೀರ್ಣೋದ್ಧಾರಕ್ಕೆ ಹೋರಾಟ ಮಾಡಿದ ಕುಮಾರಸ್ವಾಮಿ ಹಿರೇಮಠ, ಮಾಧ್ಯಮ ಕ್ಷೇತ್ರದಲ್ಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ:                     ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ ಇಲ್ಲ.ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಇದುವರೆಗೂ ಏನೂ ಮಾಡಿಲ್ಲ.ಸಿಲಿಂಡರ್ ದೊರೆಯದಂತಹ ಪರಿಸ್ಥಿತಿ ತಂದಿಟ್ಟಿದ್ದು ತುರ್ತು ಸ್ಥಿತಿ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಸಚೀನಗೌಡ ಪಾಟೀಲ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಎನ್.ಎಸ್.ಯೂ.ಐ., ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್‌ನಿAದ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ