beṅgaḷūru Bengaluru achieved a thrilling win against Chennai

ಚೆನ್ನೈ ವಿರುದ್ಧ ರೋಚಕ ಜಯ ಸಾಧಿಸಿದ ಬೆಂಗಳೂರು

ಚೆನ್ನೈ ವಿರುದ್ಧ ರೋಚಕ ಜಯ ಸಾಧಿಸಿದ ಬೆಂಗಳೂರು

ಬೆಂಗಳೂರು: ಚೆನ್ನೈ ವಿರುದ್ಧ ತವರಿಂನಗಳದಲ್ಲಿ ನಡೆದ ಪಂದ್ಯದಲ್ಲಿ ಆರ್.ಸಿ.ಬಿ ರೋಚಕ 2 ರನ್ ಗಳ ಜಯಸಾಧಿಸಿದೆ‌.

ಮೊದಲು ಬ್ಯಾಟಿಂಗ್‌ ಮಾಡಿದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಆರಂಭಿಕ ಆಟಗಾರರ ಅಬ್ಬರ ಹಾಗೂ ಅಂತಿಮ ಹಂತದಲ್ಲಿ ಶೆಫರ್ಡ್‌ ರೌದ್ರಾವತಾರದ ಆಟದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 213 ರನ್‌ ಕಲೆಹಾಕಿದ್ದು, 214 ರನ್‌ಗಳ ಗುರಿಯನ್ನು ನೀಡಿತ್ತು.

ಗುರಿ ಬೆನ್ನತ್ತಿದ್ದ ಸಿ.ಎಸ್.ಕೆ ತಂಡ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 211 ರನ್ ಕಲೆ ಹಾಕಿ ವಿರೋಚಿತ ಸೋಲು ಕಂಡಿತ್ತು.

8 ಪಂದ್ಯಗಳನ್ನು ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ 16 ಅಂಕಗಳನ್ನು ಪಡೆದುಕೊಂಡು ಅಗ್ರಸ್ಥಾನಕ್ಕೇರಿದೆ. ಇನ್ನು ಈ ಬಾರಿಯ ಪ್ಲೇಆಫ್‌ ಪ್ರವೇಶಿಸಲು ಕನಿಷ್ಟ 16 ಅಂಕಗಳು ಬೇಕಾಗುವ ಸಾಧ್ಯತೆಗಳು ಹೆಚ್ಚಿದ್ದು, ಆರ್‌ಸಿಬಿ ಈಗಾಗಲೇ ಆ ಅಂಕವನ್ನು ಪಡೆದುಕೊಂಡಿದೆ. ಆರ್‌ಸಿಬಿ ಇನ್ನೂ 3 ಪಂದ್ಯಗಳನ್ನಾಡಲಿದ್ದು ಇದರಲ್ಲಿ ಒಂದು ಪಂದ್ಯವನ್ನು ಗೆದ್ದರು 18 ಅಂಕಗಳಾಗಲಿದ್ದು, ಟಾಪ್‌ 2 ರಲ್ಲಿ ಸ್ಥಾನ ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ.

17ನೇ ಓವರ್‌ನ ಮೂರನೇ ಎಸೆತದಲ್ಲಿ ಆರ್‌ಸಿಬಿ ವೇಗದ ಬೌಲರ್ ಲುಂಗಿ ಎನ್‌ಗಿಡಿ ಸಿಎಸ್‌ಕೆ ಬ್ಯಾಟರ್ ಡೆವಾಲ್ಡ್ ಬ್ರೆವಿಸ್‌ರನ್ನು ವಿಕೆಟ್ ಮುಂದೆ ಟ್ರ್ಯಾಪ್ ಮಾಡಿದರು. ಆಗ ಅಂಪೈರ್ ತಕ್ಷಣವೇ ಎಲ್‌ಬಿಡಬ್ಲ್ಯೂ ಔಟ್ ಎಂದು ತೀರ್ಮಾನಿಸಿದರು. ಆದರೆ, ಮೈದಾನದ ದೊಡ್ಡ ಪರದೆಯಲ್ಲಿ ಡಿಆರ್‌ಎಸ್ ಗಡಿಯಾರ ಕಾಣಿಸದ ಕಾರಣ, ಬ್ರೆವಿಸ್ ಎರಡು ರನ್‌ಗಾಗಿ ಓಡಲು ಯತ್ನಿಸಿದರು. ಆದರೆ, ಅಂಪೈರ್ ಅವರಿಗೆ ಔಟ್ ಆಗಿರುವುದನ್ನು ತಿಳಿಸಿದಾಗ, ಬ್ರೆವಿಸ್ ಡಿಆರ್‌ಎಸ್ ಮೂಲಕ ತೀರ್ಮಾನವನ್ನು ಪರಿಶೀಲಿಸಲು ಒತ್ತಾಯಿಸಿದರು. ಆದರೆ, ಈ ಸಂದರ್ಭದಲ್ಲಿ ಡಿಆರ್‌ಎಸ್ ಕರೆಗೆ ನಿಗದಿಯಾದ 15 ಸೆಕೆಂಡ್‌ಗಳ ಸಮಯ ಮುಗಿದಿತ್ತು. ಇದರಿಂದಾಗಿ, ಬ್ರೆವಿಸ್ ಗೋಲ್ಡನ್ ಡಕ್‌ನೊಂದಿಗೆ ಪೆವಿಲಿಯನ್‌ಗೆ ಮರಳಬೇಕಾಯಿತು.

17 ವರ್ಷಗಳ ನಂತರ ಆರ್.ಸಿ.ಬಿ ತಂಡ ಚೆನ್ನೈ ವಿರುದ್ಧ ಎರಡು ಪಂದ್ಯಗಳನ್ನು ಗೆದ್ದು ಇತಿಹಾಸ ಸೃಷ್ಟಿಸಿದೆ.

Latest News

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ