beṅgaḷūru Bengaluru achieved a thrilling win against Chennai

ಚೆನ್ನೈ ವಿರುದ್ಧ ರೋಚಕ ಜಯ ಸಾಧಿಸಿದ ಬೆಂಗಳೂರು

ಚೆನ್ನೈ ವಿರುದ್ಧ ರೋಚಕ ಜಯ ಸಾಧಿಸಿದ ಬೆಂಗಳೂರು

ಬೆಂಗಳೂರು: ಚೆನ್ನೈ ವಿರುದ್ಧ ತವರಿಂನಗಳದಲ್ಲಿ ನಡೆದ ಪಂದ್ಯದಲ್ಲಿ ಆರ್.ಸಿ.ಬಿ ರೋಚಕ 2 ರನ್ ಗಳ ಜಯಸಾಧಿಸಿದೆ‌.

ಮೊದಲು ಬ್ಯಾಟಿಂಗ್‌ ಮಾಡಿದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಆರಂಭಿಕ ಆಟಗಾರರ ಅಬ್ಬರ ಹಾಗೂ ಅಂತಿಮ ಹಂತದಲ್ಲಿ ಶೆಫರ್ಡ್‌ ರೌದ್ರಾವತಾರದ ಆಟದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 213 ರನ್‌ ಕಲೆಹಾಕಿದ್ದು, 214 ರನ್‌ಗಳ ಗುರಿಯನ್ನು ನೀಡಿತ್ತು.

ಗುರಿ ಬೆನ್ನತ್ತಿದ್ದ ಸಿ.ಎಸ್.ಕೆ ತಂಡ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 211 ರನ್ ಕಲೆ ಹಾಕಿ ವಿರೋಚಿತ ಸೋಲು ಕಂಡಿತ್ತು.

8 ಪಂದ್ಯಗಳನ್ನು ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ 16 ಅಂಕಗಳನ್ನು ಪಡೆದುಕೊಂಡು ಅಗ್ರಸ್ಥಾನಕ್ಕೇರಿದೆ. ಇನ್ನು ಈ ಬಾರಿಯ ಪ್ಲೇಆಫ್‌ ಪ್ರವೇಶಿಸಲು ಕನಿಷ್ಟ 16 ಅಂಕಗಳು ಬೇಕಾಗುವ ಸಾಧ್ಯತೆಗಳು ಹೆಚ್ಚಿದ್ದು, ಆರ್‌ಸಿಬಿ ಈಗಾಗಲೇ ಆ ಅಂಕವನ್ನು ಪಡೆದುಕೊಂಡಿದೆ. ಆರ್‌ಸಿಬಿ ಇನ್ನೂ 3 ಪಂದ್ಯಗಳನ್ನಾಡಲಿದ್ದು ಇದರಲ್ಲಿ ಒಂದು ಪಂದ್ಯವನ್ನು ಗೆದ್ದರು 18 ಅಂಕಗಳಾಗಲಿದ್ದು, ಟಾಪ್‌ 2 ರಲ್ಲಿ ಸ್ಥಾನ ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ.

17ನೇ ಓವರ್‌ನ ಮೂರನೇ ಎಸೆತದಲ್ಲಿ ಆರ್‌ಸಿಬಿ ವೇಗದ ಬೌಲರ್ ಲುಂಗಿ ಎನ್‌ಗಿಡಿ ಸಿಎಸ್‌ಕೆ ಬ್ಯಾಟರ್ ಡೆವಾಲ್ಡ್ ಬ್ರೆವಿಸ್‌ರನ್ನು ವಿಕೆಟ್ ಮುಂದೆ ಟ್ರ್ಯಾಪ್ ಮಾಡಿದರು. ಆಗ ಅಂಪೈರ್ ತಕ್ಷಣವೇ ಎಲ್‌ಬಿಡಬ್ಲ್ಯೂ ಔಟ್ ಎಂದು ತೀರ್ಮಾನಿಸಿದರು. ಆದರೆ, ಮೈದಾನದ ದೊಡ್ಡ ಪರದೆಯಲ್ಲಿ ಡಿಆರ್‌ಎಸ್ ಗಡಿಯಾರ ಕಾಣಿಸದ ಕಾರಣ, ಬ್ರೆವಿಸ್ ಎರಡು ರನ್‌ಗಾಗಿ ಓಡಲು ಯತ್ನಿಸಿದರು. ಆದರೆ, ಅಂಪೈರ್ ಅವರಿಗೆ ಔಟ್ ಆಗಿರುವುದನ್ನು ತಿಳಿಸಿದಾಗ, ಬ್ರೆವಿಸ್ ಡಿಆರ್‌ಎಸ್ ಮೂಲಕ ತೀರ್ಮಾನವನ್ನು ಪರಿಶೀಲಿಸಲು ಒತ್ತಾಯಿಸಿದರು. ಆದರೆ, ಈ ಸಂದರ್ಭದಲ್ಲಿ ಡಿಆರ್‌ಎಸ್ ಕರೆಗೆ ನಿಗದಿಯಾದ 15 ಸೆಕೆಂಡ್‌ಗಳ ಸಮಯ ಮುಗಿದಿತ್ತು. ಇದರಿಂದಾಗಿ, ಬ್ರೆವಿಸ್ ಗೋಲ್ಡನ್ ಡಕ್‌ನೊಂದಿಗೆ ಪೆವಿಲಿಯನ್‌ಗೆ ಮರಳಬೇಕಾಯಿತು.

17 ವರ್ಷಗಳ ನಂತರ ಆರ್.ಸಿ.ಬಿ ತಂಡ ಚೆನ್ನೈ ವಿರುದ್ಧ ಎರಡು ಪಂದ್ಯಗಳನ್ನು ಗೆದ್ದು ಇತಿಹಾಸ ಸೃಷ್ಟಿಸಿದೆ.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ