beṅgaḷūru Bengaluru achieved a thrilling win against Chennai

ಚೆನ್ನೈ ವಿರುದ್ಧ ರೋಚಕ ಜಯ ಸಾಧಿಸಿದ ಬೆಂಗಳೂರು

ಚೆನ್ನೈ ವಿರುದ್ಧ ರೋಚಕ ಜಯ ಸಾಧಿಸಿದ ಬೆಂಗಳೂರು

ಬೆಂಗಳೂರು: ಚೆನ್ನೈ ವಿರುದ್ಧ ತವರಿಂನಗಳದಲ್ಲಿ ನಡೆದ ಪಂದ್ಯದಲ್ಲಿ ಆರ್.ಸಿ.ಬಿ ರೋಚಕ 2 ರನ್ ಗಳ ಜಯಸಾಧಿಸಿದೆ‌.

ಮೊದಲು ಬ್ಯಾಟಿಂಗ್‌ ಮಾಡಿದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಆರಂಭಿಕ ಆಟಗಾರರ ಅಬ್ಬರ ಹಾಗೂ ಅಂತಿಮ ಹಂತದಲ್ಲಿ ಶೆಫರ್ಡ್‌ ರೌದ್ರಾವತಾರದ ಆಟದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 213 ರನ್‌ ಕಲೆಹಾಕಿದ್ದು, 214 ರನ್‌ಗಳ ಗುರಿಯನ್ನು ನೀಡಿತ್ತು.

ಗುರಿ ಬೆನ್ನತ್ತಿದ್ದ ಸಿ.ಎಸ್.ಕೆ ತಂಡ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 211 ರನ್ ಕಲೆ ಹಾಕಿ ವಿರೋಚಿತ ಸೋಲು ಕಂಡಿತ್ತು.

8 ಪಂದ್ಯಗಳನ್ನು ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ 16 ಅಂಕಗಳನ್ನು ಪಡೆದುಕೊಂಡು ಅಗ್ರಸ್ಥಾನಕ್ಕೇರಿದೆ. ಇನ್ನು ಈ ಬಾರಿಯ ಪ್ಲೇಆಫ್‌ ಪ್ರವೇಶಿಸಲು ಕನಿಷ್ಟ 16 ಅಂಕಗಳು ಬೇಕಾಗುವ ಸಾಧ್ಯತೆಗಳು ಹೆಚ್ಚಿದ್ದು, ಆರ್‌ಸಿಬಿ ಈಗಾಗಲೇ ಆ ಅಂಕವನ್ನು ಪಡೆದುಕೊಂಡಿದೆ. ಆರ್‌ಸಿಬಿ ಇನ್ನೂ 3 ಪಂದ್ಯಗಳನ್ನಾಡಲಿದ್ದು ಇದರಲ್ಲಿ ಒಂದು ಪಂದ್ಯವನ್ನು ಗೆದ್ದರು 18 ಅಂಕಗಳಾಗಲಿದ್ದು, ಟಾಪ್‌ 2 ರಲ್ಲಿ ಸ್ಥಾನ ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ.

17ನೇ ಓವರ್‌ನ ಮೂರನೇ ಎಸೆತದಲ್ಲಿ ಆರ್‌ಸಿಬಿ ವೇಗದ ಬೌಲರ್ ಲುಂಗಿ ಎನ್‌ಗಿಡಿ ಸಿಎಸ್‌ಕೆ ಬ್ಯಾಟರ್ ಡೆವಾಲ್ಡ್ ಬ್ರೆವಿಸ್‌ರನ್ನು ವಿಕೆಟ್ ಮುಂದೆ ಟ್ರ್ಯಾಪ್ ಮಾಡಿದರು. ಆಗ ಅಂಪೈರ್ ತಕ್ಷಣವೇ ಎಲ್‌ಬಿಡಬ್ಲ್ಯೂ ಔಟ್ ಎಂದು ತೀರ್ಮಾನಿಸಿದರು. ಆದರೆ, ಮೈದಾನದ ದೊಡ್ಡ ಪರದೆಯಲ್ಲಿ ಡಿಆರ್‌ಎಸ್ ಗಡಿಯಾರ ಕಾಣಿಸದ ಕಾರಣ, ಬ್ರೆವಿಸ್ ಎರಡು ರನ್‌ಗಾಗಿ ಓಡಲು ಯತ್ನಿಸಿದರು. ಆದರೆ, ಅಂಪೈರ್ ಅವರಿಗೆ ಔಟ್ ಆಗಿರುವುದನ್ನು ತಿಳಿಸಿದಾಗ, ಬ್ರೆವಿಸ್ ಡಿಆರ್‌ಎಸ್ ಮೂಲಕ ತೀರ್ಮಾನವನ್ನು ಪರಿಶೀಲಿಸಲು ಒತ್ತಾಯಿಸಿದರು. ಆದರೆ, ಈ ಸಂದರ್ಭದಲ್ಲಿ ಡಿಆರ್‌ಎಸ್ ಕರೆಗೆ ನಿಗದಿಯಾದ 15 ಸೆಕೆಂಡ್‌ಗಳ ಸಮಯ ಮುಗಿದಿತ್ತು. ಇದರಿಂದಾಗಿ, ಬ್ರೆವಿಸ್ ಗೋಲ್ಡನ್ ಡಕ್‌ನೊಂದಿಗೆ ಪೆವಿಲಿಯನ್‌ಗೆ ಮರಳಬೇಕಾಯಿತು.

17 ವರ್ಷಗಳ ನಂತರ ಆರ್.ಸಿ.ಬಿ ತಂಡ ಚೆನ್ನೈ ವಿರುದ್ಧ ಎರಡು ಪಂದ್ಯಗಳನ್ನು ಗೆದ್ದು ಇತಿಹಾಸ ಸೃಷ್ಟಿಸಿದೆ.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ