Be aware when responding to fake news: AS Patil Nadahalli

ಸುಳ್ಳು ಸುದ್ದಿ ಪ್ರತಿಕ್ರಿಯೆ ನೀಡುವಾಗ ಜಾಗೃತವಾಗಿರಿ: ಎ ಎಸ್ ಪಾಟೀಲ್ ನಡಹಳ್ಳಿ

ಸುಳ್ಳು ಸುದ್ದಿ ಪ್ರತಿಕ್ರಿಯೆ ನೀಡುವಾಗ ಜಾಗೃತವಾಗಿರಿ: ಎ ಎಸ್ ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ: ಸುದ್ದಿ ಮಾಧ್ಯಮ, ಸಂವಹನ ಯುಗದಲ್ಲಿ ಪ್ರತಿಯೊಬ್ಬರು ಸುದ್ದಿ ಹಂಚಿಕೊಳ್ಳುತ್ತಿದ್ದಾರೆ. ತಮ್ಮತನವನ್ನು ತೋರಲು ಬಯಸುತ್ತಾರೆ. ಕ್ಷಣಾರ್ಧದಲ್ಲಿ ಜಗತ್ತಿಗೆ ಪರಿಚಯವಾಗಿ ಹಣ, ಕೀರ್ತಿ ಹಾಗೂ ಜನಪ್ರಿಯತೆಯನ್ನು ಗಳಿಸುತ್ತಾರೆ ಇದಕ್ಕೆ ಮುಖ್ಯ ಕಾರಣ ಅಭಿವ್ಯಕ್ತಿ ಸಾಮರ್ಥ್ಯ ಎಂದು ಮಾಜಿ ಶಾಸಕ ಎ ಎಸ್ ಪಾಟೀಲ್ (ನಡಹಳ್ಳಿ) ಹೇಳಿದರು.

ಆಲಮಟ್ಟಿ ರಸ್ತೆ ಪಕ್ಕದ ಅರಿಹಂತ ಗಿರಿಯಲ್ಲಿರುವ ಅರಿಹಂತ ಸಮೂಹ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದ ಅವರು, ಆಧುನಿಕ ಜಗತ್ತು ಮೊಬೈಲ್ ಬಳಕೆಯಿಂದ ಡಿಜಿಟಲ್ ಗ್ರಂಥಾಲಯವಾಗಿ ಪರಿವರ್ತನೆ ಆಗಿದೆ.

ವಿಜ್ಞಾನ, ತಂತ್ರಜ್ಞಾನ ಜೊತೆಗೆ ಮಾಹಿತಿ ಜ್ಞಾನ ಇಲ್ಲದಿದ್ದರೆ ಪೂರ್ಣವಾಗುವುದಿಲ್ಲ. ಹಾಗೆಯೇ ಸುಳ್ಳು ಮಾಹಿತಿ ಹಬ್ಬಿಸುವುದರಿಂದ ಒಂದು ದೇಶ, ಒಬ್ಬ ವ್ಯಕ್ತಿಯನ್ನು ಹಾಳು ಮಾಡಬಹುದು. ಹಾಗಾಗಿ ಸುಳ್ಳು ಸುದ್ದಿಗಳನ್ನು ಹರಡಬಾರದು ಮತ್ತು ನಂಬಬಾರದು ಎಂದು ಮಾತನಾಡಿದರು.

ಪತ್ರಿಕೋದ್ಯಮ ಮತ್ತು ಪತ್ರಕರ್ತರ ಕಾರ್ಯಶೈಲಿ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಪ್ರೊ. ರಾಜನಾರಾಯಣ ನಲವಡೆ ಅವರು, ಪತ್ರಿಕೋದ್ಯಮ ಸದಾ ಕಾಲ ಸಮಾಜಮುಖಿ ಕಾರ್ಯ ನಿರ್ವಹಿಸಿದೆ. ಸ್ವತಂತ್ರ ಹೋರಾಟಗಾರರು, ಸಾಹಿತಿಗಳು ಕರಪತ್ರ ರೂಪದಲ್ಲಿ ಪ್ರಕಟಣೆ ಮಾಡಿದ ಸಾಹಿತ್ಯ ಇಂದು ಸಮೂಹ ಮಾಧ್ಯಮ, ತಂತ್ರಜ್ಞಾನ ಬಳಕೆಯಿಂದ ಸಮಾಜವನ್ನು ಬದಲಿಸಿದೆ. ಪತ್ರಕರ್ತರಾದವರು ಸದಾ ಸಮಾಜದ ಓರೆಕೋರೆಗಳನ್ನು ತಿದ್ದುತ್ತಾ, ಸತ್ಯದ ಪರವಾಗಿ ಬರೆಯಬೇಕು ಎಂದು ಮಾತನಾಡಿದರು.

ಅರಿಹಂತ ಸಂಸ್ಥೆಯ ಅಧ್ಯಕ್ಷರಾದ ಮಹಾವೀರ ಸಗರಿ. ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ. ಬಿ. ವಡವಡಗಿ. ಪ್ರಧಾನ ಕಾರ್ಯದರ್ಶಿ ರವೀಂದ್ರ ನಂದೆಪ್ಪನರ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭ ವಿದ್ಯಾರ್ಥಿನಿ ಭಾಗ್ಯಶ್ರೀ ಬಸವರಾಜ್ ಕುಂಬಾರ ವಿದ್ಯಾರ್ಥಿನಿಗೆ ಪ್ರತಿಭಾ ಪುರಸ್ಕಾರ. ತಾಲೂಕು ಮಟ್ಟದ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿರುವ ಪತ್ರಕರ್ತರಾದ ರಿಯಾಜ್‌ಅಹ್ಮದ್ ಮುಲ್ಲಾ, ಹಣಮಂತ ಬೀರಗೊಂಡ, ಈಶ್ವರ ಈಳಗೇರ, ಹಣಮಂತ ಟಕ್ಕಳಕಿ(ಮುತ್ತು), ಕೃಷ್ಣಾ ಕುಂಬಾರ ಅವರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ಬೆಣ್ಣೂರು. ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಪುಲ್ ಸಗರಿ ವೇದಿಕೆ ಮೇಲೆ ಇದ್ದರು. ಸಂಘದ ತಾಲೂಕು ಅಧ್ಯಕ್ಷ ಆರ್. ಬಿ. ವಡವಡಗಿ(ಮುತ್ತು) ಅಧ್ಯಕ್ಷತೆ ವಹಿಸಿದ್ದರು. ಸಂಘದ ಉಪಾಧ್ಯಕ್ಷ ಸಿದ್ದು ಚಲವಾದಿ, ಖಜಾಂಚಿ ಲಾಡ್ಲೇಮಶ್ಯಾಕ ನದಾಫ, ಅಮೀನ ಸಾಬ್ ಮುಲ್ಲಾ. ಪುಂಡಲಿಕ ಮುರಾಳ. ಬಸವರಾಜ ಹುಲಗಣ್ಣಿ. ಮಹಿಬೂಬ ಹಳ್ಳೂರು ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ