Be aware when responding to fake news: AS Patil Nadahalli

ಸುಳ್ಳು ಸುದ್ದಿ ಪ್ರತಿಕ್ರಿಯೆ ನೀಡುವಾಗ ಜಾಗೃತವಾಗಿರಿ: ಎ ಎಸ್ ಪಾಟೀಲ್ ನಡಹಳ್ಳಿ

ಸುಳ್ಳು ಸುದ್ದಿ ಪ್ರತಿಕ್ರಿಯೆ ನೀಡುವಾಗ ಜಾಗೃತವಾಗಿರಿ: ಎ ಎಸ್ ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ: ಸುದ್ದಿ ಮಾಧ್ಯಮ, ಸಂವಹನ ಯುಗದಲ್ಲಿ ಪ್ರತಿಯೊಬ್ಬರು ಸುದ್ದಿ ಹಂಚಿಕೊಳ್ಳುತ್ತಿದ್ದಾರೆ. ತಮ್ಮತನವನ್ನು ತೋರಲು ಬಯಸುತ್ತಾರೆ. ಕ್ಷಣಾರ್ಧದಲ್ಲಿ ಜಗತ್ತಿಗೆ ಪರಿಚಯವಾಗಿ ಹಣ, ಕೀರ್ತಿ ಹಾಗೂ ಜನಪ್ರಿಯತೆಯನ್ನು ಗಳಿಸುತ್ತಾರೆ ಇದಕ್ಕೆ ಮುಖ್ಯ ಕಾರಣ ಅಭಿವ್ಯಕ್ತಿ ಸಾಮರ್ಥ್ಯ ಎಂದು ಮಾಜಿ ಶಾಸಕ ಎ ಎಸ್ ಪಾಟೀಲ್ (ನಡಹಳ್ಳಿ) ಹೇಳಿದರು.

ಆಲಮಟ್ಟಿ ರಸ್ತೆ ಪಕ್ಕದ ಅರಿಹಂತ ಗಿರಿಯಲ್ಲಿರುವ ಅರಿಹಂತ ಸಮೂಹ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದ ಅವರು, ಆಧುನಿಕ ಜಗತ್ತು ಮೊಬೈಲ್ ಬಳಕೆಯಿಂದ ಡಿಜಿಟಲ್ ಗ್ರಂಥಾಲಯವಾಗಿ ಪರಿವರ್ತನೆ ಆಗಿದೆ.

ವಿಜ್ಞಾನ, ತಂತ್ರಜ್ಞಾನ ಜೊತೆಗೆ ಮಾಹಿತಿ ಜ್ಞಾನ ಇಲ್ಲದಿದ್ದರೆ ಪೂರ್ಣವಾಗುವುದಿಲ್ಲ. ಹಾಗೆಯೇ ಸುಳ್ಳು ಮಾಹಿತಿ ಹಬ್ಬಿಸುವುದರಿಂದ ಒಂದು ದೇಶ, ಒಬ್ಬ ವ್ಯಕ್ತಿಯನ್ನು ಹಾಳು ಮಾಡಬಹುದು. ಹಾಗಾಗಿ ಸುಳ್ಳು ಸುದ್ದಿಗಳನ್ನು ಹರಡಬಾರದು ಮತ್ತು ನಂಬಬಾರದು ಎಂದು ಮಾತನಾಡಿದರು.

ಪತ್ರಿಕೋದ್ಯಮ ಮತ್ತು ಪತ್ರಕರ್ತರ ಕಾರ್ಯಶೈಲಿ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಪ್ರೊ. ರಾಜನಾರಾಯಣ ನಲವಡೆ ಅವರು, ಪತ್ರಿಕೋದ್ಯಮ ಸದಾ ಕಾಲ ಸಮಾಜಮುಖಿ ಕಾರ್ಯ ನಿರ್ವಹಿಸಿದೆ. ಸ್ವತಂತ್ರ ಹೋರಾಟಗಾರರು, ಸಾಹಿತಿಗಳು ಕರಪತ್ರ ರೂಪದಲ್ಲಿ ಪ್ರಕಟಣೆ ಮಾಡಿದ ಸಾಹಿತ್ಯ ಇಂದು ಸಮೂಹ ಮಾಧ್ಯಮ, ತಂತ್ರಜ್ಞಾನ ಬಳಕೆಯಿಂದ ಸಮಾಜವನ್ನು ಬದಲಿಸಿದೆ. ಪತ್ರಕರ್ತರಾದವರು ಸದಾ ಸಮಾಜದ ಓರೆಕೋರೆಗಳನ್ನು ತಿದ್ದುತ್ತಾ, ಸತ್ಯದ ಪರವಾಗಿ ಬರೆಯಬೇಕು ಎಂದು ಮಾತನಾಡಿದರು.

ಅರಿಹಂತ ಸಂಸ್ಥೆಯ ಅಧ್ಯಕ್ಷರಾದ ಮಹಾವೀರ ಸಗರಿ. ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ. ಬಿ. ವಡವಡಗಿ. ಪ್ರಧಾನ ಕಾರ್ಯದರ್ಶಿ ರವೀಂದ್ರ ನಂದೆಪ್ಪನರ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭ ವಿದ್ಯಾರ್ಥಿನಿ ಭಾಗ್ಯಶ್ರೀ ಬಸವರಾಜ್ ಕುಂಬಾರ ವಿದ್ಯಾರ್ಥಿನಿಗೆ ಪ್ರತಿಭಾ ಪುರಸ್ಕಾರ. ತಾಲೂಕು ಮಟ್ಟದ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿರುವ ಪತ್ರಕರ್ತರಾದ ರಿಯಾಜ್‌ಅಹ್ಮದ್ ಮುಲ್ಲಾ, ಹಣಮಂತ ಬೀರಗೊಂಡ, ಈಶ್ವರ ಈಳಗೇರ, ಹಣಮಂತ ಟಕ್ಕಳಕಿ(ಮುತ್ತು), ಕೃಷ್ಣಾ ಕುಂಬಾರ ಅವರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ಬೆಣ್ಣೂರು. ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಪುಲ್ ಸಗರಿ ವೇದಿಕೆ ಮೇಲೆ ಇದ್ದರು. ಸಂಘದ ತಾಲೂಕು ಅಧ್ಯಕ್ಷ ಆರ್. ಬಿ. ವಡವಡಗಿ(ಮುತ್ತು) ಅಧ್ಯಕ್ಷತೆ ವಹಿಸಿದ್ದರು. ಸಂಘದ ಉಪಾಧ್ಯಕ್ಷ ಸಿದ್ದು ಚಲವಾದಿ, ಖಜಾಂಚಿ ಲಾಡ್ಲೇಮಶ್ಯಾಕ ನದಾಫ, ಅಮೀನ ಸಾಬ್ ಮುಲ್ಲಾ. ಪುಂಡಲಿಕ ಮುರಾಳ. ಬಸವರಾಜ ಹುಲಗಣ್ಣಿ. ಮಹಿಬೂಬ ಹಳ್ಳೂರು ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ