Bennihalla flood control and water utilization works initially Rs. 200 crore grant release

ಬೆಣ್ಣಿಹಳ್ಳ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆ ಕಾಮಗಾರಿಗೆ ಆರಂಭಿಕ ರೂ. 200 ಕೋಟಿ ಅನುದಾನ ಬಿಡುಗಡೆ

ಬೆಣ್ಣಿಹಳ್ಳ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆ ಕಾಮಗಾರಿಗೆ ಆರಂಭಿಕ ರೂ. 200 ಕೋಟಿ ಅನುದಾನ ಬಿಡುಗಡೆ

ಧಾರವಾಡ, ಮೇ.28: ಧಾರವಾಡ ಜಿಲ್ಲೆಯ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆಗೆ ಅಗತ್ಯ ಯೋಜನೆ ಸಿದ್ಧಗೊಳಿಸಿದ್ದು, ಶಾಶ್ವತ ಪರಿಹಾರ ಕ್ರಮಕೈಗೊಳ್ಳಲು ಆರಂಭಿಕವಾಗಿ ರೂ. 200 ಕೋಟಿ ಹಣ ಈಗಾಗಲೇ ಬಿಡುಗಡೆ ಆಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಹೇಳಿದರು.

ನವಲಗುಂದ ತಾಲೂಕಿನ ಯಮನೂರು ಗ್ರಾಮದ ಸೇತುವೆ ಹತ್ತಿರ ಬೆಣ್ಣಿಹಳ್ಳದ ನಾಲೆಯನ್ನು ವೀಕ್ಸಿಸಿದ ನಂತರ ಅವರು ಮಾತನಾಡಿದರು.

ಬೆಣ್ಣೆಹಳ್ಳದಿಂದ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ 6 ತಾಲೂಕುಗಳ 56 ಹಳ್ಳಿಗಳು ಬಾಧಿತವಾಗುತ್ತವೆ. ಈ ಹಳ್ಳವು ಈ ಮೂರು ಜಿಲ್ಲೆಗಳ 148 ಕಿ.ಮೀ ಹರಿಯುತ್ತದೆ. ಇದು ಸುಮಾರು 4,800 ಚದರ ಕಿ.ಮೀ ಜಲಾನಯನ ಪ್ರದೇಶವನ್ನು ಹೊಂದಿದೆ. 2012ರಲ್ಲಿ ನೀರಾವರಿ ತಜ್ಞ ಡಾ. ಜಿ.ಎಸ್. ಪರಮಶಿವಯ್ಯ ಅವರು ತುಪ್ಪರಿಹಳ್ಳ ಮತ್ತು ಬೆಣ್ಣಿಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆ ಕುರಿತು ನೀಡಿದ ಅಧ್ಯಯನ ವರದಿಯನ್ನು ಸರಕಾರ ಪರಿಶೀಲಿಸಿದೆ. ಅದರ ಆಧಾರದ ಮೇಲೆ ನೀರಾವರಿ ನಿಗಮದ ವರದಿ ಪಡೆದು ಅನುಷ್ಠಾನಗೊಳಿಸುತ್ತದೆ ಎಂದು ಸಚಿವರು ಹೇಳಿದರು.

ಸ್ಥಳೀಯ ಶಾಸಕರಾದ ಶ್ರೀ ಎನ್.ಎಚ್. ಕೋನರಡ್ಡಿ ಅವರ ನಿರಂತರ ಪ್ರಯತ್ನ ಹಾಗೂ ಒತ್ತಾಯದ ಫಲವಾಗಿ ಮಾನ್ಯ ಮುಖ್ಯಮಂತ್ರಿಗಳು 2024-25ನೇ ಸಾಲಿನ ಆಯವ್ಯಯದಲ್ಲಿ ರೂ. 200 ಕೋಟಿಗಳ ಅನುದಾನ ನೀಡಿ, ಹಣ ಬಿಡುಗಡೆ ಮಾಡಿದ್ದಾರೆ. ಕಾಮಗಾರಿಗೆ ಟೆಂಡರ್ ಕರೆಯಲಾಗಿದ್ದು, ಅಂತಿಮ ಹಂತದಲ್ಲಿದೆ. ಮಳೆಗಾಲ ಮುಗಿದ ನಂತರ ಕಾಮಗಾರಿ ಪ್ರಾರಂಭಿಸಲಾಗುತ್ತದೆ. ಯಮನೂರ ಸೇತುವೆ ಹತ್ತಿರ ಸಾರ್ವಜನಿಕರ ಹಾಗೂ ಪ್ರವಾಸಿಗರ ಅನುಕೂಲಕ್ಕಾಗಿ ಹಾಗೂ ಬೆಣ್ಣಿಹಳ್ಳ ದಡದಲ್ಲಿ ಸ್ನಾನಘಟ್ಟ, ಉತ್ತಮ ರಸ್ತೆ, ಹೂಳು ಹಳ್ಳಕ್ಕೆ ಬರದಂತೆ ತಡೆಯಲು ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಪ್ರವಾಹ, ವಿಪತ್ತು ನಿರ್ವಹಣೆಗೆ ಅಗತ್ಯ ನೆರವು: ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳ ಮಳೆಗಾಲದಲ್ಲಿ ಉಂಟಾಗುವ ಹಳ್ಳಗಳ ಪ್ರವಾಹ, ಅತಿವೃಷ್ಟಿ ಸಮಸ್ಯೆಗಳನ್ನು ಸಮರ್ಪಕವಾಗಿ ಎದುರಿಸಿ, ಯಾವುದೇ ಜನ, ಜಾನುವಾರುಗಳಿಗೆ ಹಾನಿ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಈಗಾಗಲೇ ಜಿಲ್ಲಾಮಟ್ಟದಲ್ಲಿ ಸಭೆ ಜರುಗಿಸಿ, ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಕೇಂದ್ರ ಸ್ಥಾನ ಬಿಡದಂತೆ ಮತ್ತು ಕರ್ತವ್ಯ ನಿರ್ವಹಣೆಯಲ್ಲಿ ನಿಷ್ಕಾಳಜಿ ತೋರದಂತೆ ನಿರ್ದೇಶಿಸಿ, ಎಚ್ಚರಿಕೆ ನೀಡಲಾಗಿದೆ ಎಂದರು.

ಪ್ರವಾಹ ಪರಿಸ್ಥಿತಿ ಎದುರಿಸಲು ಅನುವಾಗುವಂತೆ ನವಲಗುಂದ ಪಟ್ಟಣದಲ್ಲಿ ಅಗ್ನಿಶಾಮಕ ದಳದ ತಾತ್ಕಾಲಿಕ ನಿಲ್ದಾಣ ತೆರೆಯಲಾಗಿದೆ. ಬೋಟ್ ಸೇರಿದಂತೆ ಎಲ್ಲ ಜೀವ ರಕ್ಷಕ ಪರಿಕರಗಳನ್ನು ಪೂರೈಸಲಾಗಿದೆ. ಸ್ಥಳೀಯ ಈಜುಗಾರರನ್ನು, ಸ್ವಯಂಸೇವಕರ ತಂಡಗಳನ್ನು ಗ್ರಾಮ ಮಟ್ಟದಲ್ಲಿ ರಚಿಸಲಾಗಿದೆ. ಸ್ಥಳೀಯರ ಸಹಭಾಗಿತ್ವದಲ್ಲಿ ತಕ್ಷಣ ಸ್ಪಂದಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಯೋಜನೆ ರೂಪಿಸಿ, ಅನುಷ್ಠಾನಗೊಳಿಸಿದ್ದಾರೆ ಎಂದು ಅವರು ಹೇಳಿದರು.

ನವಲಗುಂದ ತಾಲೂಕಿನಲ್ಲಿ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳ ಎರಡು ಹಳ್ಳಗಳು ಹರಿದು, ಇದೇ ತಾಲೂಕಿನಲ್ಲಿ ಕೂಡಿ, ಮುಂದೆ ಗದಗ ಜಿಲ್ಲೆಗೆ ಹೋಗುವುದರಿಂದ ಪ್ರವಾಹ ಹೆಚ್ಚಿನ ಮಟ್ಟದಲ್ಲಿರುತ್ತದೆ. ಅದಕ್ಕಾಗಿ ಪ್ರವಾಹ ಪರಿಸ್ಥಿತಿ ಎದುರಿಸಲು ಪ್ರತ್ಯೇಕ 10 ತಂಡಗಳನ್ನು ರಚಿಸಿ, ಸನ್ನದ್ಧಗೊಳಿಸಲು ಸಚಿವರು ನಿರ್ದೇಶಿಸಿದರು.

ಈಗಾಗಲೇ ಜನರ ಸಂರಕ್ಷಣೆಗೊಸ್ಕರ ಐದು ತಂಡವನ್ನು ಸಿದ್ಧ ಮಾಡಲಾಗಿದೆ. ಅವರು ನವಲಗುಂದ ತಾಲೂಕಿನಲ್ಲಿ ದಿನದ 24 ಗಂಟೆ ಸಿದ್ಧರಿರುತ್ತಾರೆ. ಒಂದೂ ಜೀವ ಹಾನಿ ಆಗಬಾರದು ಎಂದು ಮೊದಲೇ ವ್ಯವಸ್ಥೆ ಮಾಡಿಕೊಳ್ಳುವ ದೃಷ್ಟಿಯಿಂದ ಐದು ತಂಡಗಳು ಸಿದ್ಧಪಡಿಸಲಾಗಿದೆ. ಮುಂದಿನ ಮೂರು ತಿಂಗಳು ಬೇರೆ ಭಾಗದಲ್ಲಿ ಮಳೆ ಆದರೂ ಇಲ್ಲಿನ ಪರಿಸ್ಥಿತಿ ತೊಂದರೆಗೆ ಉಂಟಾಗಬಹುದು ಎಂದು ಎಲ್ಲಿಯವರೆಗೆ ಮಳೆಯ ಆತಂಕ ಇರುತ್ತದೆಯೋ ಅಲ್ಲಿಯವರೆಗೆ ಈ ಐದು ತಂಡಗಳು ಜನರ ಸಂರಕ್ಷಣೆಗೆ ಇರುತ್ತಾರೆ ಎಂದು ಹೇಳಿದರು.

ಶಾಸಕರಾದ ಎನ್.ಎಚ್. ಕೋನರಡ್ಡಿ ಅವರು ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ನೀಡಿದ್ದು, ಇದಕ್ಕಾಗಿ ಮಾನ್ಯ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ಪ್ರತಿ ಜಿಲ್ಲೆಯಲ್ಲಿರುವ ಉಸ್ತುವಾರಿ ಸಚಿವರು ಮತ್ತು ಶಾಸಕರು, ಜಿಲ್ಲಾಧಿಕಾರಿಯವರು ಜಿಲ್ಲೆಯಲ್ಲಿ ಬರುವ ಪ್ರತಿಯೊಂದು ಪ್ರವಾಹ ಪೀಡಿತ ಪ್ರದೇಶಗಳನ್ನು ಮತ್ತು ಹಳ್ಳಗಳನ್ನು ಪರೀಕ್ಷಿಸಿ, ವರದಿ ಸಲ್ಲಿಸಬೇಕೆಂದು ಹೇಳಿದ್ದಾರೆ. ಅದರಂತೆ ನಮ್ಮ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಬೆಣ್ಣಿಹಳ್ಳ ಹಾಗೂ ತುಪ್ಪರಿಹಳ್ಳದ ಪ್ರವಾಹ ಪೀಡತವಾಗಬಹುದಾದ ಪ್ರದೇಶಗಳಿಗೆ ಇಂದು ಭೇಟಿ ನೀಡಿದ್ದಾರೆ. ನವಲಗುಂದ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪ್ರವಾಹ ಪೀಡತ ಪ್ರದೇಶಗಳನ್ನು ತೋರಿಸಿ, ವಿವರಿಸಲಾಗಿದೆ ಎಂದು ಅವರು ಹೇಳಿದರು.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಅಧಿಕವಾಗಿರುವುದರಿಂದ ಜಿಲ್ಲೆಯ ಬಹುತೇಕ ಭಾಗದಲ್ಲಿ ಬಿತ್ತನೆ ಆರಂಭವಾಗಿರುವುದಿಲ್ಲ. ರೈತರಿಗೆ ಅಗತ್ಯವಿರುವ ಬೀಜ, ರಸಗೊಬ್ಬರಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ವಿತರಿಸಲಾಗುತ್ತಿದೆ ಎಂದರು.

ಅತಿವೃಷ್ಟಿಯಿಂದ ಉಂಟಾಗುವ ಪ್ರವಾಹ ಹಾಗೂ ಇತರ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರವಾಹದಲ್ಲಿನ ಜೀವ ರಕ್ಷಣೆ ಕುರಿತ ಅಣುಕು ಪ್ರದರ್ಶನ

ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ನೀಲಮ್ಮನ ಕೆರೆಯಲ್ಲಿ ಪ್ರವಾಹದ ಮುನ್ನಚ್ಚರಿಕೆ ಕುರಿತು ನೀರಿನಲ್ಲಿ ಮುಳುಗಿದವರವನ್ನು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಅಣುಕು ಪ್ರದರ್ಶನದ ಮೂಲಕ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ನಾಗರಿಕರ ರಕ್ಷಣೆಯ ತಾಲೀಮು ನಡೆಸಲಾಯಿತು. ನೀರಿನಲ್ಲಿ ಮುಳುಗಿರುವ ಹಾಗೆ ಸಂದರ್ಭವನ್ನು ಸೃಷ್ಟಿಸುವ ಮೂಲಕ ಕಾಲ್ಪನಿಕ ತುರ್ತು ಪರಿಸ್ಥಿತಿ ಸೃಷ್ಟಿಸಿ, ಅಗ್ನಿಶಾಮಕ ದಳದ ಎಲ್ಲ ಸಿಬ್ಬಂದಿ ಸೇರಿ ತಾಲೀಮು ನಡೆಸಿದರು.

ನವಲಗುಂದ ಕ್ಷೇತ್ರ ವ್ಯಾಪ್ತಿಯಲ್ಲಿನ ಬೆಣ್ಣಿಹಳ್ಳ ಬದಿಯ ಹಳ್ಳಿಗಳ ಜನರಿಗೆ ಮಳೆಗಾಲದಲ್ಲಿ ಅನಾನುಕೂಲ ಆಗಬಹುದು ಎಂದು ಮುಂಜಾಗ್ರತಾ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ನಾವು, ಜಿಲ್ಲಾಡಳಿತ, ಶಾಸಕರು ಸೇರಿ ಜನರಿಗೆ ಜಾಗೃತಿ ಮೂಡಿಸಲು ಅಗ್ನಿಶಾಮಕ ಇಲಾಖೆಯಿಂದ ಅಣುಕು ಪ್ರದರ್ಶನ ನಡೆಸಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಅಧೀಕ್ಷಕ ಡಾ. ಗೋಪಾಲ ಎಂ. ಬ್ಯಾಕೋಡ್, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಬೃಹತ್‌ ನೀರಾವರಿ ಇಲಾಖೆಯ ಎಇಇ ರವೀಂದ್ರ ಜಾಲಗಾರ, ನವಲಗುಂದ ತಹಶೀಲ್ದಾರ ಸುಧೀರ ಸಾವುಕಾರ, ಪುರಸಭೆ ಮುಖ್ಯಾಧಿಕಾರಿ ಶರಣು ಪೂಜಾರ, ಅಗ್ನಿಶಾಮಕ ದಳದ ಅಧಿಕಾರಿ ಅಮೃತ ಮತ್ತು ಸಿಬ್ಬಂದಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿ, ನವಲಗುಂದ ತಾಲೂಕಿನ ವಿವಿಧ ಇಲಾಖೆಗಳ ಮುಖ್ಯಸ್ಥರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ