ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಭಾರತೀಯ ಕಿಸಾನ ಸಂಘದ ಬೆಂಬಲ

ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಭಾರತೀಯ ಕಿಸಾನ ಸಂಘದ ಬೆಂಬಲ

ಬೀಳಗಿ: ಗ್ರಾಮ ಆಡಳಿತಾಧಿಕಾರಿಗಳು ಮೂರು ದಿನಗಳಿಂದ ರಾಜ್ಯಾದಂತ ತಮ್ಮ ವಿವಿಧ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಮುಷ್ಕರ ನಡೆಸಿರುವುದರಿಂದ ಸಾರ್ವಜನಿಕರಿಗೆ ಹಾಗೂ ರೈತರಿಗೆ ತೀವ್ರ ತೊಂದರೆಯಾಗಿದ್ದು, ಅವರ ಬೇಡಿಕೆಗಳು ನ್ಯಾಯೋಚಿತವಾಗಿದ್ದು ತಕ್ಷಣ ಸರಕಾರ ಸ್ಪಂದಿಸಬೇಕೆಂದು ಅವರ ಹೋರಾಟ ಬೆಂಬಲಿಸಿ ಆಗ್ರಹಿಸಿ ಭಾರತೀಯ ಕಿಸಾನ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ತಹಶೀಲ್ದಾರ ಕಚೇರಿ ಮುಂದೆ ಬೆಂಬಲಿಸಿ ಪ್ರತಿಭಟನೆ ನಡೆಸಿದರು.

ಭಾರತೀಯ ಕಿಸಾನ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಹಿರೇಮಠ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳು ಪ್ರತಿಯೊಬ್ಬರ ಜನನದಿಂದ ಮರಣದವರಿಗೆ ಹಾಗೂ ಯಾವುದೇ ಕೃಷಿ ಚಟುವಟಿಕೆ ಕಾಗದ ಪತ್ರಗಳು ಸೇರಿದಂತೆ ವಿವಿಧ ಸೇವೆಗಳನ್ನು ಒದಗಿಸುವಲ್ಲಿ ಸದಾ ಶ್ರಮಿಸುತ್ತಿದ್ದು ಕೇಂದ್ರ ಸ್ಥಾನದಲ್ಲಿ ಅವರಿಗೆ ಕಚೇರಿ ನಿರ್ಮಿಸಿ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು, ವಂಶ ವೃಕ್ಷ ಜಾತಿ ಪ್ರಮಾಣ ಪತ್ರಗಳ ವಿತರಣೆ ವಿಚಾರವಾಗಿ ತಪಿಸ್ಥರಲ್ಲದ ಕಂದಾಯ ನೌಕರರ ಮೇಲೆ ಎಪ್ ಐ ಆರ್ ದಾಖಲಿಸಿದೇ ತಪಿಸ್ಥ ಅರ್ಜಿದಾರರನ್ಮು ಹೊಣೆಗಾರರನ್ನಾಗಿಸಬೇಕು ಎಂದರು.

ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವನಗೌಡ ಪಾಟೀಲ ಮಾತನಾಡಿ, ಬೆಳೆ ಸಮೀಕ್ಷೆ ಹಾಗೂ ಬೆಳೆ ಹಾನಿ ಪರಿಹಾರದ ಕೆಲಸವನ್ನು ಕೃಷಿ ತೋಟಗಾರಿಕೆ ಆಯಾ ಇಲಾಖೆಗಳಿಗೆ ವಹಿಸಬೇಕು ಹಾಗೂ ಬಾಗಲಕೋಟೆ ತೋಟಗಾರಿಕಾ ವಿಶ್ವ ವಿದ್ಯಾಲಯವನ್ನು ಮುಂದವರಿಸಬೇಕು ಎಂದರು.

ವಿಕಲಚೇತನರ ಮುಖಂಡ ಶೇಖರ ಕಾಖಂಡಕಿ ಮಾತನಾಡಿ, ಮ್ಯುಟೇಶನ್ ಅವಧಿ ಹೆಚ್ಚಿಸಿ ಪ್ರೋಟೊಕಾಲದಿಂದ ಗ್ರಾಮ ಆಡಳಿತ ಅಧಿಕಾರಿಗಳನ್ನು ಕೈ ಬೀಡಬೇಕು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಜಾಬ್ ಚಾರ್ಟ ನಿಗದಿವಪಡಿಸಬೇಕು ಎಂದರು.

ಗ್ರಾಮ ಆಡಳಿತ ಅಧಿಕಾರಿಗಳು ಸೇರಿದಂತೆ ಕಂದಾಯ ಇಲಾಖೆ ನೌಕರರ ವರ್ಗಾವಣೆ ನಿಯಮಾವಳಿ ಅವೈಜ್ಞಾನಿಕವಾಗಿದ್ದು ಎಲ್ಲ ಇಲಾಖೆ ನೌಕರರ ನಿಯಮಾವಳಿಯಂತೆ ಅವರ ಕೇಳಿದ ಯಾವುದೇ ಅಂತರ ಜಿಲ್ಲೆಗಳಿಗೆ ವರ್ಗಾವಣೆ ಮಾಡಲು ಮಾರ್ಗಸೂಚಿಸಿ ಹೊರಡಿಸಿ ಮಾನವಿಯತೇಯ ಮೆರೆಗೆ ವಯೋವೃದ್ದ ತಂದೆ ತಾಯಿ ಸೇವೆ ಮಾಡಲು ಅನೂಕೂಲ ಒದಗಿಸಬೇಕು ಮಾಜಿ ಸೈನಿಕರ ಹಾಗೂ ಕಾಯಿಲೆ ಪೀಡತ ನೌಕರರ ವರ್ಗಾವಣೆಯನ್ನು ಯಾವದೇ ಅವಧಿ ಪರಿಗಣಿಸದೇ ನೇರವಾಗಿ ವರ್ಗಾವಣೆ ಮಾಡಬೇಕು ಎಂದು ಭಾರತೀಯ ಕಿಸಾನ್ ಸಂಘ ಬಾಗಲಕೋಟೆ ಜಿಲ್ಲಾ ಅಧ್ಯಕ್ಷ ವಿರುಪಾಕ್ಷಯ್ಯ ಪಂ. ಹಿರೇಮಠ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಸುಬ್ಬರಾಯಗೌಡ ಪಾಟೀಲ, ಡೊಂಗ್ರೀ ನಧಾಪ, ಎಂ. ವಾಯ್. ವಡವಾಣಿ, ಸಂಗಪ್ಪ ಅಗಸರ ಅಶೋಕ ದೇವಿನವರ, ಗುರು ಅನಗವಾಡಿ, ಶ್ರೀಶೈಲ ಮೇಟಿ, ಮಂಜು ಭಾವಿ ಯಲ್ಲಾಲಿಂಗ ಕುರಿ, ಗಿರೀಶ ಮಂಟೂರ, ವಿಠ್ಠಲ ಹನುಮರ, ಈರಪ್ಪ ಗಾಣಿಗೇರ, ಅಶೋಕ ಮುಳವಾಡ ಸೇರಿದಂತೆ ಅನೇಕ ಮುಖಂಡರು ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ