ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಭಾರತೀಯ ಕಿಸಾನ ಸಂಘದ ಬೆಂಬಲ

ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಭಾರತೀಯ ಕಿಸಾನ ಸಂಘದ ಬೆಂಬಲ

ಬೀಳಗಿ: ಗ್ರಾಮ ಆಡಳಿತಾಧಿಕಾರಿಗಳು ಮೂರು ದಿನಗಳಿಂದ ರಾಜ್ಯಾದಂತ ತಮ್ಮ ವಿವಿಧ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಮುಷ್ಕರ ನಡೆಸಿರುವುದರಿಂದ ಸಾರ್ವಜನಿಕರಿಗೆ ಹಾಗೂ ರೈತರಿಗೆ ತೀವ್ರ ತೊಂದರೆಯಾಗಿದ್ದು, ಅವರ ಬೇಡಿಕೆಗಳು ನ್ಯಾಯೋಚಿತವಾಗಿದ್ದು ತಕ್ಷಣ ಸರಕಾರ ಸ್ಪಂದಿಸಬೇಕೆಂದು ಅವರ ಹೋರಾಟ ಬೆಂಬಲಿಸಿ ಆಗ್ರಹಿಸಿ ಭಾರತೀಯ ಕಿಸಾನ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ತಹಶೀಲ್ದಾರ ಕಚೇರಿ ಮುಂದೆ ಬೆಂಬಲಿಸಿ ಪ್ರತಿಭಟನೆ ನಡೆಸಿದರು.

ಭಾರತೀಯ ಕಿಸಾನ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಹಿರೇಮಠ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳು ಪ್ರತಿಯೊಬ್ಬರ ಜನನದಿಂದ ಮರಣದವರಿಗೆ ಹಾಗೂ ಯಾವುದೇ ಕೃಷಿ ಚಟುವಟಿಕೆ ಕಾಗದ ಪತ್ರಗಳು ಸೇರಿದಂತೆ ವಿವಿಧ ಸೇವೆಗಳನ್ನು ಒದಗಿಸುವಲ್ಲಿ ಸದಾ ಶ್ರಮಿಸುತ್ತಿದ್ದು ಕೇಂದ್ರ ಸ್ಥಾನದಲ್ಲಿ ಅವರಿಗೆ ಕಚೇರಿ ನಿರ್ಮಿಸಿ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು, ವಂಶ ವೃಕ್ಷ ಜಾತಿ ಪ್ರಮಾಣ ಪತ್ರಗಳ ವಿತರಣೆ ವಿಚಾರವಾಗಿ ತಪಿಸ್ಥರಲ್ಲದ ಕಂದಾಯ ನೌಕರರ ಮೇಲೆ ಎಪ್ ಐ ಆರ್ ದಾಖಲಿಸಿದೇ ತಪಿಸ್ಥ ಅರ್ಜಿದಾರರನ್ಮು ಹೊಣೆಗಾರರನ್ನಾಗಿಸಬೇಕು ಎಂದರು.

ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವನಗೌಡ ಪಾಟೀಲ ಮಾತನಾಡಿ, ಬೆಳೆ ಸಮೀಕ್ಷೆ ಹಾಗೂ ಬೆಳೆ ಹಾನಿ ಪರಿಹಾರದ ಕೆಲಸವನ್ನು ಕೃಷಿ ತೋಟಗಾರಿಕೆ ಆಯಾ ಇಲಾಖೆಗಳಿಗೆ ವಹಿಸಬೇಕು ಹಾಗೂ ಬಾಗಲಕೋಟೆ ತೋಟಗಾರಿಕಾ ವಿಶ್ವ ವಿದ್ಯಾಲಯವನ್ನು ಮುಂದವರಿಸಬೇಕು ಎಂದರು.

ವಿಕಲಚೇತನರ ಮುಖಂಡ ಶೇಖರ ಕಾಖಂಡಕಿ ಮಾತನಾಡಿ, ಮ್ಯುಟೇಶನ್ ಅವಧಿ ಹೆಚ್ಚಿಸಿ ಪ್ರೋಟೊಕಾಲದಿಂದ ಗ್ರಾಮ ಆಡಳಿತ ಅಧಿಕಾರಿಗಳನ್ನು ಕೈ ಬೀಡಬೇಕು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಜಾಬ್ ಚಾರ್ಟ ನಿಗದಿವಪಡಿಸಬೇಕು ಎಂದರು.

ಗ್ರಾಮ ಆಡಳಿತ ಅಧಿಕಾರಿಗಳು ಸೇರಿದಂತೆ ಕಂದಾಯ ಇಲಾಖೆ ನೌಕರರ ವರ್ಗಾವಣೆ ನಿಯಮಾವಳಿ ಅವೈಜ್ಞಾನಿಕವಾಗಿದ್ದು ಎಲ್ಲ ಇಲಾಖೆ ನೌಕರರ ನಿಯಮಾವಳಿಯಂತೆ ಅವರ ಕೇಳಿದ ಯಾವುದೇ ಅಂತರ ಜಿಲ್ಲೆಗಳಿಗೆ ವರ್ಗಾವಣೆ ಮಾಡಲು ಮಾರ್ಗಸೂಚಿಸಿ ಹೊರಡಿಸಿ ಮಾನವಿಯತೇಯ ಮೆರೆಗೆ ವಯೋವೃದ್ದ ತಂದೆ ತಾಯಿ ಸೇವೆ ಮಾಡಲು ಅನೂಕೂಲ ಒದಗಿಸಬೇಕು ಮಾಜಿ ಸೈನಿಕರ ಹಾಗೂ ಕಾಯಿಲೆ ಪೀಡತ ನೌಕರರ ವರ್ಗಾವಣೆಯನ್ನು ಯಾವದೇ ಅವಧಿ ಪರಿಗಣಿಸದೇ ನೇರವಾಗಿ ವರ್ಗಾವಣೆ ಮಾಡಬೇಕು ಎಂದು ಭಾರತೀಯ ಕಿಸಾನ್ ಸಂಘ ಬಾಗಲಕೋಟೆ ಜಿಲ್ಲಾ ಅಧ್ಯಕ್ಷ ವಿರುಪಾಕ್ಷಯ್ಯ ಪಂ. ಹಿರೇಮಠ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಸುಬ್ಬರಾಯಗೌಡ ಪಾಟೀಲ, ಡೊಂಗ್ರೀ ನಧಾಪ, ಎಂ. ವಾಯ್. ವಡವಾಣಿ, ಸಂಗಪ್ಪ ಅಗಸರ ಅಶೋಕ ದೇವಿನವರ, ಗುರು ಅನಗವಾಡಿ, ಶ್ರೀಶೈಲ ಮೇಟಿ, ಮಂಜು ಭಾವಿ ಯಲ್ಲಾಲಿಂಗ ಕುರಿ, ಗಿರೀಶ ಮಂಟೂರ, ವಿಠ್ಠಲ ಹನುಮರ, ಈರಪ್ಪ ಗಾಣಿಗೇರ, ಅಶೋಕ ಮುಳವಾಡ ಸೇರಿದಂತೆ ಅನೇಕ ಮುಖಂಡರು ಇದ್ದರು.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600