ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಭಾರತೀಯ ಕಿಸಾನ ಸಂಘದ ಬೆಂಬಲ

ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಭಾರತೀಯ ಕಿಸಾನ ಸಂಘದ ಬೆಂಬಲ

ಬೀಳಗಿ: ಗ್ರಾಮ ಆಡಳಿತಾಧಿಕಾರಿಗಳು ಮೂರು ದಿನಗಳಿಂದ ರಾಜ್ಯಾದಂತ ತಮ್ಮ ವಿವಿಧ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಮುಷ್ಕರ ನಡೆಸಿರುವುದರಿಂದ ಸಾರ್ವಜನಿಕರಿಗೆ ಹಾಗೂ ರೈತರಿಗೆ ತೀವ್ರ ತೊಂದರೆಯಾಗಿದ್ದು, ಅವರ ಬೇಡಿಕೆಗಳು ನ್ಯಾಯೋಚಿತವಾಗಿದ್ದು ತಕ್ಷಣ ಸರಕಾರ ಸ್ಪಂದಿಸಬೇಕೆಂದು ಅವರ ಹೋರಾಟ ಬೆಂಬಲಿಸಿ ಆಗ್ರಹಿಸಿ ಭಾರತೀಯ ಕಿಸಾನ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ತಹಶೀಲ್ದಾರ ಕಚೇರಿ ಮುಂದೆ ಬೆಂಬಲಿಸಿ ಪ್ರತಿಭಟನೆ ನಡೆಸಿದರು.

ಭಾರತೀಯ ಕಿಸಾನ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಹಿರೇಮಠ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳು ಪ್ರತಿಯೊಬ್ಬರ ಜನನದಿಂದ ಮರಣದವರಿಗೆ ಹಾಗೂ ಯಾವುದೇ ಕೃಷಿ ಚಟುವಟಿಕೆ ಕಾಗದ ಪತ್ರಗಳು ಸೇರಿದಂತೆ ವಿವಿಧ ಸೇವೆಗಳನ್ನು ಒದಗಿಸುವಲ್ಲಿ ಸದಾ ಶ್ರಮಿಸುತ್ತಿದ್ದು ಕೇಂದ್ರ ಸ್ಥಾನದಲ್ಲಿ ಅವರಿಗೆ ಕಚೇರಿ ನಿರ್ಮಿಸಿ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು, ವಂಶ ವೃಕ್ಷ ಜಾತಿ ಪ್ರಮಾಣ ಪತ್ರಗಳ ವಿತರಣೆ ವಿಚಾರವಾಗಿ ತಪಿಸ್ಥರಲ್ಲದ ಕಂದಾಯ ನೌಕರರ ಮೇಲೆ ಎಪ್ ಐ ಆರ್ ದಾಖಲಿಸಿದೇ ತಪಿಸ್ಥ ಅರ್ಜಿದಾರರನ್ಮು ಹೊಣೆಗಾರರನ್ನಾಗಿಸಬೇಕು ಎಂದರು.

ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವನಗೌಡ ಪಾಟೀಲ ಮಾತನಾಡಿ, ಬೆಳೆ ಸಮೀಕ್ಷೆ ಹಾಗೂ ಬೆಳೆ ಹಾನಿ ಪರಿಹಾರದ ಕೆಲಸವನ್ನು ಕೃಷಿ ತೋಟಗಾರಿಕೆ ಆಯಾ ಇಲಾಖೆಗಳಿಗೆ ವಹಿಸಬೇಕು ಹಾಗೂ ಬಾಗಲಕೋಟೆ ತೋಟಗಾರಿಕಾ ವಿಶ್ವ ವಿದ್ಯಾಲಯವನ್ನು ಮುಂದವರಿಸಬೇಕು ಎಂದರು.

ವಿಕಲಚೇತನರ ಮುಖಂಡ ಶೇಖರ ಕಾಖಂಡಕಿ ಮಾತನಾಡಿ, ಮ್ಯುಟೇಶನ್ ಅವಧಿ ಹೆಚ್ಚಿಸಿ ಪ್ರೋಟೊಕಾಲದಿಂದ ಗ್ರಾಮ ಆಡಳಿತ ಅಧಿಕಾರಿಗಳನ್ನು ಕೈ ಬೀಡಬೇಕು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಜಾಬ್ ಚಾರ್ಟ ನಿಗದಿವಪಡಿಸಬೇಕು ಎಂದರು.

ಗ್ರಾಮ ಆಡಳಿತ ಅಧಿಕಾರಿಗಳು ಸೇರಿದಂತೆ ಕಂದಾಯ ಇಲಾಖೆ ನೌಕರರ ವರ್ಗಾವಣೆ ನಿಯಮಾವಳಿ ಅವೈಜ್ಞಾನಿಕವಾಗಿದ್ದು ಎಲ್ಲ ಇಲಾಖೆ ನೌಕರರ ನಿಯಮಾವಳಿಯಂತೆ ಅವರ ಕೇಳಿದ ಯಾವುದೇ ಅಂತರ ಜಿಲ್ಲೆಗಳಿಗೆ ವರ್ಗಾವಣೆ ಮಾಡಲು ಮಾರ್ಗಸೂಚಿಸಿ ಹೊರಡಿಸಿ ಮಾನವಿಯತೇಯ ಮೆರೆಗೆ ವಯೋವೃದ್ದ ತಂದೆ ತಾಯಿ ಸೇವೆ ಮಾಡಲು ಅನೂಕೂಲ ಒದಗಿಸಬೇಕು ಮಾಜಿ ಸೈನಿಕರ ಹಾಗೂ ಕಾಯಿಲೆ ಪೀಡತ ನೌಕರರ ವರ್ಗಾವಣೆಯನ್ನು ಯಾವದೇ ಅವಧಿ ಪರಿಗಣಿಸದೇ ನೇರವಾಗಿ ವರ್ಗಾವಣೆ ಮಾಡಬೇಕು ಎಂದು ಭಾರತೀಯ ಕಿಸಾನ್ ಸಂಘ ಬಾಗಲಕೋಟೆ ಜಿಲ್ಲಾ ಅಧ್ಯಕ್ಷ ವಿರುಪಾಕ್ಷಯ್ಯ ಪಂ. ಹಿರೇಮಠ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಸುಬ್ಬರಾಯಗೌಡ ಪಾಟೀಲ, ಡೊಂಗ್ರೀ ನಧಾಪ, ಎಂ. ವಾಯ್. ವಡವಾಣಿ, ಸಂಗಪ್ಪ ಅಗಸರ ಅಶೋಕ ದೇವಿನವರ, ಗುರು ಅನಗವಾಡಿ, ಶ್ರೀಶೈಲ ಮೇಟಿ, ಮಂಜು ಭಾವಿ ಯಲ್ಲಾಲಿಂಗ ಕುರಿ, ಗಿರೀಶ ಮಂಟೂರ, ವಿಠ್ಠಲ ಹನುಮರ, ಈರಪ್ಪ ಗಾಣಿಗೇರ, ಅಶೋಕ ಮುಳವಾಡ ಸೇರಿದಂತೆ ಅನೇಕ ಮುಖಂಡರು ಇದ್ದರು.

Latest News

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ  :       ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಮುದ್ದೇಬಿಹಾಳ : ತಂಗಡಗಿ ಇಳಿಜಾರಿನಿಂದ ಶಿರೋಳ ಗ್ರಾಮದ ಬಳಿ ಹಾಯ್ದು ಹೋಗಿರುವ ಕೆಬಿಜೆಎನ್‌ಎಲ್‌ನ ಎಡದಂಡೆ

MUDDEBIHAL :  ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

MUDDEBIHAL : ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ. ಈ ಘಟನೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಇಲಾಖೆಯಿಂದ ಶೋಧ ಕಾರ್ಯ ಮುಂದುವರೆದಿದೆ. ಮಹೆಬೂಬ ನಗರದ ಪಕ್ಕದಲ್ಲಿರುವ ಆಶ್ರಯ ಕಾಲನಿಯಲ್ಲಿ ವಾಸವಿದ್ದ ಸುಡಗಾಡ ಸಿದ್ಧ ಜನಾಂಗದ ಇಬ್ಬರು ಯುವಕರು, ಓರ್ವ ಯುವತಿ ಕಾಲುವೆಯಲ್ಲಿ ಮುಳುಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರಿಂದ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಬಸಮ್ಮ ಚೆನ್ನಪ್ಪ ಕೊಣ್ಣೂರ(21),

ಐದು ದಿನಗಳ ಹೋರಾಟ ಅಂತ್ಯ :                                       ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ  ಅಧಿಕೃತ ಘೋಷಣೆ

ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಮುದ್ದೇಬಿಹಾಳ : ಕಬ್ಬಿನ ರಿಕವರಿ ಆಧಾರದ ಮೇಲೆ ಟನ್ ಕಬ್ಬಿಗೆ 3264 ರೂ.ನೀಡುವುದಾಗಿ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು ಕಳೆದ ಐದು ದಿನಗಳಿಂದ ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ರೈತರ ಹೋರಾಟ ಅಂತ್ಯಗೊAಡಿದೆ. ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ಕಬ್ಬಿನ ವಾಹನಗಳನ್ನು ತಡೆದು ನಿಲ್ಲಿಸಿ ಕರ್ನಾಟಕ ರೈತ ಸಂಘ ಹಾಗೂ ರೈತಪರ ಸಂಘಟನೆಯ ಮುಖಂಡರು ಹೋರಾಟ ಆರಂಭಿಸಿದ್ದರು.ಇಲ್ಲಿನ