ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಭಾರತೀಯ ಕಿಸಾನ ಸಂಘದ ಬೆಂಬಲ

ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಭಾರತೀಯ ಕಿಸಾನ ಸಂಘದ ಬೆಂಬಲ

ಬೀಳಗಿ: ಗ್ರಾಮ ಆಡಳಿತಾಧಿಕಾರಿಗಳು ಮೂರು ದಿನಗಳಿಂದ ರಾಜ್ಯಾದಂತ ತಮ್ಮ ವಿವಿಧ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಮುಷ್ಕರ ನಡೆಸಿರುವುದರಿಂದ ಸಾರ್ವಜನಿಕರಿಗೆ ಹಾಗೂ ರೈತರಿಗೆ ತೀವ್ರ ತೊಂದರೆಯಾಗಿದ್ದು, ಅವರ ಬೇಡಿಕೆಗಳು ನ್ಯಾಯೋಚಿತವಾಗಿದ್ದು ತಕ್ಷಣ ಸರಕಾರ ಸ್ಪಂದಿಸಬೇಕೆಂದು ಅವರ ಹೋರಾಟ ಬೆಂಬಲಿಸಿ ಆಗ್ರಹಿಸಿ ಭಾರತೀಯ ಕಿಸಾನ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ತಹಶೀಲ್ದಾರ ಕಚೇರಿ ಮುಂದೆ ಬೆಂಬಲಿಸಿ ಪ್ರತಿಭಟನೆ ನಡೆಸಿದರು.

ಭಾರತೀಯ ಕಿಸಾನ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಹಿರೇಮಠ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳು ಪ್ರತಿಯೊಬ್ಬರ ಜನನದಿಂದ ಮರಣದವರಿಗೆ ಹಾಗೂ ಯಾವುದೇ ಕೃಷಿ ಚಟುವಟಿಕೆ ಕಾಗದ ಪತ್ರಗಳು ಸೇರಿದಂತೆ ವಿವಿಧ ಸೇವೆಗಳನ್ನು ಒದಗಿಸುವಲ್ಲಿ ಸದಾ ಶ್ರಮಿಸುತ್ತಿದ್ದು ಕೇಂದ್ರ ಸ್ಥಾನದಲ್ಲಿ ಅವರಿಗೆ ಕಚೇರಿ ನಿರ್ಮಿಸಿ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು, ವಂಶ ವೃಕ್ಷ ಜಾತಿ ಪ್ರಮಾಣ ಪತ್ರಗಳ ವಿತರಣೆ ವಿಚಾರವಾಗಿ ತಪಿಸ್ಥರಲ್ಲದ ಕಂದಾಯ ನೌಕರರ ಮೇಲೆ ಎಪ್ ಐ ಆರ್ ದಾಖಲಿಸಿದೇ ತಪಿಸ್ಥ ಅರ್ಜಿದಾರರನ್ಮು ಹೊಣೆಗಾರರನ್ನಾಗಿಸಬೇಕು ಎಂದರು.

ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವನಗೌಡ ಪಾಟೀಲ ಮಾತನಾಡಿ, ಬೆಳೆ ಸಮೀಕ್ಷೆ ಹಾಗೂ ಬೆಳೆ ಹಾನಿ ಪರಿಹಾರದ ಕೆಲಸವನ್ನು ಕೃಷಿ ತೋಟಗಾರಿಕೆ ಆಯಾ ಇಲಾಖೆಗಳಿಗೆ ವಹಿಸಬೇಕು ಹಾಗೂ ಬಾಗಲಕೋಟೆ ತೋಟಗಾರಿಕಾ ವಿಶ್ವ ವಿದ್ಯಾಲಯವನ್ನು ಮುಂದವರಿಸಬೇಕು ಎಂದರು.

ವಿಕಲಚೇತನರ ಮುಖಂಡ ಶೇಖರ ಕಾಖಂಡಕಿ ಮಾತನಾಡಿ, ಮ್ಯುಟೇಶನ್ ಅವಧಿ ಹೆಚ್ಚಿಸಿ ಪ್ರೋಟೊಕಾಲದಿಂದ ಗ್ರಾಮ ಆಡಳಿತ ಅಧಿಕಾರಿಗಳನ್ನು ಕೈ ಬೀಡಬೇಕು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಜಾಬ್ ಚಾರ್ಟ ನಿಗದಿವಪಡಿಸಬೇಕು ಎಂದರು.

ಗ್ರಾಮ ಆಡಳಿತ ಅಧಿಕಾರಿಗಳು ಸೇರಿದಂತೆ ಕಂದಾಯ ಇಲಾಖೆ ನೌಕರರ ವರ್ಗಾವಣೆ ನಿಯಮಾವಳಿ ಅವೈಜ್ಞಾನಿಕವಾಗಿದ್ದು ಎಲ್ಲ ಇಲಾಖೆ ನೌಕರರ ನಿಯಮಾವಳಿಯಂತೆ ಅವರ ಕೇಳಿದ ಯಾವುದೇ ಅಂತರ ಜಿಲ್ಲೆಗಳಿಗೆ ವರ್ಗಾವಣೆ ಮಾಡಲು ಮಾರ್ಗಸೂಚಿಸಿ ಹೊರಡಿಸಿ ಮಾನವಿಯತೇಯ ಮೆರೆಗೆ ವಯೋವೃದ್ದ ತಂದೆ ತಾಯಿ ಸೇವೆ ಮಾಡಲು ಅನೂಕೂಲ ಒದಗಿಸಬೇಕು ಮಾಜಿ ಸೈನಿಕರ ಹಾಗೂ ಕಾಯಿಲೆ ಪೀಡತ ನೌಕರರ ವರ್ಗಾವಣೆಯನ್ನು ಯಾವದೇ ಅವಧಿ ಪರಿಗಣಿಸದೇ ನೇರವಾಗಿ ವರ್ಗಾವಣೆ ಮಾಡಬೇಕು ಎಂದು ಭಾರತೀಯ ಕಿಸಾನ್ ಸಂಘ ಬಾಗಲಕೋಟೆ ಜಿಲ್ಲಾ ಅಧ್ಯಕ್ಷ ವಿರುಪಾಕ್ಷಯ್ಯ ಪಂ. ಹಿರೇಮಠ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಸುಬ್ಬರಾಯಗೌಡ ಪಾಟೀಲ, ಡೊಂಗ್ರೀ ನಧಾಪ, ಎಂ. ವಾಯ್. ವಡವಾಣಿ, ಸಂಗಪ್ಪ ಅಗಸರ ಅಶೋಕ ದೇವಿನವರ, ಗುರು ಅನಗವಾಡಿ, ಶ್ರೀಶೈಲ ಮೇಟಿ, ಮಂಜು ಭಾವಿ ಯಲ್ಲಾಲಿಂಗ ಕುರಿ, ಗಿರೀಶ ಮಂಟೂರ, ವಿಠ್ಠಲ ಹನುಮರ, ಈರಪ್ಪ ಗಾಣಿಗೇರ, ಅಶೋಕ ಮುಳವಾಡ ಸೇರಿದಂತೆ ಅನೇಕ ಮುಖಂಡರು ಇದ್ದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ