33.57 ಲಕ್ಷ ವೆಚ್ಚದ ಕಾಲುವೆ ಬಾಕಿ ಕಾಮಗಾರಿಗೆ ಭೂಮಿ ಪೂಜೆ: ಬೂದಿಹಾಳ-ಪೀರಾಪೂರ,ನಾಗರಬೆಟ್ಟ ಏತನೀರಾವರಿ ಯೋಜನೆ ಶೀಘ್ರ ಲೋಕಾರ್ಪಣೆ

33.57 ಲಕ್ಷ ವೆಚ್ಚದ ಕಾಲುವೆ ಬಾಕಿ ಕಾಮಗಾರಿಗೆ ಭೂಮಿ ಪೂಜೆ: ಬೂದಿಹಾಳ-ಪೀರಾಪೂರ,ನಾಗರಬೆಟ್ಟ ಏತನೀರಾವರಿ ಯೋಜನೆ ಶೀಘ್ರ ಲೋಕಾರ್ಪಣೆ

ಮುದ್ದೇಬಿಹಾಳ : ಈ ಭಾಗದಲ್ಲಿ ಪ್ರಗತಿಯಲ್ಲಿರುವ ಬೂದಿಹಾಳ-ಪೀರಾಪೂರ ಹಾಗೂ ನಾಗರಬೆಟ್ಟ ಏತ ನೀರಾವರಿ ಯೋಜನೆಗಳನ್ನು ಶೀಘ್ರವೇ ದಿನಾಂಕ ನಿಗದಿ ಮಾಡಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಕೆಎಸ್‌ಡಿ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

ತಾಲ್ಲೂಕಿನ ನಾಲತವಾಡದ ಸಮೀಪದಲ್ಲಿರುವ ಅಮರೇಶ್ವರ ದೇವಸ್ಥಾನದ ಬಳಿ ಸ್ಥಗಿತಗೊಂಡಿದ್ದ ಚಿಮ್ಮಲಗಿ ಏತ ನೀರಾವರಿ ಪೂರ್ವ ಕಾಲುವೆಯ ಬಾಕಿ ಕಾಮಗಾರಿಗೆ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಗುರುವಾರ ಭೂಮಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸುಮಾರು ವರ್ಷಗಳಿಂದಲೂ ನನೆಗುದಿಗೆ ಬಿದ್ದಿದ್ದ ಚಿಮ್ಮಲಗಿ ಏತ ನೀರಾವರಿ ಪೂರ್ವ ಕಾಲುವೆಯ ಕಿಮೀ 19.600 ರ ರಸ್ತೆಗೆ ಅಡ್ಡಲಾಗಿ ನಿರ್ಮಿಸುವ ಕಾಲುವೆ 33.57 ಲಕ್ಷ ಮೊತ್ತದ ಸೇತುವೆಗೆ ಚಾಲನೆ ನೀಡಲಾಗಿದೆ. ಸದ್ಯ ಚಾಲನೆ ನೀಡಲಾದ ಸೇತುವೆ ಕಾಮಗಾರಿಗೆ ಪ್ಯಾಕೇಜ್ ಕಾಮಗಾರಿಯಲ್ಲಿ ಸೇರಿಸಲಾಗಿತ್ತು. ಮನಬಂದAತೆ ಯಾರಿಗೂ ಗುತ್ತಿಗೆ ಕೊಡಬಾರದು ಎನ್ನುವ ಉದ್ದೇಶದಿಂದ ವಿಳಂಬವಾಯಿತು. ಸಿಂಗಲ್ ಗುತ್ತಿಗೆ ಅವೈಜ್ಞಾನಿಕವಾಗಿತ್ತು. ಪ್ಯಾಕೇಜ್‌ಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಕಾಮಗಾರಿ ವಿಳಂಬವಾಯಿತು ಎಂದರು.

ರೈತರ ಅಡೆತಡೆ ಮತ್ತು ಗುತ್ತಿಗೆಯ ತಾಂತ್ರಿಕ ದೋಷದ ಪರಿಣಾಮ ಹಲವು ಬಾರಿ ಕಾಮಗಾರಿ ವಿಳಂಬವಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ಈಗ ಕೆಲಸ ಶುರು ಮಾಡಲಾಗುತ್ತದೆ ಎಂದರು.ನಮ್ಮ ಭಾಗದ ನಾಗರಬೆಟ್ಟ ಹಾಗೂ ಬೂದಿಹಾಳ ಪೀರಾಪೂರ ಏತ ನೀರಾವರಿ ಯೋಜನೆಯೂ ಸಹ ಬಹುತೇಕ ಪೂರ್ಣಗೊಂಡಿದ್ದು ಸಿಎಂ ಹಾಗೂ ಡಿಸಿಎಂ ಅವರೊಂದಿಗೆ ಚರ್ಚಿಸಿ ದಿನಾಂಕ ನಿಗದಿ ಮಾಡಲಾಗುವುದು ಎಂದರು.

—-

ಆಮರಣ ಉಪವಾಸ ಸತ್ಯಾಗ್ರಹ ಹಿಂದಕ್ಕೆ : ಹಲವಾರು ವರ್ಷ ನನೆಗುದಿಗೆ ಬಿದ್ದಿದ್ದ ಕಾಲುವೆ ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಆಗ್ರಹಿಸಿ ಯುವ ಜನ ಸೇನೆಯ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ನೇತೃತ್ವದಲ್ಲಿ ನ.18 ರಿಂದ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ದರು.ಈ ಹಿಂದೆಯೂ ಮೂರು ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿ ಅಧಿಕಾರಿಗಳು, ಸರ್ಕಾರದ ಗಮನಕ್ಕೆ ತಂದಿದ್ದರು.ಇದಕ್ಕೆ ಸ್ಪಂದಿಸಿರುವ ಶಾಸಕ ಅಪ್ಪಾಜಿ ನಾಡಗೌಡ ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳೊಂದಿಗೆ ಮಾತನಾಡಿ ಕಾಮಗಾರಿ ಆರಂಭಕ್ಕೆ ಭೂಮಿ ಪೂಜೆ ನಡೆಸುವ ಮೂಲಕ ಹೋರಾಟಗಾರರಿಗೆ ಸ್ಪಂದಿಸಿದ್ದಾರೆ.ಹೋರಾಟಕ್ಕೆ ಅಧಿಕಾರಿಗಳು, ಸರ್ಕಾರ, ಶಾಸಕರು ಸ್ಪಂದಿಸಿರುವ ಹಿನ್ನೆಲೆಯಲ್ಲಿ ಉದ್ದೇಶಿತ ಹೋರಾಟವನ್ನು ಹಿಂದಕ್ಕೆ ಪಡೆದುಕೊಂಡಿರುವುದಾಗಿ ಹೋರಾಟಗಾರ ಶಿವಾನಂದ ವಾಲಿ ತಿಳಿಸಿದ್ದು ಆದಷ್ಟು ಬೇಗ ರೈತ ಜಮೀನುಗಳಿಗೆ ನೀರು ಹರಿಯಬೇಕು.ಜಮೀನು ಕಳೆದುಕೊಂಡವರಿಗೆ ಪರಿಹಾರ ದೊರೆಯಬೇಕು ಎಂದು DCG NEWSಗೆ ತಿಳಿಸಿದ್ದಾರೆ.

ಪ್ರಮುಖರಾದ ಮುರುಗಯ್ಯ ಕಂಠಿಮಠ, ಪ.ಪಂ ಸದಸ್ಯರಾದ ಪ್ರಥ್ವಿರಾಜ ನಾಡಗೌಡ, ಮುಖಂಡ ಗುರು ದೇಶಮುಖ, ಗುತ್ತಿಗೆದಾರ ರಾಯನಗೌಡ ತಾತರಡ್ಡಿ, ಪ.ಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಇಲಕಲ್, ಉಪಾಧ್ಯಕ್ಷ ಬಸವರಾಜ ಗಂಗನಗೌಡ್ರ, ಸಿಒ ಈರಣ್ಣ ಕೊಣ್ಣೂರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ವಾಯ್.ಎಚ್.ವಿಜಯಕರ್, ಲಲಿತಾ ಗೋರಬಾಳ, ರಾಜಬಿ ನಾಡದಾಳ, ಯಮನಪ್ಪ ಬಂಡಿವಡ್ಡರ, ಕೆಬಿಜೆಎನ್‌ಎಲ್ ಎಇ ಅಮರೇಗೌಡ, ಮುತ್ತು ಗೋರಬಾಳ,ಎಇ ಅಬೂಬಕರ್ ಬಾಗವಾನ, ಸುನಿಲಕುಮಾರ , ಮಹಾಂತೇಶ ಗಂಗನಗೌಡ್ರ , ಉಮರ್ ಮೂಲಿಮನಿ, ಬಾಬು ಕ್ಷತ್ರಿ, ಅಮರಪ್ಪ ಸೀರಿ, ಅಲ್ಲಾಭಕ್ಷ ಮೂಲಿಮನಿ ಇದ್ದರು.

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.