33.57 ಲಕ್ಷ ವೆಚ್ಚದ ಕಾಲುವೆ ಬಾಕಿ ಕಾಮಗಾರಿಗೆ ಭೂಮಿ ಪೂಜೆ: ಬೂದಿಹಾಳ-ಪೀರಾಪೂರ,ನಾಗರಬೆಟ್ಟ ಏತನೀರಾವರಿ ಯೋಜನೆ ಶೀಘ್ರ ಲೋಕಾರ್ಪಣೆ

33.57 ಲಕ್ಷ ವೆಚ್ಚದ ಕಾಲುವೆ ಬಾಕಿ ಕಾಮಗಾರಿಗೆ ಭೂಮಿ ಪೂಜೆ: ಬೂದಿಹಾಳ-ಪೀರಾಪೂರ,ನಾಗರಬೆಟ್ಟ ಏತನೀರಾವರಿ ಯೋಜನೆ ಶೀಘ್ರ ಲೋಕಾರ್ಪಣೆ

ಮುದ್ದೇಬಿಹಾಳ : ಈ ಭಾಗದಲ್ಲಿ ಪ್ರಗತಿಯಲ್ಲಿರುವ ಬೂದಿಹಾಳ-ಪೀರಾಪೂರ ಹಾಗೂ ನಾಗರಬೆಟ್ಟ ಏತ ನೀರಾವರಿ ಯೋಜನೆಗಳನ್ನು ಶೀಘ್ರವೇ ದಿನಾಂಕ ನಿಗದಿ ಮಾಡಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಕೆಎಸ್‌ಡಿ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

ತಾಲ್ಲೂಕಿನ ನಾಲತವಾಡದ ಸಮೀಪದಲ್ಲಿರುವ ಅಮರೇಶ್ವರ ದೇವಸ್ಥಾನದ ಬಳಿ ಸ್ಥಗಿತಗೊಂಡಿದ್ದ ಚಿಮ್ಮಲಗಿ ಏತ ನೀರಾವರಿ ಪೂರ್ವ ಕಾಲುವೆಯ ಬಾಕಿ ಕಾಮಗಾರಿಗೆ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಗುರುವಾರ ಭೂಮಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸುಮಾರು ವರ್ಷಗಳಿಂದಲೂ ನನೆಗುದಿಗೆ ಬಿದ್ದಿದ್ದ ಚಿಮ್ಮಲಗಿ ಏತ ನೀರಾವರಿ ಪೂರ್ವ ಕಾಲುವೆಯ ಕಿಮೀ 19.600 ರ ರಸ್ತೆಗೆ ಅಡ್ಡಲಾಗಿ ನಿರ್ಮಿಸುವ ಕಾಲುವೆ 33.57 ಲಕ್ಷ ಮೊತ್ತದ ಸೇತುವೆಗೆ ಚಾಲನೆ ನೀಡಲಾಗಿದೆ. ಸದ್ಯ ಚಾಲನೆ ನೀಡಲಾದ ಸೇತುವೆ ಕಾಮಗಾರಿಗೆ ಪ್ಯಾಕೇಜ್ ಕಾಮಗಾರಿಯಲ್ಲಿ ಸೇರಿಸಲಾಗಿತ್ತು. ಮನಬಂದAತೆ ಯಾರಿಗೂ ಗುತ್ತಿಗೆ ಕೊಡಬಾರದು ಎನ್ನುವ ಉದ್ದೇಶದಿಂದ ವಿಳಂಬವಾಯಿತು. ಸಿಂಗಲ್ ಗುತ್ತಿಗೆ ಅವೈಜ್ಞಾನಿಕವಾಗಿತ್ತು. ಪ್ಯಾಕೇಜ್‌ಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಕಾಮಗಾರಿ ವಿಳಂಬವಾಯಿತು ಎಂದರು.

ರೈತರ ಅಡೆತಡೆ ಮತ್ತು ಗುತ್ತಿಗೆಯ ತಾಂತ್ರಿಕ ದೋಷದ ಪರಿಣಾಮ ಹಲವು ಬಾರಿ ಕಾಮಗಾರಿ ವಿಳಂಬವಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ಈಗ ಕೆಲಸ ಶುರು ಮಾಡಲಾಗುತ್ತದೆ ಎಂದರು.ನಮ್ಮ ಭಾಗದ ನಾಗರಬೆಟ್ಟ ಹಾಗೂ ಬೂದಿಹಾಳ ಪೀರಾಪೂರ ಏತ ನೀರಾವರಿ ಯೋಜನೆಯೂ ಸಹ ಬಹುತೇಕ ಪೂರ್ಣಗೊಂಡಿದ್ದು ಸಿಎಂ ಹಾಗೂ ಡಿಸಿಎಂ ಅವರೊಂದಿಗೆ ಚರ್ಚಿಸಿ ದಿನಾಂಕ ನಿಗದಿ ಮಾಡಲಾಗುವುದು ಎಂದರು.

—-

ಆಮರಣ ಉಪವಾಸ ಸತ್ಯಾಗ್ರಹ ಹಿಂದಕ್ಕೆ : ಹಲವಾರು ವರ್ಷ ನನೆಗುದಿಗೆ ಬಿದ್ದಿದ್ದ ಕಾಲುವೆ ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಆಗ್ರಹಿಸಿ ಯುವ ಜನ ಸೇನೆಯ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ನೇತೃತ್ವದಲ್ಲಿ ನ.18 ರಿಂದ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ದರು.ಈ ಹಿಂದೆಯೂ ಮೂರು ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿ ಅಧಿಕಾರಿಗಳು, ಸರ್ಕಾರದ ಗಮನಕ್ಕೆ ತಂದಿದ್ದರು.ಇದಕ್ಕೆ ಸ್ಪಂದಿಸಿರುವ ಶಾಸಕ ಅಪ್ಪಾಜಿ ನಾಡಗೌಡ ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳೊಂದಿಗೆ ಮಾತನಾಡಿ ಕಾಮಗಾರಿ ಆರಂಭಕ್ಕೆ ಭೂಮಿ ಪೂಜೆ ನಡೆಸುವ ಮೂಲಕ ಹೋರಾಟಗಾರರಿಗೆ ಸ್ಪಂದಿಸಿದ್ದಾರೆ.ಹೋರಾಟಕ್ಕೆ ಅಧಿಕಾರಿಗಳು, ಸರ್ಕಾರ, ಶಾಸಕರು ಸ್ಪಂದಿಸಿರುವ ಹಿನ್ನೆಲೆಯಲ್ಲಿ ಉದ್ದೇಶಿತ ಹೋರಾಟವನ್ನು ಹಿಂದಕ್ಕೆ ಪಡೆದುಕೊಂಡಿರುವುದಾಗಿ ಹೋರಾಟಗಾರ ಶಿವಾನಂದ ವಾಲಿ ತಿಳಿಸಿದ್ದು ಆದಷ್ಟು ಬೇಗ ರೈತ ಜಮೀನುಗಳಿಗೆ ನೀರು ಹರಿಯಬೇಕು.ಜಮೀನು ಕಳೆದುಕೊಂಡವರಿಗೆ ಪರಿಹಾರ ದೊರೆಯಬೇಕು ಎಂದು DCG NEWSಗೆ ತಿಳಿಸಿದ್ದಾರೆ.

ಪ್ರಮುಖರಾದ ಮುರುಗಯ್ಯ ಕಂಠಿಮಠ, ಪ.ಪಂ ಸದಸ್ಯರಾದ ಪ್ರಥ್ವಿರಾಜ ನಾಡಗೌಡ, ಮುಖಂಡ ಗುರು ದೇಶಮುಖ, ಗುತ್ತಿಗೆದಾರ ರಾಯನಗೌಡ ತಾತರಡ್ಡಿ, ಪ.ಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಇಲಕಲ್, ಉಪಾಧ್ಯಕ್ಷ ಬಸವರಾಜ ಗಂಗನಗೌಡ್ರ, ಸಿಒ ಈರಣ್ಣ ಕೊಣ್ಣೂರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ವಾಯ್.ಎಚ್.ವಿಜಯಕರ್, ಲಲಿತಾ ಗೋರಬಾಳ, ರಾಜಬಿ ನಾಡದಾಳ, ಯಮನಪ್ಪ ಬಂಡಿವಡ್ಡರ, ಕೆಬಿಜೆಎನ್‌ಎಲ್ ಎಇ ಅಮರೇಗೌಡ, ಮುತ್ತು ಗೋರಬಾಳ,ಎಇ ಅಬೂಬಕರ್ ಬಾಗವಾನ, ಸುನಿಲಕುಮಾರ , ಮಹಾಂತೇಶ ಗಂಗನಗೌಡ್ರ , ಉಮರ್ ಮೂಲಿಮನಿ, ಬಾಬು ಕ್ಷತ್ರಿ, ಅಮರಪ್ಪ ಸೀರಿ, ಅಲ್ಲಾಭಕ್ಷ ಮೂಲಿಮನಿ ಇದ್ದರು.

Latest News

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ;                    ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ:            ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ: ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಸಮಾಜದಲ್ಲಿ ಒಂದು ಸಂಸ್ಥೆ, ಕಾರ್ಖಾನೆ , ಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ಮುದ್ದೇಬಿಹಾಳ : ದೇಶದ ಪ್ರಗತಿ ಪಥದ ಚಾಲನೆಗೆ ಸಂಸ್ಕಾರ ಭರಿತ ಶಿಕ್ಷಣ ಅವಶ್ಯಕ ಎಂದು

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಮುದ್ದೇಬಿಹಾಳ : ಬಣಜಿಗ ಸಮಾಜದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು.ಸಮಾಜದಲ್ಲಿ ಬೆಳೆಯುತ್ತಿರುವ ಪ್ರೋತ್ಸಾಹ ನೀಡುವ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ದೇಶದ ಗಡಿ ಕಾಯುವ ಸೇವೆಯನ್ನು ಆಯ್ಕೆ ಮಾಡಿಕೊಂಡ ಆಯೇಷಾ ವಾಲೀಕಾರ, ಕಾಶೀಬಾಯಿ ಚಲವಾದಿ ಹೆಣ್ಣು ಮಕ್ಕಳಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು.ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ದೇಶದ ಗಡಿ ಕಾಯುವ ಕೆಲಸ ಸಾಮಾನ್ಯವಾದದ್ದಲ್ಲ.ಅದಕ್ಕೆ ಸಾಕಷ್ಟು ತಯಾರಿ ಬೇಕಾಗುತ್ತದೆ.ಬಡತನದಲ್ಲಿ ಇಂತಹ ದೊಡ್ಡ ಸಾಧನೆ ಮಾಡಿದ ನಮ್ಮ ತಾಲ್ಲೂಕಿನ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ ಅಡಿಯಲ್ಲಿ ನಡೆಯುತ್ತಿರುವ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಹಾಗೂ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಯೋಜನೆಯನ್ನು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಪ್ರಕಟಿಸಿದ್ದಾರೆ. ಪರೀಕ್ಷೆ ಎರಡು ವಿಭಾಗಗಳಲ್ಲಿ ನಡೆಯಲಿದ್ದು ದಿನಾಂಕ 8-03-2026 ರಂದು ಬೆಳಗ್ಗೆ 11.30ಕ್ಕೆ ನಡೆಯಲಿರುವ ಪರೀಕ್ಷೆಗೆ 4ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು ಇದರಲ್ಲಿ ಪಾಲ್ಗೊಳ್ಳುವ ಮಕ್ಕಳಲ್ಲಿ ಮೊದಲ ಹತ್ತು