33.57 ಲಕ್ಷ ವೆಚ್ಚದ ಕಾಲುವೆ ಬಾಕಿ ಕಾಮಗಾರಿಗೆ ಭೂಮಿ ಪೂಜೆ: ಬೂದಿಹಾಳ-ಪೀರಾಪೂರ,ನಾಗರಬೆಟ್ಟ ಏತನೀರಾವರಿ ಯೋಜನೆ ಶೀಘ್ರ ಲೋಕಾರ್ಪಣೆ

33.57 ಲಕ್ಷ ವೆಚ್ಚದ ಕಾಲುವೆ ಬಾಕಿ ಕಾಮಗಾರಿಗೆ ಭೂಮಿ ಪೂಜೆ: ಬೂದಿಹಾಳ-ಪೀರಾಪೂರ,ನಾಗರಬೆಟ್ಟ ಏತನೀರಾವರಿ ಯೋಜನೆ ಶೀಘ್ರ ಲೋಕಾರ್ಪಣೆ

ಮುದ್ದೇಬಿಹಾಳ : ಈ ಭಾಗದಲ್ಲಿ ಪ್ರಗತಿಯಲ್ಲಿರುವ ಬೂದಿಹಾಳ-ಪೀರಾಪೂರ ಹಾಗೂ ನಾಗರಬೆಟ್ಟ ಏತ ನೀರಾವರಿ ಯೋಜನೆಗಳನ್ನು ಶೀಘ್ರವೇ ದಿನಾಂಕ ನಿಗದಿ ಮಾಡಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಕೆಎಸ್‌ಡಿ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

ತಾಲ್ಲೂಕಿನ ನಾಲತವಾಡದ ಸಮೀಪದಲ್ಲಿರುವ ಅಮರೇಶ್ವರ ದೇವಸ್ಥಾನದ ಬಳಿ ಸ್ಥಗಿತಗೊಂಡಿದ್ದ ಚಿಮ್ಮಲಗಿ ಏತ ನೀರಾವರಿ ಪೂರ್ವ ಕಾಲುವೆಯ ಬಾಕಿ ಕಾಮಗಾರಿಗೆ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಗುರುವಾರ ಭೂಮಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸುಮಾರು ವರ್ಷಗಳಿಂದಲೂ ನನೆಗುದಿಗೆ ಬಿದ್ದಿದ್ದ ಚಿಮ್ಮಲಗಿ ಏತ ನೀರಾವರಿ ಪೂರ್ವ ಕಾಲುವೆಯ ಕಿಮೀ 19.600 ರ ರಸ್ತೆಗೆ ಅಡ್ಡಲಾಗಿ ನಿರ್ಮಿಸುವ ಕಾಲುವೆ 33.57 ಲಕ್ಷ ಮೊತ್ತದ ಸೇತುವೆಗೆ ಚಾಲನೆ ನೀಡಲಾಗಿದೆ. ಸದ್ಯ ಚಾಲನೆ ನೀಡಲಾದ ಸೇತುವೆ ಕಾಮಗಾರಿಗೆ ಪ್ಯಾಕೇಜ್ ಕಾಮಗಾರಿಯಲ್ಲಿ ಸೇರಿಸಲಾಗಿತ್ತು. ಮನಬಂದAತೆ ಯಾರಿಗೂ ಗುತ್ತಿಗೆ ಕೊಡಬಾರದು ಎನ್ನುವ ಉದ್ದೇಶದಿಂದ ವಿಳಂಬವಾಯಿತು. ಸಿಂಗಲ್ ಗುತ್ತಿಗೆ ಅವೈಜ್ಞಾನಿಕವಾಗಿತ್ತು. ಪ್ಯಾಕೇಜ್‌ಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಕಾಮಗಾರಿ ವಿಳಂಬವಾಯಿತು ಎಂದರು.

ರೈತರ ಅಡೆತಡೆ ಮತ್ತು ಗುತ್ತಿಗೆಯ ತಾಂತ್ರಿಕ ದೋಷದ ಪರಿಣಾಮ ಹಲವು ಬಾರಿ ಕಾಮಗಾರಿ ವಿಳಂಬವಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ಈಗ ಕೆಲಸ ಶುರು ಮಾಡಲಾಗುತ್ತದೆ ಎಂದರು.ನಮ್ಮ ಭಾಗದ ನಾಗರಬೆಟ್ಟ ಹಾಗೂ ಬೂದಿಹಾಳ ಪೀರಾಪೂರ ಏತ ನೀರಾವರಿ ಯೋಜನೆಯೂ ಸಹ ಬಹುತೇಕ ಪೂರ್ಣಗೊಂಡಿದ್ದು ಸಿಎಂ ಹಾಗೂ ಡಿಸಿಎಂ ಅವರೊಂದಿಗೆ ಚರ್ಚಿಸಿ ದಿನಾಂಕ ನಿಗದಿ ಮಾಡಲಾಗುವುದು ಎಂದರು.

—-

ಆಮರಣ ಉಪವಾಸ ಸತ್ಯಾಗ್ರಹ ಹಿಂದಕ್ಕೆ : ಹಲವಾರು ವರ್ಷ ನನೆಗುದಿಗೆ ಬಿದ್ದಿದ್ದ ಕಾಲುವೆ ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಆಗ್ರಹಿಸಿ ಯುವ ಜನ ಸೇನೆಯ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ನೇತೃತ್ವದಲ್ಲಿ ನ.18 ರಿಂದ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ದರು.ಈ ಹಿಂದೆಯೂ ಮೂರು ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿ ಅಧಿಕಾರಿಗಳು, ಸರ್ಕಾರದ ಗಮನಕ್ಕೆ ತಂದಿದ್ದರು.ಇದಕ್ಕೆ ಸ್ಪಂದಿಸಿರುವ ಶಾಸಕ ಅಪ್ಪಾಜಿ ನಾಡಗೌಡ ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳೊಂದಿಗೆ ಮಾತನಾಡಿ ಕಾಮಗಾರಿ ಆರಂಭಕ್ಕೆ ಭೂಮಿ ಪೂಜೆ ನಡೆಸುವ ಮೂಲಕ ಹೋರಾಟಗಾರರಿಗೆ ಸ್ಪಂದಿಸಿದ್ದಾರೆ.ಹೋರಾಟಕ್ಕೆ ಅಧಿಕಾರಿಗಳು, ಸರ್ಕಾರ, ಶಾಸಕರು ಸ್ಪಂದಿಸಿರುವ ಹಿನ್ನೆಲೆಯಲ್ಲಿ ಉದ್ದೇಶಿತ ಹೋರಾಟವನ್ನು ಹಿಂದಕ್ಕೆ ಪಡೆದುಕೊಂಡಿರುವುದಾಗಿ ಹೋರಾಟಗಾರ ಶಿವಾನಂದ ವಾಲಿ ತಿಳಿಸಿದ್ದು ಆದಷ್ಟು ಬೇಗ ರೈತ ಜಮೀನುಗಳಿಗೆ ನೀರು ಹರಿಯಬೇಕು.ಜಮೀನು ಕಳೆದುಕೊಂಡವರಿಗೆ ಪರಿಹಾರ ದೊರೆಯಬೇಕು ಎಂದು DCG NEWSಗೆ ತಿಳಿಸಿದ್ದಾರೆ.

ಪ್ರಮುಖರಾದ ಮುರುಗಯ್ಯ ಕಂಠಿಮಠ, ಪ.ಪಂ ಸದಸ್ಯರಾದ ಪ್ರಥ್ವಿರಾಜ ನಾಡಗೌಡ, ಮುಖಂಡ ಗುರು ದೇಶಮುಖ, ಗುತ್ತಿಗೆದಾರ ರಾಯನಗೌಡ ತಾತರಡ್ಡಿ, ಪ.ಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಇಲಕಲ್, ಉಪಾಧ್ಯಕ್ಷ ಬಸವರಾಜ ಗಂಗನಗೌಡ್ರ, ಸಿಒ ಈರಣ್ಣ ಕೊಣ್ಣೂರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ವಾಯ್.ಎಚ್.ವಿಜಯಕರ್, ಲಲಿತಾ ಗೋರಬಾಳ, ರಾಜಬಿ ನಾಡದಾಳ, ಯಮನಪ್ಪ ಬಂಡಿವಡ್ಡರ, ಕೆಬಿಜೆಎನ್‌ಎಲ್ ಎಇ ಅಮರೇಗೌಡ, ಮುತ್ತು ಗೋರಬಾಳ,ಎಇ ಅಬೂಬಕರ್ ಬಾಗವಾನ, ಸುನಿಲಕುಮಾರ , ಮಹಾಂತೇಶ ಗಂಗನಗೌಡ್ರ , ಉಮರ್ ಮೂಲಿಮನಿ, ಬಾಬು ಕ್ಷತ್ರಿ, ಅಮರಪ್ಪ ಸೀರಿ, ಅಲ್ಲಾಭಕ್ಷ ಮೂಲಿಮನಿ ಇದ್ದರು.

Latest News

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ತಾಲೂಕಿನ ದೇವೂರ ಜಾಕ್‌ವೆಲ್‌ನಿಂದ ಮುದ್ದೇಬಿಹಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮುಖ್ಯ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ 2026 ನೇ ಸಾಲಿನ "ಕಾಯಕ ಯೋಗಿ" ರಾಜ್ಯ ಪ್ರಶಸ್ತಿ ಲಭಿಸಿದೆ. ಪವಾಡ ಬಯಲು ಆಂದೋಲನದ ಮೂಲಕ ರಾಜ್ಯಾದ್ಯಂತ ಹೆಸರಾಗಿರುವ ಡಾ.ಹುಲಿಕಲ್ ನಟರಾಜ ಸಂಸ್ಥಾಪಕ ಅಧ್ಯಕ್ಷರಾಗಿರುವ 'ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ) ದೊಡ್ಡಬಳ್ಳಾಪುರ ಇವರು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಗಡೇದ ಅವರು ಸದ್ಯಕ್ಕೆ ಹೂವಿನ ಹಿಪ್ಪರಗಿ ಅಂಚೆ ಇಲಾಖೆಯಲ್ಲಿ ಸಬ್ ಪೋಸ್ಟ್ಮಾಸ್ಟರ್ ಆಗಿ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು ಸಮಾಜಕ್ಕೆ ನಿಸ್ವಾರ್ಥದಿಂದ ಕೊಡುವುದಿಲ್ಲ.ತಾಲ್ಲೂಕಿನಲ್ಲಿ ಕೆಲವು ಗುತ್ತಿಗೆದಾರರಿಗೆ ಕೆಲಸ ಬೇಕು.ಆದರೆ ಸಮಾಜಕ್ಕೆ ಕೊಡುವ ಮಾತು ದೂರ.ಅಂತವರಿಗೆ ಮುಂದಿನ ದಿನಗಳಲ್ಲಿ ಕಡಿವಾಣ ಹಾಕುವ ಕೆಲಸ ಮಾಡುವುದಾಗಿ ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿ ಹಮ್ಮಿಕೊಂಡಿದ್ದ ಯಲ್ಲಾಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿ ಸನ್ 2025-26 ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 25 ಲಕ್ಷ ರೂ.ವೆಚ್ಚದಲ್ಲಿ ಸಭಾಭವನದ ಭೂಮಿಪೂಜೆ