33.57 ಲಕ್ಷ ವೆಚ್ಚದ ಕಾಲುವೆ ಬಾಕಿ ಕಾಮಗಾರಿಗೆ ಭೂಮಿ ಪೂಜೆ: ಬೂದಿಹಾಳ-ಪೀರಾಪೂರ,ನಾಗರಬೆಟ್ಟ ಏತನೀರಾವರಿ ಯೋಜನೆ ಶೀಘ್ರ ಲೋಕಾರ್ಪಣೆ

33.57 ಲಕ್ಷ ವೆಚ್ಚದ ಕಾಲುವೆ ಬಾಕಿ ಕಾಮಗಾರಿಗೆ ಭೂಮಿ ಪೂಜೆ: ಬೂದಿಹಾಳ-ಪೀರಾಪೂರ,ನಾಗರಬೆಟ್ಟ ಏತನೀರಾವರಿ ಯೋಜನೆ ಶೀಘ್ರ ಲೋಕಾರ್ಪಣೆ

ಮುದ್ದೇಬಿಹಾಳ : ಈ ಭಾಗದಲ್ಲಿ ಪ್ರಗತಿಯಲ್ಲಿರುವ ಬೂದಿಹಾಳ-ಪೀರಾಪೂರ ಹಾಗೂ ನಾಗರಬೆಟ್ಟ ಏತ ನೀರಾವರಿ ಯೋಜನೆಗಳನ್ನು ಶೀಘ್ರವೇ ದಿನಾಂಕ ನಿಗದಿ ಮಾಡಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಕೆಎಸ್‌ಡಿ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

ತಾಲ್ಲೂಕಿನ ನಾಲತವಾಡದ ಸಮೀಪದಲ್ಲಿರುವ ಅಮರೇಶ್ವರ ದೇವಸ್ಥಾನದ ಬಳಿ ಸ್ಥಗಿತಗೊಂಡಿದ್ದ ಚಿಮ್ಮಲಗಿ ಏತ ನೀರಾವರಿ ಪೂರ್ವ ಕಾಲುವೆಯ ಬಾಕಿ ಕಾಮಗಾರಿಗೆ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಗುರುವಾರ ಭೂಮಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸುಮಾರು ವರ್ಷಗಳಿಂದಲೂ ನನೆಗುದಿಗೆ ಬಿದ್ದಿದ್ದ ಚಿಮ್ಮಲಗಿ ಏತ ನೀರಾವರಿ ಪೂರ್ವ ಕಾಲುವೆಯ ಕಿಮೀ 19.600 ರ ರಸ್ತೆಗೆ ಅಡ್ಡಲಾಗಿ ನಿರ್ಮಿಸುವ ಕಾಲುವೆ 33.57 ಲಕ್ಷ ಮೊತ್ತದ ಸೇತುವೆಗೆ ಚಾಲನೆ ನೀಡಲಾಗಿದೆ. ಸದ್ಯ ಚಾಲನೆ ನೀಡಲಾದ ಸೇತುವೆ ಕಾಮಗಾರಿಗೆ ಪ್ಯಾಕೇಜ್ ಕಾಮಗಾರಿಯಲ್ಲಿ ಸೇರಿಸಲಾಗಿತ್ತು. ಮನಬಂದAತೆ ಯಾರಿಗೂ ಗುತ್ತಿಗೆ ಕೊಡಬಾರದು ಎನ್ನುವ ಉದ್ದೇಶದಿಂದ ವಿಳಂಬವಾಯಿತು. ಸಿಂಗಲ್ ಗುತ್ತಿಗೆ ಅವೈಜ್ಞಾನಿಕವಾಗಿತ್ತು. ಪ್ಯಾಕೇಜ್‌ಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಕಾಮಗಾರಿ ವಿಳಂಬವಾಯಿತು ಎಂದರು.

ರೈತರ ಅಡೆತಡೆ ಮತ್ತು ಗುತ್ತಿಗೆಯ ತಾಂತ್ರಿಕ ದೋಷದ ಪರಿಣಾಮ ಹಲವು ಬಾರಿ ಕಾಮಗಾರಿ ವಿಳಂಬವಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ಈಗ ಕೆಲಸ ಶುರು ಮಾಡಲಾಗುತ್ತದೆ ಎಂದರು.ನಮ್ಮ ಭಾಗದ ನಾಗರಬೆಟ್ಟ ಹಾಗೂ ಬೂದಿಹಾಳ ಪೀರಾಪೂರ ಏತ ನೀರಾವರಿ ಯೋಜನೆಯೂ ಸಹ ಬಹುತೇಕ ಪೂರ್ಣಗೊಂಡಿದ್ದು ಸಿಎಂ ಹಾಗೂ ಡಿಸಿಎಂ ಅವರೊಂದಿಗೆ ಚರ್ಚಿಸಿ ದಿನಾಂಕ ನಿಗದಿ ಮಾಡಲಾಗುವುದು ಎಂದರು.

—-

ಆಮರಣ ಉಪವಾಸ ಸತ್ಯಾಗ್ರಹ ಹಿಂದಕ್ಕೆ : ಹಲವಾರು ವರ್ಷ ನನೆಗುದಿಗೆ ಬಿದ್ದಿದ್ದ ಕಾಲುವೆ ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಆಗ್ರಹಿಸಿ ಯುವ ಜನ ಸೇನೆಯ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ನೇತೃತ್ವದಲ್ಲಿ ನ.18 ರಿಂದ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ದರು.ಈ ಹಿಂದೆಯೂ ಮೂರು ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿ ಅಧಿಕಾರಿಗಳು, ಸರ್ಕಾರದ ಗಮನಕ್ಕೆ ತಂದಿದ್ದರು.ಇದಕ್ಕೆ ಸ್ಪಂದಿಸಿರುವ ಶಾಸಕ ಅಪ್ಪಾಜಿ ನಾಡಗೌಡ ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳೊಂದಿಗೆ ಮಾತನಾಡಿ ಕಾಮಗಾರಿ ಆರಂಭಕ್ಕೆ ಭೂಮಿ ಪೂಜೆ ನಡೆಸುವ ಮೂಲಕ ಹೋರಾಟಗಾರರಿಗೆ ಸ್ಪಂದಿಸಿದ್ದಾರೆ.ಹೋರಾಟಕ್ಕೆ ಅಧಿಕಾರಿಗಳು, ಸರ್ಕಾರ, ಶಾಸಕರು ಸ್ಪಂದಿಸಿರುವ ಹಿನ್ನೆಲೆಯಲ್ಲಿ ಉದ್ದೇಶಿತ ಹೋರಾಟವನ್ನು ಹಿಂದಕ್ಕೆ ಪಡೆದುಕೊಂಡಿರುವುದಾಗಿ ಹೋರಾಟಗಾರ ಶಿವಾನಂದ ವಾಲಿ ತಿಳಿಸಿದ್ದು ಆದಷ್ಟು ಬೇಗ ರೈತ ಜಮೀನುಗಳಿಗೆ ನೀರು ಹರಿಯಬೇಕು.ಜಮೀನು ಕಳೆದುಕೊಂಡವರಿಗೆ ಪರಿಹಾರ ದೊರೆಯಬೇಕು ಎಂದು DCG NEWSಗೆ ತಿಳಿಸಿದ್ದಾರೆ.

ಪ್ರಮುಖರಾದ ಮುರುಗಯ್ಯ ಕಂಠಿಮಠ, ಪ.ಪಂ ಸದಸ್ಯರಾದ ಪ್ರಥ್ವಿರಾಜ ನಾಡಗೌಡ, ಮುಖಂಡ ಗುರು ದೇಶಮುಖ, ಗುತ್ತಿಗೆದಾರ ರಾಯನಗೌಡ ತಾತರಡ್ಡಿ, ಪ.ಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಇಲಕಲ್, ಉಪಾಧ್ಯಕ್ಷ ಬಸವರಾಜ ಗಂಗನಗೌಡ್ರ, ಸಿಒ ಈರಣ್ಣ ಕೊಣ್ಣೂರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ವಾಯ್.ಎಚ್.ವಿಜಯಕರ್, ಲಲಿತಾ ಗೋರಬಾಳ, ರಾಜಬಿ ನಾಡದಾಳ, ಯಮನಪ್ಪ ಬಂಡಿವಡ್ಡರ, ಕೆಬಿಜೆಎನ್‌ಎಲ್ ಎಇ ಅಮರೇಗೌಡ, ಮುತ್ತು ಗೋರಬಾಳ,ಎಇ ಅಬೂಬಕರ್ ಬಾಗವಾನ, ಸುನಿಲಕುಮಾರ , ಮಹಾಂತೇಶ ಗಂಗನಗೌಡ್ರ , ಉಮರ್ ಮೂಲಿಮನಿ, ಬಾಬು ಕ್ಷತ್ರಿ, ಅಮರಪ್ಪ ಸೀರಿ, ಅಲ್ಲಾಭಕ್ಷ ಮೂಲಿಮನಿ ಇದ್ದರು.

Latest News

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾವು ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ತಮ್ಮ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲೂಕಾ ದಸ್ತು ಬರಹಗಾರರ ಸಂಘದ ನೂತನ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಮುದ್ದೇಬಿಹಾಳ : ತಾಲ್ಲೂಕು ಪಂಚಾಯಿತಿಗೆ ಸೇರಿದ ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪುರಸಭೆ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ಮುದ್ದೇಬಿಹಾಳ : ಗ್ರಾಮದ ದೇವತೆ ಜಾತ್ರೆಯ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಗುಗ್ಗಳ ಬಸವೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಆ.12 ರಂದು ನಡೆಸಲು ಊರಿನ ದೈವದವರು ನಿರ್ಣಯ ಕೈಗೊಂಡಿದ್ದಾರೆ. ಪಟ್ಟಣದ ಕುಂಬಾರ ಓಣಿಯಲ್ಲಿರುವ ಗ್ರಾಮದೇವತೆ ದೇವಸ್ಥಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಕುರಿತ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಯಿತು. ವೇ.ಆಯ್.ಬಿ.ಹಿರೇಮಠ ಮಾತನಾಡಿ, ಆ.12 ರಂದು ದೇವರನ್ನು ಗಂಗಸ್ಥಳಕ್ಕೆ ಕರೆದೊಯ್ಯುವುದು,9ಕ್ಕೆ ಪಿಲೇಕೆಮ್ಮ ದೇವಸ್ಥಾನದಿಂದ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಮಾದರಿ ಎಸ್.ಸಿ.ಎಸ್.ಟಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಿತ್ಯವೂ ವಿದ್ಯಾರ್ಥಿಗಳ ಓಡಾಟಕ್ಕೆ ನಗರ ಸಾರಿಗೆ ಬಸ್‌ನ್ನು ಮಂಗಳವಾರದಿಂದ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್ ತಿಳಿಸಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜಿಗೆ ಸುಮಾರು 1.50 ಕಿ.ಮೀ ದೂರವಿದ್ದು ವಿದ್ಯಾರ್ಥಿಗಳು, ಉಪನ್ಯಾಸಕರ ಓಡಾಟಕ್ಕೆ ಸಮಸ್ಯೆಯಾಗಿದ್ದನ್ನು ಸಾರಿಗೆ ಘಟಕದ ಅಧಿಕಾರಿಗಳ ಗಮನಕ್ಕೆ ತಂದಾಗ ಕೂಡಲೇ ನಗರ ಸಾರಿಗೆ ಬಸ್ ಆರಂಭಕ್ಕೆ ಕ್ರಮ ಕೈಗೊಂಡಿದ್ದಾರೆ ಎಂದು