33.57 ಲಕ್ಷ ವೆಚ್ಚದ ಕಾಲುವೆ ಬಾಕಿ ಕಾಮಗಾರಿಗೆ ಭೂಮಿ ಪೂಜೆ: ಬೂದಿಹಾಳ-ಪೀರಾಪೂರ,ನಾಗರಬೆಟ್ಟ ಏತನೀರಾವರಿ ಯೋಜನೆ ಶೀಘ್ರ ಲೋಕಾರ್ಪಣೆ

33.57 ಲಕ್ಷ ವೆಚ್ಚದ ಕಾಲುವೆ ಬಾಕಿ ಕಾಮಗಾರಿಗೆ ಭೂಮಿ ಪೂಜೆ: ಬೂದಿಹಾಳ-ಪೀರಾಪೂರ,ನಾಗರಬೆಟ್ಟ ಏತನೀರಾವರಿ ಯೋಜನೆ ಶೀಘ್ರ ಲೋಕಾರ್ಪಣೆ

ಮುದ್ದೇಬಿಹಾಳ : ಈ ಭಾಗದಲ್ಲಿ ಪ್ರಗತಿಯಲ್ಲಿರುವ ಬೂದಿಹಾಳ-ಪೀರಾಪೂರ ಹಾಗೂ ನಾಗರಬೆಟ್ಟ ಏತ ನೀರಾವರಿ ಯೋಜನೆಗಳನ್ನು ಶೀಘ್ರವೇ ದಿನಾಂಕ ನಿಗದಿ ಮಾಡಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಕೆಎಸ್‌ಡಿ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

ತಾಲ್ಲೂಕಿನ ನಾಲತವಾಡದ ಸಮೀಪದಲ್ಲಿರುವ ಅಮರೇಶ್ವರ ದೇವಸ್ಥಾನದ ಬಳಿ ಸ್ಥಗಿತಗೊಂಡಿದ್ದ ಚಿಮ್ಮಲಗಿ ಏತ ನೀರಾವರಿ ಪೂರ್ವ ಕಾಲುವೆಯ ಬಾಕಿ ಕಾಮಗಾರಿಗೆ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಗುರುವಾರ ಭೂಮಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸುಮಾರು ವರ್ಷಗಳಿಂದಲೂ ನನೆಗುದಿಗೆ ಬಿದ್ದಿದ್ದ ಚಿಮ್ಮಲಗಿ ಏತ ನೀರಾವರಿ ಪೂರ್ವ ಕಾಲುವೆಯ ಕಿಮೀ 19.600 ರ ರಸ್ತೆಗೆ ಅಡ್ಡಲಾಗಿ ನಿರ್ಮಿಸುವ ಕಾಲುವೆ 33.57 ಲಕ್ಷ ಮೊತ್ತದ ಸೇತುವೆಗೆ ಚಾಲನೆ ನೀಡಲಾಗಿದೆ. ಸದ್ಯ ಚಾಲನೆ ನೀಡಲಾದ ಸೇತುವೆ ಕಾಮಗಾರಿಗೆ ಪ್ಯಾಕೇಜ್ ಕಾಮಗಾರಿಯಲ್ಲಿ ಸೇರಿಸಲಾಗಿತ್ತು. ಮನಬಂದAತೆ ಯಾರಿಗೂ ಗುತ್ತಿಗೆ ಕೊಡಬಾರದು ಎನ್ನುವ ಉದ್ದೇಶದಿಂದ ವಿಳಂಬವಾಯಿತು. ಸಿಂಗಲ್ ಗುತ್ತಿಗೆ ಅವೈಜ್ಞಾನಿಕವಾಗಿತ್ತು. ಪ್ಯಾಕೇಜ್‌ಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಕಾಮಗಾರಿ ವಿಳಂಬವಾಯಿತು ಎಂದರು.

ರೈತರ ಅಡೆತಡೆ ಮತ್ತು ಗುತ್ತಿಗೆಯ ತಾಂತ್ರಿಕ ದೋಷದ ಪರಿಣಾಮ ಹಲವು ಬಾರಿ ಕಾಮಗಾರಿ ವಿಳಂಬವಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ಈಗ ಕೆಲಸ ಶುರು ಮಾಡಲಾಗುತ್ತದೆ ಎಂದರು.ನಮ್ಮ ಭಾಗದ ನಾಗರಬೆಟ್ಟ ಹಾಗೂ ಬೂದಿಹಾಳ ಪೀರಾಪೂರ ಏತ ನೀರಾವರಿ ಯೋಜನೆಯೂ ಸಹ ಬಹುತೇಕ ಪೂರ್ಣಗೊಂಡಿದ್ದು ಸಿಎಂ ಹಾಗೂ ಡಿಸಿಎಂ ಅವರೊಂದಿಗೆ ಚರ್ಚಿಸಿ ದಿನಾಂಕ ನಿಗದಿ ಮಾಡಲಾಗುವುದು ಎಂದರು.

—-

ಆಮರಣ ಉಪವಾಸ ಸತ್ಯಾಗ್ರಹ ಹಿಂದಕ್ಕೆ : ಹಲವಾರು ವರ್ಷ ನನೆಗುದಿಗೆ ಬಿದ್ದಿದ್ದ ಕಾಲುವೆ ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಆಗ್ರಹಿಸಿ ಯುವ ಜನ ಸೇನೆಯ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ನೇತೃತ್ವದಲ್ಲಿ ನ.18 ರಿಂದ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ದರು.ಈ ಹಿಂದೆಯೂ ಮೂರು ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿ ಅಧಿಕಾರಿಗಳು, ಸರ್ಕಾರದ ಗಮನಕ್ಕೆ ತಂದಿದ್ದರು.ಇದಕ್ಕೆ ಸ್ಪಂದಿಸಿರುವ ಶಾಸಕ ಅಪ್ಪಾಜಿ ನಾಡಗೌಡ ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳೊಂದಿಗೆ ಮಾತನಾಡಿ ಕಾಮಗಾರಿ ಆರಂಭಕ್ಕೆ ಭೂಮಿ ಪೂಜೆ ನಡೆಸುವ ಮೂಲಕ ಹೋರಾಟಗಾರರಿಗೆ ಸ್ಪಂದಿಸಿದ್ದಾರೆ.ಹೋರಾಟಕ್ಕೆ ಅಧಿಕಾರಿಗಳು, ಸರ್ಕಾರ, ಶಾಸಕರು ಸ್ಪಂದಿಸಿರುವ ಹಿನ್ನೆಲೆಯಲ್ಲಿ ಉದ್ದೇಶಿತ ಹೋರಾಟವನ್ನು ಹಿಂದಕ್ಕೆ ಪಡೆದುಕೊಂಡಿರುವುದಾಗಿ ಹೋರಾಟಗಾರ ಶಿವಾನಂದ ವಾಲಿ ತಿಳಿಸಿದ್ದು ಆದಷ್ಟು ಬೇಗ ರೈತ ಜಮೀನುಗಳಿಗೆ ನೀರು ಹರಿಯಬೇಕು.ಜಮೀನು ಕಳೆದುಕೊಂಡವರಿಗೆ ಪರಿಹಾರ ದೊರೆಯಬೇಕು ಎಂದು DCG NEWSಗೆ ತಿಳಿಸಿದ್ದಾರೆ.

ಪ್ರಮುಖರಾದ ಮುರುಗಯ್ಯ ಕಂಠಿಮಠ, ಪ.ಪಂ ಸದಸ್ಯರಾದ ಪ್ರಥ್ವಿರಾಜ ನಾಡಗೌಡ, ಮುಖಂಡ ಗುರು ದೇಶಮುಖ, ಗುತ್ತಿಗೆದಾರ ರಾಯನಗೌಡ ತಾತರಡ್ಡಿ, ಪ.ಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಇಲಕಲ್, ಉಪಾಧ್ಯಕ್ಷ ಬಸವರಾಜ ಗಂಗನಗೌಡ್ರ, ಸಿಒ ಈರಣ್ಣ ಕೊಣ್ಣೂರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ವಾಯ್.ಎಚ್.ವಿಜಯಕರ್, ಲಲಿತಾ ಗೋರಬಾಳ, ರಾಜಬಿ ನಾಡದಾಳ, ಯಮನಪ್ಪ ಬಂಡಿವಡ್ಡರ, ಕೆಬಿಜೆಎನ್‌ಎಲ್ ಎಇ ಅಮರೇಗೌಡ, ಮುತ್ತು ಗೋರಬಾಳ,ಎಇ ಅಬೂಬಕರ್ ಬಾಗವಾನ, ಸುನಿಲಕುಮಾರ , ಮಹಾಂತೇಶ ಗಂಗನಗೌಡ್ರ , ಉಮರ್ ಮೂಲಿಮನಿ, ಬಾಬು ಕ್ಷತ್ರಿ, ಅಮರಪ್ಪ ಸೀರಿ, ಅಲ್ಲಾಭಕ್ಷ ಮೂಲಿಮನಿ ಇದ್ದರು.

Latest News

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ತಾಲ್ಲೂಕು ಬರಪೀಡಿತ ಎಂದು ಘೋಷಣೆಗೆ ಸ್ಥಳ ಪರಿಶೀಲನೆಗೆ ಆದೇಶ ಮಾಡಿದ್ದಾರೆ.ಅಧಿಕೃತವಾಗಿ ಬರಪೀಡಿತ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಶನಿವಾರ ಕರೆ ನೀಡಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟದ ಭಾಗವಾಗಿ ಆರನೇ ದಿನದ ಪ್ರತಿಭಟನೆಯನ್ನು ಮುದ್ದೇಬಿಹಾಳ ಬಂದ್ ಕರೆ ನೀಡುವ ಮೂಲಕ ಮುಂದುವರೆಸಲಾಗಿತ್ತು.ಬoದ್‌ಗೆ ವ್ಯಾಪಾರಸ್ಥರು,ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮುದ್ದೇಬಿಹಾಳ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಎಲ್ಲ ಅಂಗಡಿ

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ.ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಿವಾನಂದ ಪಿ. ಹೇಳಿದರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶುಕ್ರವಾರ ನಡೆದ ಸಿಡ್ಬಿ ಸಮೃದ್ಧಿ