ಬೈಕ್‌ಗೆ ಡಿಕ್ಕಿಯಾಗಿ ಕಾರಿಗೆ ಸಿಲುಕಿದ ಶವವನ್ನು 1 ಕಿ.ಮೀ ಎಳೆದೊಯ್ದ ಭೂಪ!

ಬೈಕ್‌ಗೆ ಡಿಕ್ಕಿಯಾಗಿ ಕಾರಿಗೆ ಸಿಲುಕಿದ ಶವವನ್ನು 1 ಕಿ.ಮೀ ಎಳೆದೊಯ್ದ ಭೂಪ!

ವಿಜಯಪುರ: ಬೈಕ್‌ ಸವಾರನಿಗೆ ರಭಸವಾಗಿ ಡಿಕ್ಕಿ ಹೊಡೆದ ಕಾರು ಚಾಲಕನೊಬ್ಬ ಕಾರಿನ ಬೋನಟ್‌ನಲ್ಲಿ ಸಿಕ್ಕಿಕೊಂಡ ಬೈಕ್ ಸವಾರನ ಮೃತದೇಹವನ್ನು 1 ಕಿ.ಮೀ.ಗೂ ಅಧಿಕ ದೂರು ಎಳೆದೊಯ್ದ ದುರ್ಘಟನೆ ನಗರದ ಮನಗೂಳಿ ಅಗಸಿ ಬಳಿ ಗುರುವಾರ ನಡೆದಿದೆ.

ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ನಿವಾಸಿ, ವಕೀಲ ರವಿ ಮೇಲಿನಮನಿ ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ.

ವಿಜಯಪುರದ ಬಸವನಗರದಲ್ಲಿ ಬೈಕ್ ಮೇಲೆ ಪ್ರಯಾಣಿಸುತ್ತಿದ್ದ ರವಿಗೆ ವೇಗವಾಗಿ ಬಂದ ಇನೋವಾ ಕಾರು ಡಿಕ್ಕಿ ಹೊಡೆದಿದ್ದು, ರಭಸಕ್ಕೆ ರವಿಯ ಶವ ಕಾರಿನಡಿ ಸಿಲುಕಿದೆ. ರಸ್ತೆಯಲ್ಲಿದ್ದ ಜನರು ಕೂಗಿದರೂ ಕಾರು ನಿಲ್ಲಿಸಿದರೆ ಸುಮಾರು 1 ಕಿಲೋ ಮೀಟರ್‌ಗೂ ಅಧಿಕ ಮೃತದೇಹವನ್ನು ಎಳೆದೊಯ್ದು ಕಾರು ಚಾಲಕವಿಕೃತಿ ಮೆರೆದಿದ್ದಾನೆ.

ಇದನ್ನು ಓದಿ: Mudhol: ಸ್ವಾತಂತ್ರ್ಯ ಹೋರಾಟಗಾರ ಜಡಗಣ್ಣ-ಬಾಲಣ್ಣ ಮೂರ್ತಿ ಪ್ರತಿಷ್ಠಾಪನೆ

ದೂರದವರೆಗೆ ಹೋಗಿ ಶವವನ್ನು ಬಿಟ್ಟು ಕಾರಿನೊಂದಿಗೆ ಪರಾರಿಯಾಗಿದ್ದಾನೆ. ಕಾರಿಗೆ ಯಾವುದೇ ನಂಬರ್‌ಪ್ಲೇಟ್ ಮತ್ತು ಟಿಂಟೆಡ್ ಗ್ಲಾಸ್ ಇರಲಿಲ್ಲ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು