Guarantee schemes CM Siddaramaiah guarantee for guarantee schemes

BIG BREAKING: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರು

BIG BREAKING: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರು

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್‌ ಗೆಹೋಟ್ ಅಬರು ಗ್ರೀನ್ ಸಿಗ್ನಲ್‌ ನೀಡಿದ್ದಾರೆ.

Join Our Telegram: https://t.me/dcgkannada

ಈ ಕುರಿತಾದ ಆದೇಶವನ್ನು ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ. ಇದರಿಂದ ರಾಜ್ಯ ಸರ್ಕಾರ ಇಕ್ಕಟಿಗೆ ಸಿಲುಕಿದ್ದು, ಮುಂದಿನ ನಡೆಯ ಕುರಿತು ಚರ್ಚಿಸಲು ಸಚಿವರ ದಂಡು ಸಿದ್ದರಾಮಯ್ಯ‌ ಮನೆಗೆ ಆಗಮಿಸುತ್ತಿದ್ದಾರೆ.

ಇದನ್ನೂ ಓದಿ: Cubbon park: ವೃದ್ಧನಿಂದ ಹೀನ ಕೃತ್ಯ.. ಕಬ್ಬನ್ ಪಾರ್ಕ್‌ ನಲ್ಲಿ ಮಹಿಳೆಯರ ಎದುರೇ ಹಸ್ತಮೈಥುನ.. (ವೈರಲ್ ವಿಡಿಯೋ ನೋಡಿ)

ರಾಜ್ಯಪಾಲರ ಆದೇಶ ಪ್ರಶ್ನಿಸಿ ಕಾನೂನು ಹೋರಾಟ ಮಾಡುವ ಆಯ್ಕೆ ಸಿದ್ದರಾಮಯ್ಯ‌ ಮತ್ತು ತಂಡದ ಎದುರು ಇದೆ.

ಮುಡಾ ಹಗರಣ.. ಸಿಎಂ ಪರ ಅರ್ಜಿ ವಜಾಗೊಳಿಸಿ ಆ.21ಕ್ಕೆ ವಿಚಾರಣೆ ಮುಂದೂಡಿದ್ದ ಕೋರ್ಟ್

ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಆರೋಪ ಕುರಿತಾದಂತೆ ಪ್ರಕರಣದ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 21ಕ್ಕೆ ಮುಂದೂಡಿತ್ತು. ಈಗ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ.

ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಹಾಗೂ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ನಡೆಸಲಾಯಿತು.

ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪದ ಸಂಬಂಧ ಸ್ನೇಹಮಯಿ ಕೃಷ್ಣ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಆಗಸ್ಟ್ 20ರಂದು ವಿಚಾರಣೆಗೆ ಸ್ವೀಕರಿಸುವುದಾಗಿ ತಿಳಿಸಿ, ಆಗಸ್ಟ್ 21ಕ್ಕೆ ವಿಚಾರಣೆಯನ್ನು ಮುಂದೂಡಿತ್ತು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪರವಾಗಿ ಸಲ್ಲಿಕೆಯಾಗಿದ್ದ ಮಧ್ಯಂತರ ಅರ್ಜಿಯನ್ನು ಕೋರ್ಟ್ ವಜಾಗೊಳಿದ್ದು, ಸಿಎಂ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ.

ಹೌದು, ಸಿಎಂ ಸಿದ್ದರಾಮಯ್ಯ‌ ವಿರುದ್ಧ ಸ್ನೇಹಮಯಿ ಕೃಷ್ಣ ಎನ್ನುವವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಏತ್ಮಮಧ್ಯೆ, ಆಲಂ ಪಾಷಾ ಪ್ರಾಸಿಕ್ಯೂಷನ್ ಅನುಮತಿ ಇಲ್ಲದೆ ಸಿಎಂ ವಿರುದ್ಧ ಪ್ರಕರಣವನ್ನೇ ಸ್ವೀಕರಿಸಬಾರದು ಎಂದು ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಸಿಎಂ ಪರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಕೋರ್ಟ್ ಆದೇಶವನ್ನು ನೀಡಿದೆ. ಅಲ್ಲದೆ, ವಿಚಾರಣೆಯ ವೇಳೆ ಆಲಂ ಪಾಷಾ ಎನ್ನುವವರು ಪ್ರಾಜಸಿಕ್ಯೂಷನ್ ಗೆ ಅನುಮತಿ ಇಲ್ಲದೆ, ಸಿಎಂ ಕೇಸ್ ಸ್ವೀಕರಿಸದಂತೆ ಅರ್ಜಿಯನ್ನು ಯಾವ ಕಾನೂನಿನ ಅಡಿ ಅರ್ಜಿ ಸಲ್ಲಿಸಿದ್ದೀರಾ ಎಂದು ಮಧ್ಯಂತರ ಅರ್ಜಿದಾರರಿಗೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಪ್ರಶ್ನಿಸಿದ್ದಾರೆ. ಈ ವೇಳೆ ಸಾರ್ವಜನಿಕ ಹಿತಾಸಕ್ತಿಯಿಂದ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು.

ಆಲಂ ಪಾಷಾ ಅವರ ಈ ವಾದಕ್ಕೆ ಜಡ್ಜ್ ಸಂತೋಷ ಗಜಾನನ ಭಟ್ ಅಸಮಾಧಾನ ವ್ಯಕ್ತಪಡಿಸಿದರು. ಅರ್ಜಿದಾರ ಆಲಂಪಾಷ ದೂರು ದಾಖಲಿಸಲು ಅನುಮತಿ ಕೇಳುತ್ತಿಲ್ಲ. ಬದಲಿಗೆ ಕಾನೂನಿನ ಪ್ರಕ್ರಿಯೆನ್ನೇ ತಡೆಹಿಡಿಯಲು ಕೇಳುತ್ತಿದ್ದಾರೆ. ಹೀಗಾಗಿ, ಆಲಂಪಾಷ ಅರ್ಜಿ ವಜಾ ಗೊಳಿಸಲು ಅರ್ಹ ಎಂದು ಕೋರ್ಟ್ ಆದೇಶ ಹೊರಡಿಸಿದೆ.

ಈ ವೇಳೆ ಆಲಂ ಪಾಷ ವಾದಕ್ಕೆ ಸ್ನೇಹಮಯಿ ಕೃಷ್ಣ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ಸಂಬಂಧವಿಲ್ಲದ ವ್ಯಕ್ತಿಯ ವಾದ ಆಲಿಸಬಾರದು. ಕೋರ್ಟ್ ಸಮಯ ವ್ಯರ್ಥ ಮಾಡಿರುವುದಕ್ಕೆ ದಂಡ ವಿಧಿಸಬೇಕು ಎಂದು ದೂರುದಾರರ ಸ್ನೇಹಮಹಿನ ಕೃಷ್ಣ ಪರ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿದರು.

ವಿಚಾರಣೆ ಸಂದರ್ಭದಲ್ಲಿದಲ್ಲಿ ಪಿಸಿಆರ್ ಅಂದರೆ ಪಬ್ಲಿಕ್ ಕಂಟ್ರೋಲ್ ರೂಂ ಎಂದು ಆಲಂಪಾಷ ಹೇಳಿದಾಗ, ಪಿ ಸಿ ಆರ್ ಎಂದರೇನು ಎಂದು ತಿಳಿಯದೆ ಅರ್ಜಿ ಸಲ್ಲಿಸಿದ್ದೀರಾ? ಕೋರ್ಟ್ನಲ್ಲಿ ತಮಾಷೆ ಮಾಡುತ್ತಿದ್ದೀರಾ ಎಂದು ಜಡ್ಜ್ ತರಾಟೆಗೆ ತೆಗೆದುಕೊಂಡಿದರು. ಅಲ್ಲದೆ, ನೀವು ಸಂತ್ರಸ್ತರಾ? ಅಥವಾ ದೂರುದಾರರಾ? ಸ್ಪಷ್ಟಪಡಿಸಿ ಎಂದು ಜಡ್ಜ್ ಗರಂ ಆಗಿ ಸೂಚಿಸಿದರು.

Latest News

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಮುದ್ದೇಬಿಹಾಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತೆರಳುವ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಹಿಂದೂ ಮುಸ್ಲಿಂ ಬಾಂಧವರ ಮಧ್ಯೆ ಸೌಹಾರ್ದತೆಯನ್ನು ಬೆಸೆಯುವ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಡಿಸಿಎಂ ಡಿ.ಕೆ.ಶಿವಕುಮಾರ ಅವರದ್ದು ಪ್ರಧಾನ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:                   ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ: ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ಮುದ್ದೇಬಿಹಾಳ : ಮಕ್ಕಳಿಗೆ ಬಾಲ್ಯದಲ್ಲಿ ಗುರುಕುಲ ಮಾದರಿ ಶಿಕ್ಷಣದಿಂದ ಸಂಸ್ಕಾರ,ಸAಸ್ಕೃತಿಯ ಅರಿವು ದೊರೆಯುತ್ತದೆ ಎಂದು

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳನ್ನು ರಾಷ್ಟ್ರೀಯ ಮೀನುಗಾರರ ಸಂಘ ಸ್ವಾಗತಿಸುತ್ತದೆ ಎಂದು ಸಂಘದ ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ. ಗೌತಮ್ ಚೌಧರಿ ತಿಳಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೀನುಗಾರರಿಗೆ ನೀಡುವ ಕಿಟ್ ದರವನ್ನು ₹10,000 ದಿಂದ ₹20,000ಕ್ಕೆ ಹೆಚ್ಚಿಸಿರುವುದು, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ 'ಸೆಂಟರ್ ಆಫ್ ಎಕ್ಸಲೆನ್ಸ್' ಸ್ಥಾಪನೆ, ಹಾಗೂ ಹೊಸ 'ಮತ್ಸ್ಯದರ್ಶಿನಿ'ಗಳು ಮತ್ತು ಸುಸಜ್ಜಿತ ಮೀನು ಮಾರುಕಟ್ಟೆಗಳನ್ನು ನಿರ್ಮಿಸುತ್ತಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸದಿದ್ದರೆ ಮಾ.11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘದ ತಾಲ್ಲೂಕು ಪದಾಧಿಕಾರಿಗಳು ಶಾಸಕ ಸಿ.ಎಸ್.ನಾಡಗೌಡ ಹಾಗೂ ತಹಶೀಲ್ದಾರ್ ಅವರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು. ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಇಲಾಖೆಯಿಂದ ಔಷಧಿ