Picture of mohan bhagavath

ಪ್ರಧಾನಿ ಮೋದಿಗೆ BIG SHOCK!

ಪ್ರಧಾನಿ ಮೋದಿಗೆ BIG SHOCK!

ಪುಣೆ: ನಾವು ದೇವರಾಗಬೇಕೋ ಅಥವಾ ಬೇಡವೋ ಎಂಬುದನ್ನು ಜನರು ನಿರ್ಧರಿಸು ತ್ತಾರೆ. ನಾವು ದೇವರಾಗಿದ್ದೇವೆ ಎಂದು ಘೋಷಿಸಬಾರದು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ ಭಾಗವತ್ ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಪ್ರಧಾನಿ ನರೇಂದ್ರ ಮೋದಿ ಲೋಕಸಭೆ ಚುನಾವಣೆ ವೇಳೆ ‘ನಾನು ಜೈವಿಕವಾಗಿ ಜನಿಸಿದಂತೆ ಭಾಸವಾಗುತ್ತಿಲ್ಲ. ನನ್ನನ್ನು ಭಗವಂತನೇ ಕಳಿಸಿದ್ದಾನೆ ಎಂಬಂತೆ ಭಾಸವಾಗುತ್ತಿದೆ’ ಎಂಬ ಹೇಳಿಕೆ ನೀಡಿದ್ದರು. ಇದಕ್ಕೆ ಸಂಬಂಧಿಸಿ ಜು.19ರಂದೂ ಭಾಗವತ್, ‘ಒಬ್ಬ ವ್ಯಕ್ತಿಯು ‘ಸೂಪರ್‌ಮ್ಯಾನ್’ ಆಗಲುಬಯಸಬಹುದು. ನಂತರ ‘ದೇವತೆ’ ಮತ್ತು ‘ಭಗವಾನ್’ ಮತ್ತು ‘ವಿಶ್ವರೂಪ’ ಆಗಲು ಹಾತೊರೆಯಬಹುದು. ಆದರೆ ಮುಂದೆ ಏನಾಗುತ್ತದೆ ಎಂಬ ಅರಿವು ಯಾರಿಗೂ ಇರಲ್ಲ’ ಎಂದು ಹೇಳಿದ್ದರು. ಇದಾದ ನಂತರ ಭಾಗವತ್ ಅವರು ಅಂಥದ್ದೇ ಹೇಳಿಕೆ ನೀಡುತ್ತಿರುವುದು 2ನೇ ಬಾರಿ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್, ‘ಮೋದಿ ಹಾಗೂ ಆರೆಸ್ಸೆಸ್ ಸಂಬಂಧ ಲೋಕ ಸಭೆ ಚುನಾವಣೆ ನಂತರ ಹಾಳಾಗುತ್ತಿರುವ ಸಂಕೇತ ಇದು’ ಎಂದಿದ್ದಾರೆ.

ಭಾಗವತ್ ಹೇಳಿದ್ದೇನು?:

ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗುರುವಾರ ರಾತ್ರಿ ಮಾತನಾಡಿದ ಭಾಗವತ್, ‘ಕೆಲವರು ಶಾಂತವಾಗಿರುವುದಕ್ಕಿಂತ ಮಿಂಚಿನಂತೆ ಹೊಳೆಯಬೇಕು ಎಂದು ಭಾವಿಸುತ್ತಾರೆ. ಆದರೆ మింబు ಹಾಗೂ ಗುಡುಗು-ಸಿಡಿಲಿನ ಬಳಿಕ ಮೊದಲಿಗಿಂತ ಹೆಚ್ಚುಕತ್ತಲೆಯಾದಂತೆಕಾಣುತ್ತದೆ. ಆದ್ದರಿಂದ, ಕಾರ್ಯಕರ್ತರು ದೀಪದಂತೆ ಉರಿಯಬೇಕು ಮತ್ತು ಅಗತ್ಯವಿದ್ದಾಗ ಹೊಳೆಯಬೇಕು’ ಎಂದು ಮಾರ್ಮಿಕವಾಗಿ ನುಡಿದರು.

ಇದನ್ನೂ ಓದಿ: Viral video: ರೀಲ್ಸ್ ಗಾಗಿ ನಾಗರ ಹಾವನ್ನೇ ಕಚ್ಚಿ ನಿಂತ ಯುವಕ! ಆಮೇಲ್ ಆಗಿದ್ದು ದೊಡ್ದುಡ ದುರಂತ! (ವೈರಲ್ ವಿಡಿಯೋ ನೋಡಿ)

‘ನಾವು ನಮ್ಮ ಜೀವನದಲ್ಲಿ ಸಾಧ್ಯವಾದಷ್ಟು ಒಳ್ಳೆಯ ಕೆಲಸವನ್ನು ಮಾಡಲು ಪ್ರಯತ್ನಿಸಬೇಕು. ನಾವು ಹೊಳೆಯಬಾರದು ಅಥವಾಎದ್ದುಕಾಣಬಾರದುಎಂದುಯಾರೂ ಹೇಳುತ್ತಿಲ್ಲ. ಕೆಲಸದಮೂಲಕ, ಪ್ರತಿಯೊಬ್ಬರೂ ಪೂಜ್ಯ ವ್ಯಕ್ತಿಯಾಗಬಹುದು. ಆದರೆ ನಾವು ಆ ಮಟ್ಟವನ್ನು ತಲುಪಿದ್ದೇವೆಯೇ ಎಂಬುದನ್ನು ಇತರರು ನಿರ್ಧರಿಸುತ್ತಾರೆ. ನಮ್ಮಷ್ಟಕ್ಕೆ ನಾವೇ ‘ನಾವು ದೇವರಾಗಿದ್ದೇವೆ’ ಎಂದು ಘೋಷಿಕೊಳ್ಳಬಾರದು’ ಎಂದರು.

Latest News

ಶ್ರದ್ಧೆಯಿಂದ ಹಬ್ಬದಾಚರಣೆಗಳಲ್ಲಿ ತೊಡಗಿ-ಪೇಶ ಇಮಾಮ್

ಶ್ರದ್ಧೆಯಿಂದ ಹಬ್ಬದಾಚರಣೆಗಳಲ್ಲಿ ತೊಡಗಿ-ಪೇಶ ಇಮಾಮ್

ಮುದ್ದೇಬಿಹಾಳ : ಯಾರು ರಂಜಾನ್ ಮಾಸದಲ್ಲಿ ಶ್ರದ್ಧೆಯಿಂದ ನಮಾಜ್, ರೋಜಾ, ಕುರಾನ್ ತಿಲಾವತ್ ಹಾಗೂ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಮುದ್ದೇಬಿಹಾಳ : ಬೇಸಿಗೆಯ ಧಗೆಯಲ್ಲಿ ಪ್ರಾಣಿ ಪಕ್ಷಿಗಳು ಕುಡಿಯುವ ನೀರು, ಆಹಾರ ಇಲ್ಲದೇ ಬಹಳ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ತಾಂಡಾ(ವೆಂಕಟೇಶ ನಗರ) ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಬಸು

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ತಮಗೆ ಸಾಷ್ಟಾಂಗ ಹಾಕಿರುವುದಾಗಿ ಸುಳ್ಳು ಹೇಳಿಕೆ ಕೊಡುವುದನ್ನು ಮೊದಲು ಶಾಸಕ ನಾಡಗೌಡರು

ಮಾ.19 ರಿಂದ ಬೈಲಕೂರ ಬೈಲಾದ್ರೇಶ್ವರ ಜಾತ್ರೋತ್ಸವ

ಮಾ.19 ರಿಂದ ಬೈಲಕೂರ ಬೈಲಾದ್ರೇಶ್ವರ ಜಾತ್ರೋತ್ಸವ

ಮುದ್ದೇಬಿಹಾಳ : ತಾಲ್ಲೂಕಿನ ಬೈಲಕೂರ ಗ್ರಾಮದ ಬೈಲಾದ್ರೇಶ್ವರ ಜಾತ್ರಾ ಮಹೋತ್ಸವ ಮಾ.19 ರಿಂದ 21ರವರೆಗೆ ಹಮ್ಮಿಕೊಳ್ಳಲಾಗಿದ್ದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಾ.19 ರಂದು ಬೆಳಗ್ಗೆ 8ಕ್ಕೆ ಮ್ಯಾಟ್ ಮೇಲೆ ಕಬಡ್ಡಿ ಪಂದ್ಯಾವಳಿ,ಮದ್ಯಾಹ್ನ 3ಕ್ಕೆ ಗಡಿಗೆ ಒಡೆಯುವ ಸ್ಪರ್ಧೆ, ರಾತ್ರಿ 9.30ಕ್ಕೆ ಸನ್ಮಾನ ಸಮಾರಂಭ, ರಾತ್ರಿ 10.30ಕ್ಕೆ ಅರುಣೋದಯ ಸಾಂಸ್ಕೃತಿಕ ಜಾನಪದ ನೃತ್ಯ ನಡೆಯಲಿದೆ. ಮಾ.20 ರಂದು ಬೆಳಗ್ಗೆ 10ಕ್ಕೆ ಸಕಲ ವಾದ್ಯ ವೈಭವಗಳೊಂದಿಗೆ ಬೈಲಾದ್ರೇಶ್ವರ ಬೆಳ್ಳಿ ಮೂರ್ತಿ ಹಾಗೂ ಗಂಗಸ್ಥಳಕ್ಕೆ

SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

ಮುದ್ದೇಬಿಹಾಳ : ಪಟ್ಟಣದ ಐದು ಪರೀಕ್ಷಾ ಕೇಂದ್ರಗಳು ಸೇರಿದಂತೆ ಮುದ್ದೇಬಿಹಾಳ,ತಾಳಿಕೋಟಿ,ನಾಗರಬೆಟ್ಟ ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆಗಳು ಅತ್ಯಂತ ಬಿಗಿ ಭದ್ರತೆಯಲ್ಲಿ ಕಟ್ಟುನಿಟ್ಟಾಗಿ ನಡೆದಿರುವುದಾಗಿ ವರದಿಯಾಗಿದೆ. ಪಟ್ಟಣದ ವಿಬಿಸಿ ಪ್ರೌಢಶಾಲೆ,ಜ್ಞಾನ ಭಾರತಿ ವಿದ್ಯಾಮಂದಿರ, ಚಿನ್ಮಯ ಜೆ.ಸಿ.ಆಂಗ್ಲಮಾಧ್ಯಮ ಪ್ರೌಢಶಾಲೆ,ಸ್ವಾಮಿ ವಿವೇಕಾನಂದ ಪ್ರೌಢಶಾಲೆ ಶಿರೋಳ,ಅಭ್ಯುದಯ ಆಂಗ್ಲಮಾಧ್ಯಮ ಪ್ರೌಢಶಾಲೆ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಭಾಗದ ಪರೀಕ್ಷಾ ಕೇಂದ್ರಗಳಲ್ಲೂ ಯಾವುದೇ ಗೊಂದಲವಿಲ್ಲದೇ ಕಟ್ಟುನಿಟ್ಟಾಗಿ ಪರೀಕ್ಷೆಗಳು ನಡೆದಿವೆ ಎಂದು ಎಸ್.ಎಸ್.ಎಲ್.ಸಿ ಪರೀಕ್ಷೆಯ ಅಧ್ಯಕ್ಷರು,ತಹಶೀಲ್ದಾರ್ ಕೀರ್ತಿ ಚಾಲಕ ತಿಳಿಸಿದರು.