Picture of mohan bhagavath

ಪ್ರಧಾನಿ ಮೋದಿಗೆ BIG SHOCK!

ಪ್ರಧಾನಿ ಮೋದಿಗೆ BIG SHOCK!

ಪುಣೆ: ನಾವು ದೇವರಾಗಬೇಕೋ ಅಥವಾ ಬೇಡವೋ ಎಂಬುದನ್ನು ಜನರು ನಿರ್ಧರಿಸು ತ್ತಾರೆ. ನಾವು ದೇವರಾಗಿದ್ದೇವೆ ಎಂದು ಘೋಷಿಸಬಾರದು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ ಭಾಗವತ್ ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಪ್ರಧಾನಿ ನರೇಂದ್ರ ಮೋದಿ ಲೋಕಸಭೆ ಚುನಾವಣೆ ವೇಳೆ ‘ನಾನು ಜೈವಿಕವಾಗಿ ಜನಿಸಿದಂತೆ ಭಾಸವಾಗುತ್ತಿಲ್ಲ. ನನ್ನನ್ನು ಭಗವಂತನೇ ಕಳಿಸಿದ್ದಾನೆ ಎಂಬಂತೆ ಭಾಸವಾಗುತ್ತಿದೆ’ ಎಂಬ ಹೇಳಿಕೆ ನೀಡಿದ್ದರು. ಇದಕ್ಕೆ ಸಂಬಂಧಿಸಿ ಜು.19ರಂದೂ ಭಾಗವತ್, ‘ಒಬ್ಬ ವ್ಯಕ್ತಿಯು ‘ಸೂಪರ್‌ಮ್ಯಾನ್’ ಆಗಲುಬಯಸಬಹುದು. ನಂತರ ‘ದೇವತೆ’ ಮತ್ತು ‘ಭಗವಾನ್’ ಮತ್ತು ‘ವಿಶ್ವರೂಪ’ ಆಗಲು ಹಾತೊರೆಯಬಹುದು. ಆದರೆ ಮುಂದೆ ಏನಾಗುತ್ತದೆ ಎಂಬ ಅರಿವು ಯಾರಿಗೂ ಇರಲ್ಲ’ ಎಂದು ಹೇಳಿದ್ದರು. ಇದಾದ ನಂತರ ಭಾಗವತ್ ಅವರು ಅಂಥದ್ದೇ ಹೇಳಿಕೆ ನೀಡುತ್ತಿರುವುದು 2ನೇ ಬಾರಿ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್, ‘ಮೋದಿ ಹಾಗೂ ಆರೆಸ್ಸೆಸ್ ಸಂಬಂಧ ಲೋಕ ಸಭೆ ಚುನಾವಣೆ ನಂತರ ಹಾಳಾಗುತ್ತಿರುವ ಸಂಕೇತ ಇದು’ ಎಂದಿದ್ದಾರೆ.

ಭಾಗವತ್ ಹೇಳಿದ್ದೇನು?:

ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗುರುವಾರ ರಾತ್ರಿ ಮಾತನಾಡಿದ ಭಾಗವತ್, ‘ಕೆಲವರು ಶಾಂತವಾಗಿರುವುದಕ್ಕಿಂತ ಮಿಂಚಿನಂತೆ ಹೊಳೆಯಬೇಕು ಎಂದು ಭಾವಿಸುತ್ತಾರೆ. ಆದರೆ మింబు ಹಾಗೂ ಗುಡುಗು-ಸಿಡಿಲಿನ ಬಳಿಕ ಮೊದಲಿಗಿಂತ ಹೆಚ್ಚುಕತ್ತಲೆಯಾದಂತೆಕಾಣುತ್ತದೆ. ಆದ್ದರಿಂದ, ಕಾರ್ಯಕರ್ತರು ದೀಪದಂತೆ ಉರಿಯಬೇಕು ಮತ್ತು ಅಗತ್ಯವಿದ್ದಾಗ ಹೊಳೆಯಬೇಕು’ ಎಂದು ಮಾರ್ಮಿಕವಾಗಿ ನುಡಿದರು.

ಇದನ್ನೂ ಓದಿ: Viral video: ರೀಲ್ಸ್ ಗಾಗಿ ನಾಗರ ಹಾವನ್ನೇ ಕಚ್ಚಿ ನಿಂತ ಯುವಕ! ಆಮೇಲ್ ಆಗಿದ್ದು ದೊಡ್ದುಡ ದುರಂತ! (ವೈರಲ್ ವಿಡಿಯೋ ನೋಡಿ)

‘ನಾವು ನಮ್ಮ ಜೀವನದಲ್ಲಿ ಸಾಧ್ಯವಾದಷ್ಟು ಒಳ್ಳೆಯ ಕೆಲಸವನ್ನು ಮಾಡಲು ಪ್ರಯತ್ನಿಸಬೇಕು. ನಾವು ಹೊಳೆಯಬಾರದು ಅಥವಾಎದ್ದುಕಾಣಬಾರದುಎಂದುಯಾರೂ ಹೇಳುತ್ತಿಲ್ಲ. ಕೆಲಸದಮೂಲಕ, ಪ್ರತಿಯೊಬ್ಬರೂ ಪೂಜ್ಯ ವ್ಯಕ್ತಿಯಾಗಬಹುದು. ಆದರೆ ನಾವು ಆ ಮಟ್ಟವನ್ನು ತಲುಪಿದ್ದೇವೆಯೇ ಎಂಬುದನ್ನು ಇತರರು ನಿರ್ಧರಿಸುತ್ತಾರೆ. ನಮ್ಮಷ್ಟಕ್ಕೆ ನಾವೇ ‘ನಾವು ದೇವರಾಗಿದ್ದೇವೆ’ ಎಂದು ಘೋಷಿಕೊಳ್ಳಬಾರದು’ ಎಂದರು.

Latest News

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮುದ್ದೇಬಿಹಾಳ : ಹೆತ್ತ ತಂದೆ ತಾಯಿಗೆ, ಬೆಳೆಸಿದ ಗುರುವಿಗೆ ಹೆಸರು ತರುವುದು ಅವರ ಉಸಿರು

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಏ.4ರಂದು ಆಕ್ಸಫರ್ಡ್

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಮುದ್ದೇಬಿಹಾಳ : ವಿಜಯಪುರ ಜಿಲ್ಲೆಯಲ್ಲಿ ಏ.10 ರಿಂದ 14ರವರೆಗೆ ಮೇ ಸಾಹಿತ್ಯ ಮೇಳ ಬಳಗದ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಮುದ್ದೇಬಿಹಾಳ : ಮುದ್ದೇಬಿಹಾಳ ಮೂಲದ ಉಪನ್ಯಾಸಕಿ ಗುರುದೇವಿ ಹಳ್ಳೂರ ಅವರು ಶಿಕ್ಷಣಶಾಸ್ತçದಲ್ಲಿ ವಿಜಯಪುರದ ಕರ್ನಾಟಕ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ಬಡವರ ಮಕ್ಕಳ ಶೈಕ್ಷಣಿಕ ಭವಿಷ್ಯ ಕಟ್ಟುತ್ತಿರುವ ಖಾಸಗಿ ಶಾಲೆಗಳನ್ನು ಬೆಂಬಲಿಸುವ ಕಾರ್ಯ ಸಮಾಜ,ಸಂಘಟನೆಗಳು ಮಾಡಬೇಕು ಎಂದು ಸಮಾಜ ಸೇವಕ,ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ವಿದ್ಯಾಸ್ಪೂರ್ತಿ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಾಚೀನ ಕಾಲದ ಗುರುಕುಲ ಪದ್ಧತಿಯಲ್ಲಿ ಖಾಸಗಿ ಶಾಲೆಗಳು ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ವಸತಿ ಕಲ್ಪಿಸಿ ಶಿಕ್ಷಣ ಕೊಡುವ ಕಾರ್ಯ ಮಾಡುತ್ತಿವೆ.ನೌಕರರ ಮಕ್ಕಳು,ಸ್ಥಿತಿವಂತರ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮುದ್ದೇಬಿಹಾಳ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರುವುದನ್ನು ಕೈಬಿಡಬೇಕು. ಮಕ್ಕಳನ್ನು ಕೇವಲ ಅಂಕ ತುಂಬುವ ಚೀಲವನ್ನಾಗಿ ಮಾಡುವ ಮನೋಭಾವದಿಂದ ಹೊರಬಂದು, ಅವರಲ್ಲಿ ಜ್ಞಾನ ಮತ್ತು ಸಾಧನೆಯ ಹಸಿವನ್ನು ಬೆಳೆಸಬೇಕು ಎಂದು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ ಹೇಳಿದರು. ಪಟ್ಟಣದ ತಂಗಡಗಿ ರಸ್ತೆಯ ಶಿವಾಚಾರ್ಯ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಭಾನುವಾರ ಸ್ವಾಮಿ ವಿವೇಕಾನಂದ ಇಂಟರ್ನ್ಯಾಷನಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ