Picture of mohan bhagavath

ಪ್ರಧಾನಿ ಮೋದಿಗೆ BIG SHOCK!

ಪ್ರಧಾನಿ ಮೋದಿಗೆ BIG SHOCK!

ಪುಣೆ: ನಾವು ದೇವರಾಗಬೇಕೋ ಅಥವಾ ಬೇಡವೋ ಎಂಬುದನ್ನು ಜನರು ನಿರ್ಧರಿಸು ತ್ತಾರೆ. ನಾವು ದೇವರಾಗಿದ್ದೇವೆ ಎಂದು ಘೋಷಿಸಬಾರದು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ ಭಾಗವತ್ ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಪ್ರಧಾನಿ ನರೇಂದ್ರ ಮೋದಿ ಲೋಕಸಭೆ ಚುನಾವಣೆ ವೇಳೆ ‘ನಾನು ಜೈವಿಕವಾಗಿ ಜನಿಸಿದಂತೆ ಭಾಸವಾಗುತ್ತಿಲ್ಲ. ನನ್ನನ್ನು ಭಗವಂತನೇ ಕಳಿಸಿದ್ದಾನೆ ಎಂಬಂತೆ ಭಾಸವಾಗುತ್ತಿದೆ’ ಎಂಬ ಹೇಳಿಕೆ ನೀಡಿದ್ದರು. ಇದಕ್ಕೆ ಸಂಬಂಧಿಸಿ ಜು.19ರಂದೂ ಭಾಗವತ್, ‘ಒಬ್ಬ ವ್ಯಕ್ತಿಯು ‘ಸೂಪರ್‌ಮ್ಯಾನ್’ ಆಗಲುಬಯಸಬಹುದು. ನಂತರ ‘ದೇವತೆ’ ಮತ್ತು ‘ಭಗವಾನ್’ ಮತ್ತು ‘ವಿಶ್ವರೂಪ’ ಆಗಲು ಹಾತೊರೆಯಬಹುದು. ಆದರೆ ಮುಂದೆ ಏನಾಗುತ್ತದೆ ಎಂಬ ಅರಿವು ಯಾರಿಗೂ ಇರಲ್ಲ’ ಎಂದು ಹೇಳಿದ್ದರು. ಇದಾದ ನಂತರ ಭಾಗವತ್ ಅವರು ಅಂಥದ್ದೇ ಹೇಳಿಕೆ ನೀಡುತ್ತಿರುವುದು 2ನೇ ಬಾರಿ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್, ‘ಮೋದಿ ಹಾಗೂ ಆರೆಸ್ಸೆಸ್ ಸಂಬಂಧ ಲೋಕ ಸಭೆ ಚುನಾವಣೆ ನಂತರ ಹಾಳಾಗುತ್ತಿರುವ ಸಂಕೇತ ಇದು’ ಎಂದಿದ್ದಾರೆ.

ಭಾಗವತ್ ಹೇಳಿದ್ದೇನು?:

ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗುರುವಾರ ರಾತ್ರಿ ಮಾತನಾಡಿದ ಭಾಗವತ್, ‘ಕೆಲವರು ಶಾಂತವಾಗಿರುವುದಕ್ಕಿಂತ ಮಿಂಚಿನಂತೆ ಹೊಳೆಯಬೇಕು ಎಂದು ಭಾವಿಸುತ್ತಾರೆ. ಆದರೆ మింబు ಹಾಗೂ ಗುಡುಗು-ಸಿಡಿಲಿನ ಬಳಿಕ ಮೊದಲಿಗಿಂತ ಹೆಚ್ಚುಕತ್ತಲೆಯಾದಂತೆಕಾಣುತ್ತದೆ. ಆದ್ದರಿಂದ, ಕಾರ್ಯಕರ್ತರು ದೀಪದಂತೆ ಉರಿಯಬೇಕು ಮತ್ತು ಅಗತ್ಯವಿದ್ದಾಗ ಹೊಳೆಯಬೇಕು’ ಎಂದು ಮಾರ್ಮಿಕವಾಗಿ ನುಡಿದರು.

ಇದನ್ನೂ ಓದಿ: Viral video: ರೀಲ್ಸ್ ಗಾಗಿ ನಾಗರ ಹಾವನ್ನೇ ಕಚ್ಚಿ ನಿಂತ ಯುವಕ! ಆಮೇಲ್ ಆಗಿದ್ದು ದೊಡ್ದುಡ ದುರಂತ! (ವೈರಲ್ ವಿಡಿಯೋ ನೋಡಿ)

‘ನಾವು ನಮ್ಮ ಜೀವನದಲ್ಲಿ ಸಾಧ್ಯವಾದಷ್ಟು ಒಳ್ಳೆಯ ಕೆಲಸವನ್ನು ಮಾಡಲು ಪ್ರಯತ್ನಿಸಬೇಕು. ನಾವು ಹೊಳೆಯಬಾರದು ಅಥವಾಎದ್ದುಕಾಣಬಾರದುಎಂದುಯಾರೂ ಹೇಳುತ್ತಿಲ್ಲ. ಕೆಲಸದಮೂಲಕ, ಪ್ರತಿಯೊಬ್ಬರೂ ಪೂಜ್ಯ ವ್ಯಕ್ತಿಯಾಗಬಹುದು. ಆದರೆ ನಾವು ಆ ಮಟ್ಟವನ್ನು ತಲುಪಿದ್ದೇವೆಯೇ ಎಂಬುದನ್ನು ಇತರರು ನಿರ್ಧರಿಸುತ್ತಾರೆ. ನಮ್ಮಷ್ಟಕ್ಕೆ ನಾವೇ ‘ನಾವು ದೇವರಾಗಿದ್ದೇವೆ’ ಎಂದು ಘೋಷಿಕೊಳ್ಳಬಾರದು’ ಎಂದರು.

Latest News

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಮುದ್ದೇಬಿಹಾಳ : ಸಾರ್ವಜನಿಕರಿಗೆ ನಮ್ಮಿಂದ ಸಾಧ್ಯವಷ್ಟರ ಮಟ್ಟಿಗೆ ಉತ್ತಮ ಸೇವೆ ನೀಡಲು ಶ್ರಮಿಸುತ್ತೇವೆ.ಕೆಲವು ಸಂದರ್ಭಗಳಲ್ಲಿ

ಟೆಂಪೋ ಟ್ರಾವೆಲ್ಸ್-ಕಾರು ಮುಖಾಮುಖಿ ಡಿಕ್ಕಿ:                  ಓರ್ವ ಮಹಿಳೆ ಸ್ಥಳದಲ್ಲೇ ಸಾವು,ನಾಲ್ವರಿಗೆ ಗಾಯ

ಟೆಂಪೋ ಟ್ರಾವೆಲ್ಸ್-ಕಾರು ಮುಖಾಮುಖಿ ಡಿಕ್ಕಿ: ಓರ್ವ ಮಹಿಳೆ ಸ್ಥಳದಲ್ಲೇ ಸಾವು,ನಾಲ್ವರಿಗೆ ಗಾಯ

ಮುದ್ದೇಬಿಹಾಳ : ಟೆಂಪೋ ಟ್ರಾವೆಲ್ಸ್ ಹಾಗೂ ಕಾರು ಮಧ್ಯೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಹೊಡೆದು

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ಮುದ್ದೇಬಿಹಾಳ : ನಗರದ ಎಂಜಿವಿಸಿ ಕಾಲೇಜಿನ ವಿಶೇಷಚೇತನ ವಿದ್ಯಾರ್ಥಿ ವಿನಾಯಕ ಸಿದ್ದಪ್ಪ ಪೂಜಾರಿರಾಷ್ಟ್ರೀಯ ಹಿರಿಯ

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ಮುದ್ದೇಬಿಹಾಳ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಹತ್ತು ವರ್ಷದ ಬಾಲಕನೋರ್ವನ ಕಣ್ಣುಗಳನ್ನು ದಾನ ಮಾಡುವ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಮುದ್ದೇಬಿಹಾಳ : ಬೇಸಿಗೆಯ ಧಗೆಯಲ್ಲಿ ಪ್ರಾಣಿ ಪಕ್ಷಿಗಳು ಕುಡಿಯುವ ನೀರು, ಆಹಾರ ಇಲ್ಲದೇ ಬಹಳ ಸಂಕಷ್ಟ ಎದುರಿಸುತ್ತವೆ. ನಾಗರಿಕರು ಇದನ್ನು ಅರಿತು ತಮ್ಮ ಮನೆಯ ಮುಂದೆ ಕಾಂಪೌOಡ್, ಮಾಳಿಗೆಯ ಮೇಲೆ, ಗಿಡಗಳಲ್ಲಿ ನೀರಿನ ಸೌಲಭ್ಯ ಕಲ್ಪಿಸುವ ಮಾನವೀಯ ಕೆಲಸ ಮಾಡಬೇಕೆಂದು ಸಮಾಜ ಸೇವಕ ಬಸನಗೌಡ ಪಾಟೀಲ ಸರೂರ ಮನವಿ ಮಾಡಿದರು. ಪಟ್ಟಣದ ಹಸಿರು ತೋರಣ ಉದ್ಯಾನವನದಲ್ಲಿ ಶುಕ್ರವಾರ ವಿಶ್ವ ಗುಬ್ಬಚ್ಚಿ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಜನರು ತಮ್ಮ ಮದುವೆ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ತಾಂಡಾ(ವೆಂಕಟೇಶ ನಗರ) ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಬಸು ದೇವರ ಜಾತ್ರಾ ಮಹೋತ್ಸವದಲ್ಲಿ ನೂತನವಾಗಿ ಕರ್ನಾಟಕ ಸರಕಾರದ ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಸ್ಥಳೀಯ ನಿವಾಸಿ ಡಾ. ಮೋತಿಲಾಲ ರೂಪಲಪ್ಪ ಚವ್ಹಾಣ ಅವರನ್ನು ಜಾತ್ರಾ ಕಮೀಟಿ ಹಾಗೂ ತಾಂಡಾದ ಹಿರಿಯರು ರಾಜಕೀಯ ಮುಖಂಡರ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ. ಮೋತಿಲಾಲ