Picture of mohan bhagavath

ಪ್ರಧಾನಿ ಮೋದಿಗೆ BIG SHOCK!

ಪ್ರಧಾನಿ ಮೋದಿಗೆ BIG SHOCK!

ಪುಣೆ: ನಾವು ದೇವರಾಗಬೇಕೋ ಅಥವಾ ಬೇಡವೋ ಎಂಬುದನ್ನು ಜನರು ನಿರ್ಧರಿಸು ತ್ತಾರೆ. ನಾವು ದೇವರಾಗಿದ್ದೇವೆ ಎಂದು ಘೋಷಿಸಬಾರದು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ ಭಾಗವತ್ ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಪ್ರಧಾನಿ ನರೇಂದ್ರ ಮೋದಿ ಲೋಕಸಭೆ ಚುನಾವಣೆ ವೇಳೆ ‘ನಾನು ಜೈವಿಕವಾಗಿ ಜನಿಸಿದಂತೆ ಭಾಸವಾಗುತ್ತಿಲ್ಲ. ನನ್ನನ್ನು ಭಗವಂತನೇ ಕಳಿಸಿದ್ದಾನೆ ಎಂಬಂತೆ ಭಾಸವಾಗುತ್ತಿದೆ’ ಎಂಬ ಹೇಳಿಕೆ ನೀಡಿದ್ದರು. ಇದಕ್ಕೆ ಸಂಬಂಧಿಸಿ ಜು.19ರಂದೂ ಭಾಗವತ್, ‘ಒಬ್ಬ ವ್ಯಕ್ತಿಯು ‘ಸೂಪರ್‌ಮ್ಯಾನ್’ ಆಗಲುಬಯಸಬಹುದು. ನಂತರ ‘ದೇವತೆ’ ಮತ್ತು ‘ಭಗವಾನ್’ ಮತ್ತು ‘ವಿಶ್ವರೂಪ’ ಆಗಲು ಹಾತೊರೆಯಬಹುದು. ಆದರೆ ಮುಂದೆ ಏನಾಗುತ್ತದೆ ಎಂಬ ಅರಿವು ಯಾರಿಗೂ ಇರಲ್ಲ’ ಎಂದು ಹೇಳಿದ್ದರು. ಇದಾದ ನಂತರ ಭಾಗವತ್ ಅವರು ಅಂಥದ್ದೇ ಹೇಳಿಕೆ ನೀಡುತ್ತಿರುವುದು 2ನೇ ಬಾರಿ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್, ‘ಮೋದಿ ಹಾಗೂ ಆರೆಸ್ಸೆಸ್ ಸಂಬಂಧ ಲೋಕ ಸಭೆ ಚುನಾವಣೆ ನಂತರ ಹಾಳಾಗುತ್ತಿರುವ ಸಂಕೇತ ಇದು’ ಎಂದಿದ್ದಾರೆ.

ಭಾಗವತ್ ಹೇಳಿದ್ದೇನು?:

ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗುರುವಾರ ರಾತ್ರಿ ಮಾತನಾಡಿದ ಭಾಗವತ್, ‘ಕೆಲವರು ಶಾಂತವಾಗಿರುವುದಕ್ಕಿಂತ ಮಿಂಚಿನಂತೆ ಹೊಳೆಯಬೇಕು ಎಂದು ಭಾವಿಸುತ್ತಾರೆ. ಆದರೆ మింబు ಹಾಗೂ ಗುಡುಗು-ಸಿಡಿಲಿನ ಬಳಿಕ ಮೊದಲಿಗಿಂತ ಹೆಚ್ಚುಕತ್ತಲೆಯಾದಂತೆಕಾಣುತ್ತದೆ. ಆದ್ದರಿಂದ, ಕಾರ್ಯಕರ್ತರು ದೀಪದಂತೆ ಉರಿಯಬೇಕು ಮತ್ತು ಅಗತ್ಯವಿದ್ದಾಗ ಹೊಳೆಯಬೇಕು’ ಎಂದು ಮಾರ್ಮಿಕವಾಗಿ ನುಡಿದರು.

ಇದನ್ನೂ ಓದಿ: Viral video: ರೀಲ್ಸ್ ಗಾಗಿ ನಾಗರ ಹಾವನ್ನೇ ಕಚ್ಚಿ ನಿಂತ ಯುವಕ! ಆಮೇಲ್ ಆಗಿದ್ದು ದೊಡ್ದುಡ ದುರಂತ! (ವೈರಲ್ ವಿಡಿಯೋ ನೋಡಿ)

‘ನಾವು ನಮ್ಮ ಜೀವನದಲ್ಲಿ ಸಾಧ್ಯವಾದಷ್ಟು ಒಳ್ಳೆಯ ಕೆಲಸವನ್ನು ಮಾಡಲು ಪ್ರಯತ್ನಿಸಬೇಕು. ನಾವು ಹೊಳೆಯಬಾರದು ಅಥವಾಎದ್ದುಕಾಣಬಾರದುಎಂದುಯಾರೂ ಹೇಳುತ್ತಿಲ್ಲ. ಕೆಲಸದಮೂಲಕ, ಪ್ರತಿಯೊಬ್ಬರೂ ಪೂಜ್ಯ ವ್ಯಕ್ತಿಯಾಗಬಹುದು. ಆದರೆ ನಾವು ಆ ಮಟ್ಟವನ್ನು ತಲುಪಿದ್ದೇವೆಯೇ ಎಂಬುದನ್ನು ಇತರರು ನಿರ್ಧರಿಸುತ್ತಾರೆ. ನಮ್ಮಷ್ಟಕ್ಕೆ ನಾವೇ ‘ನಾವು ದೇವರಾಗಿದ್ದೇವೆ’ ಎಂದು ಘೋಷಿಕೊಳ್ಳಬಾರದು’ ಎಂದರು.

Latest News

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ

ಮುದ್ದೇಬಿಹಾಳ : ನೀರಿನ ಹೊಂಡದಲ್ಲಿ ಜಾರಿ ಬಿದ್ದು ಬಾಲಕ ಸಾವು

ಮುದ್ದೇಬಿಹಾಳ : ನೀರಿನ ಹೊಂಡದಲ್ಲಿ ಜಾರಿ ಬಿದ್ದು ಬಾಲಕ ಸಾವು

ಮುದ್ದೇಬಿಹಾಳ : ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ಬಾಲಕನೊಬ್ಬ ಕಾಲು ಜಾರಿ ಹೊಂಡದಲ್ಲಿ ಬಿದ್ದು

ಶಿವಯೋಗಿಮಠ ಕುಟುಂಬದಿoದ ಆಯೋಜನೆ:                  ಮಾ.2 ರಂದು ಆರೋಗ್ಯ ಉಚಿತ  ತಪಾಸಣಾ ಶಿಬಿರ

ಶಿವಯೋಗಿಮಠ ಕುಟುಂಬದಿoದ ಆಯೋಜನೆ: ಮಾ.2 ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ

ಮುದ್ದೇಬಿಹಾಳ : ಶ್ರೀ ಫಕಿರೇಶ್ವರ ವಿವಿದೋದ್ಧೇಶ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಘ ಮತ್ತು ಸೇಂಟ್

ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರಿನಲ್ಲಿ ಎಸ್.ಎನ್.ಡಿ.ನ್ಯಾಶನಲ್ ಪಬ್ಲಿಕ್ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಾ.1 ರಂದು

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹಳ್ಳೂರ ಕ್ರಾಸ್ ನಲ್ಲಿರುವ ಹೊಸನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸಿಂಚನಾ ಶಿವಪುತ್ರಪ್ಪ ಸಜ್ಜನ ಸನ್ 2026-27ನೇ ಸಾಲಿನ ಬೆಳಗಾವಿ ಜಿಲ್ಲೆ ಕಿತ್ತೂರ ರಾಣಿ ಚೆನ್ನಮ್ಮ ಸೈನಿಕ ವಸತಿ ಶಾಲೆಗೆ ಆಯ್ಕೆಯಾಗಿದ್ದಾಳೆ. ಸಿಂಚನಾ , ಬಿದರಕುಂದಿ ಗ್ರಾಮದ ಶಿಕ್ಷಕ ದಂಪತಿಯಾದ ಶಿವಪುತ್ರಪ್ಪ ಸಜ್ಜನ ಹಾಗೂ ಸುಮಲತಾ ಗಡಿಯಪ್ಪನವರ ಅವರ  ಪುತ್ರಿ.ವಿದ್ಯಾರ್ಥಿನಿ ಸಿಂಚನಾ ಸಾಧನೆಗೆ ಬಿದರಕುಂದಿ ಗ್ರಾಮಸ್ಥರು ಅಭಿನಂದಿಸಿದ್ದಾರೆ.

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಮುದ್ದೇಬಿಹಾಳ : ಫಾಸ್ಟ್ ಫುಡ್,ಜಂಕ್ ಫುಡ್‌ನಿಂದ ದೇಹದ ಮೇಲಿನ ದುಷ್ಪರಿಣಾಮ ಬೀರುತ್ತದೆ.ಅಂತಹ ಆಹಾರ ಪದಾರ್ಥಗಳ ಸೇವನೆಯಿಂದ ದೂರ ಇರಬೇಕು ಎಂದು ವಿಬಿಸಿ ಹೈಸ್ಕೂಲ್‌ನ ಮುಖ್ಯಗುರು ವಿ.ಜಿ.ರಾಮಚಂದ್ರಯ್ಯ ಹೇಳಿದರು. ಪಟ್ಟಣದ ಕೆಬಿಎಂಪಿಎಸ್ ಶಾಲೆಯಲ್ಲಿ ಶುಕ್ರವಾರ ರಾಷ್ಟಿçÃಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಾವು ದೈನಂದಿನ ಬದುಕಿನಲ್ಲಿ ಸೇವಿಸುವ ಆಹಾರದಲ್ಲೂ ವಿಜ್ಞಾನ ಅಡಗಿದೆ.ಪ್ರತಿ ವಸ್ತುಗಳಲ್ಲೂ ವೈಜ್ಞಾನಿಕ ಅಂಶಗಳನ್ನು ಒಳಗೊಂಡಿದ್ದು ಯಾವ ಪದಾರ್ಥ ನಮ್ಮ ದೇಹಕ್ಕೆ ಅತ್ಯಂತ ಸೂಕ್ತ ಎಂಬುದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದರು.