Picture of mohan bhagavath

ಪ್ರಧಾನಿ ಮೋದಿಗೆ BIG SHOCK!

ಪ್ರಧಾನಿ ಮೋದಿಗೆ BIG SHOCK!

ಪುಣೆ: ನಾವು ದೇವರಾಗಬೇಕೋ ಅಥವಾ ಬೇಡವೋ ಎಂಬುದನ್ನು ಜನರು ನಿರ್ಧರಿಸು ತ್ತಾರೆ. ನಾವು ದೇವರಾಗಿದ್ದೇವೆ ಎಂದು ಘೋಷಿಸಬಾರದು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ ಭಾಗವತ್ ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಪ್ರಧಾನಿ ನರೇಂದ್ರ ಮೋದಿ ಲೋಕಸಭೆ ಚುನಾವಣೆ ವೇಳೆ ‘ನಾನು ಜೈವಿಕವಾಗಿ ಜನಿಸಿದಂತೆ ಭಾಸವಾಗುತ್ತಿಲ್ಲ. ನನ್ನನ್ನು ಭಗವಂತನೇ ಕಳಿಸಿದ್ದಾನೆ ಎಂಬಂತೆ ಭಾಸವಾಗುತ್ತಿದೆ’ ಎಂಬ ಹೇಳಿಕೆ ನೀಡಿದ್ದರು. ಇದಕ್ಕೆ ಸಂಬಂಧಿಸಿ ಜು.19ರಂದೂ ಭಾಗವತ್, ‘ಒಬ್ಬ ವ್ಯಕ್ತಿಯು ‘ಸೂಪರ್‌ಮ್ಯಾನ್’ ಆಗಲುಬಯಸಬಹುದು. ನಂತರ ‘ದೇವತೆ’ ಮತ್ತು ‘ಭಗವಾನ್’ ಮತ್ತು ‘ವಿಶ್ವರೂಪ’ ಆಗಲು ಹಾತೊರೆಯಬಹುದು. ಆದರೆ ಮುಂದೆ ಏನಾಗುತ್ತದೆ ಎಂಬ ಅರಿವು ಯಾರಿಗೂ ಇರಲ್ಲ’ ಎಂದು ಹೇಳಿದ್ದರು. ಇದಾದ ನಂತರ ಭಾಗವತ್ ಅವರು ಅಂಥದ್ದೇ ಹೇಳಿಕೆ ನೀಡುತ್ತಿರುವುದು 2ನೇ ಬಾರಿ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್, ‘ಮೋದಿ ಹಾಗೂ ಆರೆಸ್ಸೆಸ್ ಸಂಬಂಧ ಲೋಕ ಸಭೆ ಚುನಾವಣೆ ನಂತರ ಹಾಳಾಗುತ್ತಿರುವ ಸಂಕೇತ ಇದು’ ಎಂದಿದ್ದಾರೆ.

ಭಾಗವತ್ ಹೇಳಿದ್ದೇನು?:

ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗುರುವಾರ ರಾತ್ರಿ ಮಾತನಾಡಿದ ಭಾಗವತ್, ‘ಕೆಲವರು ಶಾಂತವಾಗಿರುವುದಕ್ಕಿಂತ ಮಿಂಚಿನಂತೆ ಹೊಳೆಯಬೇಕು ಎಂದು ಭಾವಿಸುತ್ತಾರೆ. ಆದರೆ మింబు ಹಾಗೂ ಗುಡುಗು-ಸಿಡಿಲಿನ ಬಳಿಕ ಮೊದಲಿಗಿಂತ ಹೆಚ್ಚುಕತ್ತಲೆಯಾದಂತೆಕಾಣುತ್ತದೆ. ಆದ್ದರಿಂದ, ಕಾರ್ಯಕರ್ತರು ದೀಪದಂತೆ ಉರಿಯಬೇಕು ಮತ್ತು ಅಗತ್ಯವಿದ್ದಾಗ ಹೊಳೆಯಬೇಕು’ ಎಂದು ಮಾರ್ಮಿಕವಾಗಿ ನುಡಿದರು.

ಇದನ್ನೂ ಓದಿ: Viral video: ರೀಲ್ಸ್ ಗಾಗಿ ನಾಗರ ಹಾವನ್ನೇ ಕಚ್ಚಿ ನಿಂತ ಯುವಕ! ಆಮೇಲ್ ಆಗಿದ್ದು ದೊಡ್ದುಡ ದುರಂತ! (ವೈರಲ್ ವಿಡಿಯೋ ನೋಡಿ)

‘ನಾವು ನಮ್ಮ ಜೀವನದಲ್ಲಿ ಸಾಧ್ಯವಾದಷ್ಟು ಒಳ್ಳೆಯ ಕೆಲಸವನ್ನು ಮಾಡಲು ಪ್ರಯತ್ನಿಸಬೇಕು. ನಾವು ಹೊಳೆಯಬಾರದು ಅಥವಾಎದ್ದುಕಾಣಬಾರದುಎಂದುಯಾರೂ ಹೇಳುತ್ತಿಲ್ಲ. ಕೆಲಸದಮೂಲಕ, ಪ್ರತಿಯೊಬ್ಬರೂ ಪೂಜ್ಯ ವ್ಯಕ್ತಿಯಾಗಬಹುದು. ಆದರೆ ನಾವು ಆ ಮಟ್ಟವನ್ನು ತಲುಪಿದ್ದೇವೆಯೇ ಎಂಬುದನ್ನು ಇತರರು ನಿರ್ಧರಿಸುತ್ತಾರೆ. ನಮ್ಮಷ್ಟಕ್ಕೆ ನಾವೇ ‘ನಾವು ದೇವರಾಗಿದ್ದೇವೆ’ ಎಂದು ಘೋಷಿಕೊಳ್ಳಬಾರದು’ ಎಂದರು.

Latest News

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮೇ.29 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಜಮಖಂಡಿ: ತಾಳಿ ಕಟ್ಟಿದ ಹದಿನೈದು ನಿಮಿಷದಲ್ಲಿ ವರ ಸಾವನಪ್ಪಿರುವ ಘಟನೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳ : ಪಟ್ಟಣದಲ್ಲಿ ಗುರುವಾರ ಬೆಳಗ್ಗೆ ಭರ್ಜರಿ ಮಳೆ ಸುರಿಯಿತು. ಒಂದು ತಾಸಿಗೂ ಹೆಚ್ಚು

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಮುದ್ದೇಬಿಹಾಳ : ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಮುದ್ದೇಬಿಹಾಳ ಪಟ್ಟಣದಲ್ಲಿ ಮೇ.30 ರಿಂದ ಆರಂಭಗೊಳ್ಳಲಿರುವ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸಲು ತಾಲ್ಲೂಕು ಆಡಳಿತ ಸಂಪೂರ್ಣ ತೊಡಗಿಸಿಕೊಳ್ಳುವ ಮೂಲಕ ಸಹಕಾರ ನೀಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದ ದಾಸೋಹ ಭವನದಲ್ಲಿ ಮಂಗಳವಾರ ಗ್ರಾಮದೇವತೆ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಇದು ಸಾರ್ವತ್ರಿಕವಾಗಿ ಎಲ್ಲ ಧರ್ಮೀಯರು ಸೇರಿಕೊಂಡು ಮಾಡುವ ಜಾತ್ರೆಯಾಗಿದ್ದು ಸರ್ಕಾರ ಎಂದರೆ ಸಾರ್ವಜನಿಕರು, ಸಾರ್ವಜನಿಕರೆಂದರೆ ಸರ್ಕಾರ

ಸಿಡಿಲು ಬಡಿದು ರೈತ ಸಾವು

ಸಿಡಿಲು ಬಡಿದು ರೈತ ಸಾವು

ಮುದ್ದೇಬಿಹಾಳ : ಸಿಡಿಲು ಬಡಿದು ರೈತನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ರೈತ ಮಲ್ಲಪ್ಪ ಗುರುಶಾಂತಪ್ಪ ತಾಳಿಕೋಟಿ(47) ಹೊಲಕ್ಕೆ ಹೋದಾಗ ಈ ದುರ್ಘಟನೆ ಸಂಭವಿಸಿದೆ. ಹೊಲದಲ್ಲಿದ್ದ ಹುಣಸೆ ಮರದ ಕೆಳಗಡೆ ಆಶ್ರಯ ಪಡೆದುಕೊಂಡಾಗ ಸಿಡಿಲು ಬಡಿದು ರೈತ ಸ್ಥಳದಲ್ಲೇ ಅಸುನೀಗಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ, ನೇಬಗೇರಿ, ಗೆದ್ದಲಮರಿ, ಶಿರೋಳ, ಮುದ್ನಾಳ, ಮುದ್ದೇಬಿಹಾಳ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಾರೀ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಆರಂಭವಾದ ಮಳೆ ಅರ್ಧ ಗಂಟೆಗೂ