Big victory for Congress.. Another embarrassment for BJP

ಕಾಂಗ್ರೆಸ್ ದಿಗ್ವಿಜಯ.. BJPಗೆ ಮತ್ತೊಮ್ಮೆ ಮುಖಭಂಗ

ಕಾಂಗ್ರೆಸ್ ದಿಗ್ವಿಜಯ.. BJPಗೆ ಮತ್ತೊಮ್ಮೆ ಮುಖಭಂಗ

ಹುನಗುಂದ: ಇಳಕಲ್ ನಗರಸಭೆ, ಹುನಗುಂದ ಪಿಎಲ್ಡಿ ಬ್ಯಾಂಕ್ ಸೋಲಿನಿಂದ ಕಂಗೆಟ್ಟಿರುವ ಬಿಜೆಪಿಗೆ ಮತ್ತೊಂದು ಸೋಲಿಸಿ ರುಚಿ ತೋರಿಸುವಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಯಶಸ್ಸು ಕಂಡಿದ್ದಾರೆ.

ಹೌದು, ಹುನಗುಂದ ಪುರಸಭೆಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಭಾಗ್ಯಶ್ರೀ ಬಸವರಾಜ ರೇವಡಿ ಹಾಗೂ ಉಪಾಧ್ಯಕ್ಷರಾಗಿ ರಾಜವ್ವ ಹನಮಪ್ಪ ಬಾದಾಮಿ ಮಂಗಳವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿಯೂ ಆದ ತಹಸೀಲ್ದಾರ ನಿಂಗಪ್ಪ ಬಿರಾದಾರ ಹೇಳಿದರು.

Join Our Telegram: https://t.me/dcgkannada

ಪುರುಸಭೆಯ ಒಟ್ಟು 23 ಸದಸ್ಯರ ಬಲವುಳ್ಳ ಕಾಂಗ್ರೆಸ್ ನಿಂದ ಅಧ್ಯಕ್ಷ ಸ್ಥಾನಕ್ಕೆ ಭಾಗ್ಯಶ್ರೀ ರೇವಡಿ ಅವರು ಸ್ಪರ್ಧಿಸಿ ಕಾಂಗ್ರೆಸ್ 12 ಮತಗಳೊಂದಿಗೆ ಬಿಜೆಪಿಯ ಒಬ್ಬರು ಜೆಡಿಎಸ್ ನ ಇಬ್ಬರು ಸದಸ್ಯರು ಹಾಗೂ ಶಾಸಕರ ಒಂದು ಮತವು ಸೇರಿದಂತೆ ಒಟ್ಟು 16 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ ಪ್ರತಿಸ್ಪರ್ಧಿ ಬಿಜೆಪಿಯ ಬಸವ್ವ ಬಸಪ್ಪ ಚಿತ್ತಾವಾಡಗಿ ೮ ಮತಗಳನ್ನ ಪಡೆದು ಪರಭವಗೊಂಡಿದ್ದಾರೆ.

ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಲ್ಲಿ ಪರಿಶಿಷ್ಟ ಜಾತಿ ಮಹಿಳೆ ಇಲ್ಲದಿರುವುದರಿಂದ ಕಾಂಗ್ರೆಸ್ ನಿಂದ ಒಬ್ಬರೇ ನಾಮಪತ್ರ ಸಲ್ಲಿಸಿದ ರಾಜವ್ವ ಹನುಮಪ್ಪ ಬಾದಾಮಿ ಅವಿರೋಧವಾಗಿ ಆಯ್ಕೆಯಾದರು.

ನಂತರ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜೊತೆಗೆ ಪುರಸಭೆಯಲ್ಲಿ ಕಾಂಗ್ರೆಸ್ ಅಧಿಕಾರ ಪಡೆದಿರುವುದರಿಂದ ಪಟ್ಟಣದ ಮೂಲ ಸೌಕರ್ಯ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನವನ್ನು ಸರ್ಕಾರದಿಂದ ತಂದು ಸುಂದರವಾದ ಮಾದರಿಯ ಹುನಗುಂದ ಪಟ್ಟಣವನ್ನು ಮಾಡಲು ಸಂಕಲ್ಪ ಮಾಡುತ್ತೇನೆ. ಅಮೃತ ಯೋಜನೆ ಅಡಿಯಲ್ಲಿ ಹುನಗುಂದ ಪಟ್ಟಣಕ್ಕೆ 24×7 ಕುಡಿಯುವ ನೀರಿನ ಯೋಜನೆಯ, 18 ಕೋಟಿ ವೆಚ್ಚದಲ್ಲಿ ಒಳಚರಂಡಿ ಯೋಜನೆ ಅನುಮೋದನೆ ಆಗಿದ್ದು, ರಸ್ತೆ, ಕುಡಿಯುವ ನೀರು ಮೂಲಭೂತ ಸೌಲಭ್ಯೆಗಳಿಗೆ ನಗೋರೋತ್ಥಾನ ಯೋಜನೆಯ ೪ನೇ ಹಂತದಲ್ಲಿ ಕಾಮಗಾರಿ ಆರಂಭವಾಗಿವೆ.

ಬಡವರಿಗೆ ಪುರಸಭೆಯ 24 ಎಕರೆಯಲ್ಲಿ ಗುರುತಿಸಿ 941 ನಿವೇಶನ ಹಕ್ಕು ಪತ್ರಗಳನ್ನು ವಿತರಿಸಲಾಗಿದೆ. ಸರ್ಕಾರದಿಂದ 500 ಮನೆ ನಿರ್ಮಾಣಕ್ಕೆ ಮಂಜುರಾತಿಯನ್ನು ನೀಡಿದ್ದು ಕೇವಲ 6 ತಿಂಗಳಲ್ಲಿ ಎಲ್ಲ ಬಡವರಿಗೆ ನಿರ್ಮಿಸಿ ಕೊಡಲಾಗುವುದು. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಪಟ್ಟಣದ ಜವಾಬ್ದಾರಿಯಿಂದ ಎಲ್ಲ ಸದಸ್ಯರ ವಿಶ್ವಾಸಕ್ಕೆ ತೆಗೆದಕೊಂಡು ಉತ್ತಮ ಆಡಳಿತವನ್ನು ನಡೆಸಬೇಕೆಂದು ಎಂದು ತಿಳಿಸಿದರು.

ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಯ ನಂತರ ಹರ್ಷಗೊಂಡ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಸಿಹಿ ತಿನ್ನಿಸಿ ಗುಲಾಲು ಎರಚಿ, ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ದೊಡಮನಿ, ಮಾಜಿ ಅಧ್ಯಕ್ಷ ಶರಣು ಬೆಲ್ಲದ, ಪರವೇಜ್ ಖಾಜಿ ಉಪಾಧಕ್ಷರಾದ ಗುರುಬಾಯಿ ಹೂಗಾರ, ಶಾಂತಾ ಮೇಲಿನಮನಿ, ಸದಸ್ಯರಾದ ಮಹಮ್ಮದ ದೋಟಿಹಾಳ, ಬಸವರಾಜ ಗೋಣ್ಣಗರ, ಮೈನು ಧನ್ನೂರ, ಚಂದ್ರು ತಳವಾರ, ಯಲ್ಲಪ್ಪ ನಡುವಿನಮನಿ, ಕಮಲವ್ವ ಸಂದಿಮನಿ, ಶರಣಮ್ಮ ಮುಕ್ಕಣ್ಣವರ, ಖೈರುನಬಿ ನಾಯಕ, ಸಂಗಣ್ಣ ಗಂಜೀಹಾಳ, ಮುತ್ತಣ್ಣ ಕಲಗೋಡಿ, ಸುರೇಶ ಹಳಪೇಟಿ, ಗಂಗಣ್ಣ ಇಲಕಲ್ಲ, ರವಿ ಹುಚನೂರ, ಅಮರೇಶ ನಾಗೂರ, ಮೆಹಬೂಬ ಸರಕಾವಸ, ಜಬ್ಬಾರ ಕಲಬುರ್ಗಿ, ವಿಶ್ವನಾಥ ಬ್ಯಾಳಿ, ದೇವು ಡಂಬಳ,ಮಲ್ಲಣ್ಣ ಹೂಗಾರ, ಮುತ್ತು ಲೋಕಾಪೂರ, ಮಲ್ಲಣ್ಣ ಅಠರದಾನಿ ಸೇರಿದಂತೆ ಇತರರು ಇದ್ದರು.

ಇದನ್ನೂ ಓದಿ: ಟಗರಿನ ಕಾಳಗಕ್ಕೆ ವೇದಿಕೆ ಸಜ್ಜು.. “ಯಾರಿವಳ‌ ಗಂಡ” ನಾಟಕ ಉದ್ಘಾಟನೆಗೆ ಶಾಸಕ ಕಾಶಪ್ಪನವರ ಆದಾಪೂರಕ್ಕೆ ಬರ್ತಿದ್ದಾರೆ.. ಮುಂದುವರಿಯುತ್ತಾ ವಾಗ್ವಾದ..?

ಪೊಲೀಸ್ ಬಂದೋಬಸ್ತ್ ನಲ್ಲಿ ಮತದಾನ:

ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಹುನಗುಂದ ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ ನೇತೃತ್ವದಲ್ಲಿ ಸಿಪಿಐ ಸುನೀಲ ಸವದಿ, ಪಿಎಸ್‌ಐಗಳಾದ ಚನ್ನಯ್ಯ ದೇವೂರ, ಎಸ್.ಆರ್.ನಾಯಕ ಅವರು ಪೋಲಿಸ್ ಬಾರಿ ಬೀಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಪುರಸಭೆಯ ಎರಡು ರಸ್ತೆಗಳಿಗೆ ಬ್ಯಾರಿಕೇಟ್ ಅಳವಡಿಸಿ ಹೆಚ್ಚಿನ ಪೋಲಿಸ್ ಸಿಬ್ಬಂದಿಗಳು ನೇಮಿಸಿ ಚುನಾವಣೆಗೆ ಸಂಬಂಧಿಸಿದ ಸಿಬ್ಬಂದಿಗಳನ್ನು ಮಾತ್ರ ಪುರಸಭೆ ಒಳಗಡೆಗೆ ಅವಕಾಶ ನೀಡಿದ್ದರು.

Latest News

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ