Big victory for Congress.. Another embarrassment for BJP

ಕಾಂಗ್ರೆಸ್ ದಿಗ್ವಿಜಯ.. BJPಗೆ ಮತ್ತೊಮ್ಮೆ ಮುಖಭಂಗ

ಕಾಂಗ್ರೆಸ್ ದಿಗ್ವಿಜಯ.. BJPಗೆ ಮತ್ತೊಮ್ಮೆ ಮುಖಭಂಗ

ಹುನಗುಂದ: ಇಳಕಲ್ ನಗರಸಭೆ, ಹುನಗುಂದ ಪಿಎಲ್ಡಿ ಬ್ಯಾಂಕ್ ಸೋಲಿನಿಂದ ಕಂಗೆಟ್ಟಿರುವ ಬಿಜೆಪಿಗೆ ಮತ್ತೊಂದು ಸೋಲಿಸಿ ರುಚಿ ತೋರಿಸುವಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಯಶಸ್ಸು ಕಂಡಿದ್ದಾರೆ.

ಹೌದು, ಹುನಗುಂದ ಪುರಸಭೆಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಭಾಗ್ಯಶ್ರೀ ಬಸವರಾಜ ರೇವಡಿ ಹಾಗೂ ಉಪಾಧ್ಯಕ್ಷರಾಗಿ ರಾಜವ್ವ ಹನಮಪ್ಪ ಬಾದಾಮಿ ಮಂಗಳವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿಯೂ ಆದ ತಹಸೀಲ್ದಾರ ನಿಂಗಪ್ಪ ಬಿರಾದಾರ ಹೇಳಿದರು.

Join Our Telegram: https://t.me/dcgkannada

ಪುರುಸಭೆಯ ಒಟ್ಟು 23 ಸದಸ್ಯರ ಬಲವುಳ್ಳ ಕಾಂಗ್ರೆಸ್ ನಿಂದ ಅಧ್ಯಕ್ಷ ಸ್ಥಾನಕ್ಕೆ ಭಾಗ್ಯಶ್ರೀ ರೇವಡಿ ಅವರು ಸ್ಪರ್ಧಿಸಿ ಕಾಂಗ್ರೆಸ್ 12 ಮತಗಳೊಂದಿಗೆ ಬಿಜೆಪಿಯ ಒಬ್ಬರು ಜೆಡಿಎಸ್ ನ ಇಬ್ಬರು ಸದಸ್ಯರು ಹಾಗೂ ಶಾಸಕರ ಒಂದು ಮತವು ಸೇರಿದಂತೆ ಒಟ್ಟು 16 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ ಪ್ರತಿಸ್ಪರ್ಧಿ ಬಿಜೆಪಿಯ ಬಸವ್ವ ಬಸಪ್ಪ ಚಿತ್ತಾವಾಡಗಿ ೮ ಮತಗಳನ್ನ ಪಡೆದು ಪರಭವಗೊಂಡಿದ್ದಾರೆ.

ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಲ್ಲಿ ಪರಿಶಿಷ್ಟ ಜಾತಿ ಮಹಿಳೆ ಇಲ್ಲದಿರುವುದರಿಂದ ಕಾಂಗ್ರೆಸ್ ನಿಂದ ಒಬ್ಬರೇ ನಾಮಪತ್ರ ಸಲ್ಲಿಸಿದ ರಾಜವ್ವ ಹನುಮಪ್ಪ ಬಾದಾಮಿ ಅವಿರೋಧವಾಗಿ ಆಯ್ಕೆಯಾದರು.

ನಂತರ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜೊತೆಗೆ ಪುರಸಭೆಯಲ್ಲಿ ಕಾಂಗ್ರೆಸ್ ಅಧಿಕಾರ ಪಡೆದಿರುವುದರಿಂದ ಪಟ್ಟಣದ ಮೂಲ ಸೌಕರ್ಯ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನವನ್ನು ಸರ್ಕಾರದಿಂದ ತಂದು ಸುಂದರವಾದ ಮಾದರಿಯ ಹುನಗುಂದ ಪಟ್ಟಣವನ್ನು ಮಾಡಲು ಸಂಕಲ್ಪ ಮಾಡುತ್ತೇನೆ. ಅಮೃತ ಯೋಜನೆ ಅಡಿಯಲ್ಲಿ ಹುನಗುಂದ ಪಟ್ಟಣಕ್ಕೆ 24×7 ಕುಡಿಯುವ ನೀರಿನ ಯೋಜನೆಯ, 18 ಕೋಟಿ ವೆಚ್ಚದಲ್ಲಿ ಒಳಚರಂಡಿ ಯೋಜನೆ ಅನುಮೋದನೆ ಆಗಿದ್ದು, ರಸ್ತೆ, ಕುಡಿಯುವ ನೀರು ಮೂಲಭೂತ ಸೌಲಭ್ಯೆಗಳಿಗೆ ನಗೋರೋತ್ಥಾನ ಯೋಜನೆಯ ೪ನೇ ಹಂತದಲ್ಲಿ ಕಾಮಗಾರಿ ಆರಂಭವಾಗಿವೆ.

ಬಡವರಿಗೆ ಪುರಸಭೆಯ 24 ಎಕರೆಯಲ್ಲಿ ಗುರುತಿಸಿ 941 ನಿವೇಶನ ಹಕ್ಕು ಪತ್ರಗಳನ್ನು ವಿತರಿಸಲಾಗಿದೆ. ಸರ್ಕಾರದಿಂದ 500 ಮನೆ ನಿರ್ಮಾಣಕ್ಕೆ ಮಂಜುರಾತಿಯನ್ನು ನೀಡಿದ್ದು ಕೇವಲ 6 ತಿಂಗಳಲ್ಲಿ ಎಲ್ಲ ಬಡವರಿಗೆ ನಿರ್ಮಿಸಿ ಕೊಡಲಾಗುವುದು. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಪಟ್ಟಣದ ಜವಾಬ್ದಾರಿಯಿಂದ ಎಲ್ಲ ಸದಸ್ಯರ ವಿಶ್ವಾಸಕ್ಕೆ ತೆಗೆದಕೊಂಡು ಉತ್ತಮ ಆಡಳಿತವನ್ನು ನಡೆಸಬೇಕೆಂದು ಎಂದು ತಿಳಿಸಿದರು.

ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಯ ನಂತರ ಹರ್ಷಗೊಂಡ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಸಿಹಿ ತಿನ್ನಿಸಿ ಗುಲಾಲು ಎರಚಿ, ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ದೊಡಮನಿ, ಮಾಜಿ ಅಧ್ಯಕ್ಷ ಶರಣು ಬೆಲ್ಲದ, ಪರವೇಜ್ ಖಾಜಿ ಉಪಾಧಕ್ಷರಾದ ಗುರುಬಾಯಿ ಹೂಗಾರ, ಶಾಂತಾ ಮೇಲಿನಮನಿ, ಸದಸ್ಯರಾದ ಮಹಮ್ಮದ ದೋಟಿಹಾಳ, ಬಸವರಾಜ ಗೋಣ್ಣಗರ, ಮೈನು ಧನ್ನೂರ, ಚಂದ್ರು ತಳವಾರ, ಯಲ್ಲಪ್ಪ ನಡುವಿನಮನಿ, ಕಮಲವ್ವ ಸಂದಿಮನಿ, ಶರಣಮ್ಮ ಮುಕ್ಕಣ್ಣವರ, ಖೈರುನಬಿ ನಾಯಕ, ಸಂಗಣ್ಣ ಗಂಜೀಹಾಳ, ಮುತ್ತಣ್ಣ ಕಲಗೋಡಿ, ಸುರೇಶ ಹಳಪೇಟಿ, ಗಂಗಣ್ಣ ಇಲಕಲ್ಲ, ರವಿ ಹುಚನೂರ, ಅಮರೇಶ ನಾಗೂರ, ಮೆಹಬೂಬ ಸರಕಾವಸ, ಜಬ್ಬಾರ ಕಲಬುರ್ಗಿ, ವಿಶ್ವನಾಥ ಬ್ಯಾಳಿ, ದೇವು ಡಂಬಳ,ಮಲ್ಲಣ್ಣ ಹೂಗಾರ, ಮುತ್ತು ಲೋಕಾಪೂರ, ಮಲ್ಲಣ್ಣ ಅಠರದಾನಿ ಸೇರಿದಂತೆ ಇತರರು ಇದ್ದರು.

ಇದನ್ನೂ ಓದಿ: ಟಗರಿನ ಕಾಳಗಕ್ಕೆ ವೇದಿಕೆ ಸಜ್ಜು.. “ಯಾರಿವಳ‌ ಗಂಡ” ನಾಟಕ ಉದ್ಘಾಟನೆಗೆ ಶಾಸಕ ಕಾಶಪ್ಪನವರ ಆದಾಪೂರಕ್ಕೆ ಬರ್ತಿದ್ದಾರೆ.. ಮುಂದುವರಿಯುತ್ತಾ ವಾಗ್ವಾದ..?

ಪೊಲೀಸ್ ಬಂದೋಬಸ್ತ್ ನಲ್ಲಿ ಮತದಾನ:

ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಹುನಗುಂದ ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ ನೇತೃತ್ವದಲ್ಲಿ ಸಿಪಿಐ ಸುನೀಲ ಸವದಿ, ಪಿಎಸ್‌ಐಗಳಾದ ಚನ್ನಯ್ಯ ದೇವೂರ, ಎಸ್.ಆರ್.ನಾಯಕ ಅವರು ಪೋಲಿಸ್ ಬಾರಿ ಬೀಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಪುರಸಭೆಯ ಎರಡು ರಸ್ತೆಗಳಿಗೆ ಬ್ಯಾರಿಕೇಟ್ ಅಳವಡಿಸಿ ಹೆಚ್ಚಿನ ಪೋಲಿಸ್ ಸಿಬ್ಬಂದಿಗಳು ನೇಮಿಸಿ ಚುನಾವಣೆಗೆ ಸಂಬಂಧಿಸಿದ ಸಿಬ್ಬಂದಿಗಳನ್ನು ಮಾತ್ರ ಪುರಸಭೆ ಒಳಗಡೆಗೆ ಅವಕಾಶ ನೀಡಿದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ