Big victory for Congress.. Another embarrassment for BJP

ಕಾಂಗ್ರೆಸ್ ದಿಗ್ವಿಜಯ.. BJPಗೆ ಮತ್ತೊಮ್ಮೆ ಮುಖಭಂಗ

ಕಾಂಗ್ರೆಸ್ ದಿಗ್ವಿಜಯ.. BJPಗೆ ಮತ್ತೊಮ್ಮೆ ಮುಖಭಂಗ

ಹುನಗುಂದ: ಇಳಕಲ್ ನಗರಸಭೆ, ಹುನಗುಂದ ಪಿಎಲ್ಡಿ ಬ್ಯಾಂಕ್ ಸೋಲಿನಿಂದ ಕಂಗೆಟ್ಟಿರುವ ಬಿಜೆಪಿಗೆ ಮತ್ತೊಂದು ಸೋಲಿಸಿ ರುಚಿ ತೋರಿಸುವಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಯಶಸ್ಸು ಕಂಡಿದ್ದಾರೆ.

ಹೌದು, ಹುನಗುಂದ ಪುರಸಭೆಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಭಾಗ್ಯಶ್ರೀ ಬಸವರಾಜ ರೇವಡಿ ಹಾಗೂ ಉಪಾಧ್ಯಕ್ಷರಾಗಿ ರಾಜವ್ವ ಹನಮಪ್ಪ ಬಾದಾಮಿ ಮಂಗಳವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿಯೂ ಆದ ತಹಸೀಲ್ದಾರ ನಿಂಗಪ್ಪ ಬಿರಾದಾರ ಹೇಳಿದರು.

Join Our Telegram: https://t.me/dcgkannada

ಪುರುಸಭೆಯ ಒಟ್ಟು 23 ಸದಸ್ಯರ ಬಲವುಳ್ಳ ಕಾಂಗ್ರೆಸ್ ನಿಂದ ಅಧ್ಯಕ್ಷ ಸ್ಥಾನಕ್ಕೆ ಭಾಗ್ಯಶ್ರೀ ರೇವಡಿ ಅವರು ಸ್ಪರ್ಧಿಸಿ ಕಾಂಗ್ರೆಸ್ 12 ಮತಗಳೊಂದಿಗೆ ಬಿಜೆಪಿಯ ಒಬ್ಬರು ಜೆಡಿಎಸ್ ನ ಇಬ್ಬರು ಸದಸ್ಯರು ಹಾಗೂ ಶಾಸಕರ ಒಂದು ಮತವು ಸೇರಿದಂತೆ ಒಟ್ಟು 16 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ ಪ್ರತಿಸ್ಪರ್ಧಿ ಬಿಜೆಪಿಯ ಬಸವ್ವ ಬಸಪ್ಪ ಚಿತ್ತಾವಾಡಗಿ ೮ ಮತಗಳನ್ನ ಪಡೆದು ಪರಭವಗೊಂಡಿದ್ದಾರೆ.

ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಲ್ಲಿ ಪರಿಶಿಷ್ಟ ಜಾತಿ ಮಹಿಳೆ ಇಲ್ಲದಿರುವುದರಿಂದ ಕಾಂಗ್ರೆಸ್ ನಿಂದ ಒಬ್ಬರೇ ನಾಮಪತ್ರ ಸಲ್ಲಿಸಿದ ರಾಜವ್ವ ಹನುಮಪ್ಪ ಬಾದಾಮಿ ಅವಿರೋಧವಾಗಿ ಆಯ್ಕೆಯಾದರು.

ನಂತರ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜೊತೆಗೆ ಪುರಸಭೆಯಲ್ಲಿ ಕಾಂಗ್ರೆಸ್ ಅಧಿಕಾರ ಪಡೆದಿರುವುದರಿಂದ ಪಟ್ಟಣದ ಮೂಲ ಸೌಕರ್ಯ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನವನ್ನು ಸರ್ಕಾರದಿಂದ ತಂದು ಸುಂದರವಾದ ಮಾದರಿಯ ಹುನಗುಂದ ಪಟ್ಟಣವನ್ನು ಮಾಡಲು ಸಂಕಲ್ಪ ಮಾಡುತ್ತೇನೆ. ಅಮೃತ ಯೋಜನೆ ಅಡಿಯಲ್ಲಿ ಹುನಗುಂದ ಪಟ್ಟಣಕ್ಕೆ 24×7 ಕುಡಿಯುವ ನೀರಿನ ಯೋಜನೆಯ, 18 ಕೋಟಿ ವೆಚ್ಚದಲ್ಲಿ ಒಳಚರಂಡಿ ಯೋಜನೆ ಅನುಮೋದನೆ ಆಗಿದ್ದು, ರಸ್ತೆ, ಕುಡಿಯುವ ನೀರು ಮೂಲಭೂತ ಸೌಲಭ್ಯೆಗಳಿಗೆ ನಗೋರೋತ್ಥಾನ ಯೋಜನೆಯ ೪ನೇ ಹಂತದಲ್ಲಿ ಕಾಮಗಾರಿ ಆರಂಭವಾಗಿವೆ.

ಬಡವರಿಗೆ ಪುರಸಭೆಯ 24 ಎಕರೆಯಲ್ಲಿ ಗುರುತಿಸಿ 941 ನಿವೇಶನ ಹಕ್ಕು ಪತ್ರಗಳನ್ನು ವಿತರಿಸಲಾಗಿದೆ. ಸರ್ಕಾರದಿಂದ 500 ಮನೆ ನಿರ್ಮಾಣಕ್ಕೆ ಮಂಜುರಾತಿಯನ್ನು ನೀಡಿದ್ದು ಕೇವಲ 6 ತಿಂಗಳಲ್ಲಿ ಎಲ್ಲ ಬಡವರಿಗೆ ನಿರ್ಮಿಸಿ ಕೊಡಲಾಗುವುದು. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಪಟ್ಟಣದ ಜವಾಬ್ದಾರಿಯಿಂದ ಎಲ್ಲ ಸದಸ್ಯರ ವಿಶ್ವಾಸಕ್ಕೆ ತೆಗೆದಕೊಂಡು ಉತ್ತಮ ಆಡಳಿತವನ್ನು ನಡೆಸಬೇಕೆಂದು ಎಂದು ತಿಳಿಸಿದರು.

ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಯ ನಂತರ ಹರ್ಷಗೊಂಡ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಸಿಹಿ ತಿನ್ನಿಸಿ ಗುಲಾಲು ಎರಚಿ, ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ದೊಡಮನಿ, ಮಾಜಿ ಅಧ್ಯಕ್ಷ ಶರಣು ಬೆಲ್ಲದ, ಪರವೇಜ್ ಖಾಜಿ ಉಪಾಧಕ್ಷರಾದ ಗುರುಬಾಯಿ ಹೂಗಾರ, ಶಾಂತಾ ಮೇಲಿನಮನಿ, ಸದಸ್ಯರಾದ ಮಹಮ್ಮದ ದೋಟಿಹಾಳ, ಬಸವರಾಜ ಗೋಣ್ಣಗರ, ಮೈನು ಧನ್ನೂರ, ಚಂದ್ರು ತಳವಾರ, ಯಲ್ಲಪ್ಪ ನಡುವಿನಮನಿ, ಕಮಲವ್ವ ಸಂದಿಮನಿ, ಶರಣಮ್ಮ ಮುಕ್ಕಣ್ಣವರ, ಖೈರುನಬಿ ನಾಯಕ, ಸಂಗಣ್ಣ ಗಂಜೀಹಾಳ, ಮುತ್ತಣ್ಣ ಕಲಗೋಡಿ, ಸುರೇಶ ಹಳಪೇಟಿ, ಗಂಗಣ್ಣ ಇಲಕಲ್ಲ, ರವಿ ಹುಚನೂರ, ಅಮರೇಶ ನಾಗೂರ, ಮೆಹಬೂಬ ಸರಕಾವಸ, ಜಬ್ಬಾರ ಕಲಬುರ್ಗಿ, ವಿಶ್ವನಾಥ ಬ್ಯಾಳಿ, ದೇವು ಡಂಬಳ,ಮಲ್ಲಣ್ಣ ಹೂಗಾರ, ಮುತ್ತು ಲೋಕಾಪೂರ, ಮಲ್ಲಣ್ಣ ಅಠರದಾನಿ ಸೇರಿದಂತೆ ಇತರರು ಇದ್ದರು.

ಇದನ್ನೂ ಓದಿ: ಟಗರಿನ ಕಾಳಗಕ್ಕೆ ವೇದಿಕೆ ಸಜ್ಜು.. “ಯಾರಿವಳ‌ ಗಂಡ” ನಾಟಕ ಉದ್ಘಾಟನೆಗೆ ಶಾಸಕ ಕಾಶಪ್ಪನವರ ಆದಾಪೂರಕ್ಕೆ ಬರ್ತಿದ್ದಾರೆ.. ಮುಂದುವರಿಯುತ್ತಾ ವಾಗ್ವಾದ..?

ಪೊಲೀಸ್ ಬಂದೋಬಸ್ತ್ ನಲ್ಲಿ ಮತದಾನ:

ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಹುನಗುಂದ ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ ನೇತೃತ್ವದಲ್ಲಿ ಸಿಪಿಐ ಸುನೀಲ ಸವದಿ, ಪಿಎಸ್‌ಐಗಳಾದ ಚನ್ನಯ್ಯ ದೇವೂರ, ಎಸ್.ಆರ್.ನಾಯಕ ಅವರು ಪೋಲಿಸ್ ಬಾರಿ ಬೀಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಪುರಸಭೆಯ ಎರಡು ರಸ್ತೆಗಳಿಗೆ ಬ್ಯಾರಿಕೇಟ್ ಅಳವಡಿಸಿ ಹೆಚ್ಚಿನ ಪೋಲಿಸ್ ಸಿಬ್ಬಂದಿಗಳು ನೇಮಿಸಿ ಚುನಾವಣೆಗೆ ಸಂಬಂಧಿಸಿದ ಸಿಬ್ಬಂದಿಗಳನ್ನು ಮಾತ್ರ ಪುರಸಭೆ ಒಳಗಡೆಗೆ ಅವಕಾಶ ನೀಡಿದ್ದರು.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600